AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ

ಎಂಥ ಕಾಲ ಬಂತೋ ಮಾರ್ರೆ, ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿದ್ದರೆ, ಮತ್ತೊಂದೆಡೆ ಬುದ್ದಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಎರಡು ಸುದ್ದಿ ವಿವರ ಈ ಕೆಳಗಿನಂತಿದೆ.

ಎಂಥ ಕಾಲ ಬಂತೋ ಮಾರ್ರೆ! ಬಾಡಿಗೆ ಕೇಳಿದ್ದಕ್ಕೆ ಹಲ್ಲೆ, ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 28, 2023 | 9:42 AM

Share

ತುಮಕೂರು, (ಸೆಪ್ಟೆಂಬರ್, 28): ಕಟ್ಟಡದ ಬಾಡಿಗೆ (Rent) ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು(Tumakuru) ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಎನ್ನುವಾತ ಕಳೆದ ಎರಡೂವರೆ ವರ್ಷಗಳಿಂದ ಕಟ್ಟಡದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ. ನಿನ್ನೆ(ಸೆ.27) ಬಾಡಿಗೆ ಕೇಳಲು ಹೋಗಿದ್ದ ಕಟ್ಟಡದ ಮಾಲೀಕರಾದ ಶಾಹಿನ್ ತಾಜ್ ಮತ್ತು ಗುಜರ್ ಬಾನು ಮೇಲೆ ಹಲ್ಲೆ ಮಾಡಿದ್ದಾರೆ. ಬಾಡಿಗೆ ಕೊಡುವುದಿಲ್ಲ ಎಂದು ಅವಾಜ್ ಹಾಕಿ ಹಲ್ಲೆ ಮಾಡಿದ್ದು, ಇದೀಗ ಗಲಾಟೆ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹಲ್ಲೆ ಸಂಬಂಧ ಮಹಿಳೆಯರು ತಿಪಟೂರು ಠಾಣೆಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಲಿಂಗರಾಜ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ಐ ಸ್ಕೂಟಿಗೆ ಬೆಂಕಿ

ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್​ಐ ನಂಜುಂಡ ಶರ್ಮ ಅವರಿಗೆ ಸೇರಿದ ಸ್ಕೂಟಿಗೆ ಸಲೀಂ ಎನ್ನುವಾತ ಬೆಂಕಿ ಹಚ್ಚಿದ್ದಾನೆ. ಅಣ್ಣ ತಮ್ಮಂದಿರ ಗಲಾಟೆ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಈ ಸಂಬಂಧ ಎಎಸ್​ಐ ನಂಜುಂಡ ಶರ್ಮ ಅವರು ಆಸ್ಪತ್ರೆಗೆ ಹೋಗಿ ಬುದ್ದಿವಾದ ಹೇಳಿದ್ದರು. ಇದರಿಂದ ಕುಪಿತಗೊಂಡ ಸಲೀಂ ಎನ್ನುವಾತ ನಂಜುಂಡ ಶರ್ಮ ಅವರ ನಿವಾಸದ ಬಳಿ ಹೋಗಿ ಸ್ಕೂಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:40 am, Thu, 28 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ