AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ

ಎಂಥ ಕಾಲ ಬಂತೋ ಮಾರ್ರೆ, ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿದ್ದರೆ, ಮತ್ತೊಂದೆಡೆ ಬುದ್ದಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಎರಡು ಸುದ್ದಿ ವಿವರ ಈ ಕೆಳಗಿನಂತಿದೆ.

ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 28, 2023 | 9:42 AM

Share

ತುಮಕೂರು, (ಸೆಪ್ಟೆಂಬರ್, 28): ಕಟ್ಟಡದ ಬಾಡಿಗೆ (Rent) ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು(Tumakuru) ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಎನ್ನುವಾತ ಕಳೆದ ಎರಡೂವರೆ ವರ್ಷಗಳಿಂದ ಕಟ್ಟಡದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ. ನಿನ್ನೆ(ಸೆ.27) ಬಾಡಿಗೆ ಕೇಳಲು ಹೋಗಿದ್ದ ಕಟ್ಟಡದ ಮಾಲೀಕರಾದ ಶಾಹಿನ್ ತಾಜ್ ಮತ್ತು ಗುಜರ್ ಬಾನು ಮೇಲೆ ಹಲ್ಲೆ ಮಾಡಿದ್ದಾರೆ. ಬಾಡಿಗೆ ಕೊಡುವುದಿಲ್ಲ ಎಂದು ಅವಾಜ್ ಹಾಕಿ ಹಲ್ಲೆ ಮಾಡಿದ್ದು, ಇದೀಗ ಗಲಾಟೆ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹಲ್ಲೆ ಸಂಬಂಧ ಮಹಿಳೆಯರು ತಿಪಟೂರು ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಲಿಂಗರಾಜ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ

ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್​ಐ ನಂಜುಂಡ ಶರ್ಮ ಅವರಿಗೆ ಸೇರಿದ ಸ್ಕೂಟಿಗೆ ಸಲೀಂ ಎನ್ನುವಾತ ಬೆಂಕಿ ಹಚ್ಚಿದ್ದಾನೆ. ಅಣ್ಣ ತಮ್ಮಂದಿರ ಗಲಾಟೆ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಈ ಸಂಬಂಧ ಎಎಸ್​ಐ ನಂಜುಂಡ ಶರ್ಮ ಅವರು ಆಸ್ಪತ್ರೆಗೆ ಹೋಗಿ ಬುದ್ದಿವಾದ ಹೇಳಿದ್ದರು. ಇದರಿಂದ ಕುಪಿತಗೊಂಡ ಸಲೀಂ ಎನ್ನುವಾತ ನಂಜುಂಡ ಶರ್ಮ ಅವರ ನಿವಾಸದ ಬಳಿ ಹೋಗಿ ಸ್ಕೂಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:40 am, Thu, 28 September 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ