AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

ದೇಶದ ಭದ್ರತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಸಂದೇಶ ರವಾನಿಸುತ್ತಿದ್ದ ತುಮಕೂರಿನ ಶ್ರೀರಾಮನಗರದ ಅಲ್ಲಾಬಕ್ಷು ಎಂಬಾ ಯುವಕನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿದೇಶಿ ಉಗ್ರ ಸಂಘಟನೆ, ಉಗ್ರನೊಂದಿಗೆ ಎಕ್ಸ್ ಖಾತೆ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ.

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ
ಸಾಂದರ್ಭಿಕ ಚಿತ್ರImage Credit source: Getty Images
ಜಗದೀಶ ಬಿ.
| Edited By: |

Updated on:Jun 05, 2026 | 10:02 AM

Share

ತುಮಕೂರು, ಜೂನ್ 5: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ (Tumakur) ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ.

ಮುಖ್ಯಾಂಶಗಳು

  • ಕೇಂದ್ರ ತನಿಖಾ ಸಂಸ್ಥೆಗಳ ರಹಸ್ಯ ಮಾಹಿತಿಯ ಮೇರೆಗೆ ತುಮಕೂರಿನ ಕ್ಯಾತಸಂದ್ರದಲ್ಲಿ ಶಂಕಿತ ಯುವಕನ ಬಂಧನ.
  • ಸಾಮಾಜಿಕ ಜಾಲತಾಣದ ಖಾತೆ ಮೂಲಕ ವಿದೇಶಿ ಉಗ್ರನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಅಲ್ಲಾಬಕ್ಷು.
  • ದೇಶದ ಭದ್ರತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪ್ರಚೋದನಾತ್ಮಕ ಚಾಟಿಂಗ್; ನೆರವು ನೀಡಿದ ಮತ್ತೋರ್ವನಿಗಾಗಿ ಪೊಲೀಸರಿಂದ ತೀವ್ರ ಶೋಧ.

ಎಕ್ಸ್ ಖಾತೆ ಮೂಲಕ ಉಗ್ರರ ಜೊತೆ ಲಿಂಕ್

ಬಂಧಿತ ಆರೋಪಿಯನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ.

20 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿದೇಶಿ ಶಂಕಿತ ಉಗ್ರನೊಬ್ಬ ಪರಿಚಯವಾಗಿದ್ದ. ಇನ್ಸ್ಟಾಗ್ರಾಮ್​ನಲ್ಲಿ ಶಂಕಿತ ಮಾಡುತ್ತಿದ್ದ ಪೋಸ್ಟ್​ಗೆ ಈತ ಲೈಕ್ ಮಾಡುವುದರ ಜೊತೆಗೆ ಮೆಸೇಜ್​ ಸಹ ಮಾಡುತ್ತಿದ್ದ. ನಂತರ ಇವರಿಬ್ಬರ ಸಂಪರ್ಕ ಎಕ್ಸ್​ನಲ್ಲಿ ಮುಂದುವರೆದಿದ್ದು, ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದರು ಎಂಬ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಕದಡುವ ನಿಟ್ಟಿನಲ್ಲಿ ಈತ ಸರಣಿ ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಹಾಗೂ ದೇಶ ವಿರೋಧಿ ಚಟುವಟಿಕೆಗಳ ಕುರಿತು ಚಾಟ್ ನಡೆಸುತ್ತಿದ್ದ ಎಂಬ ಆರೋಪವಿದೆ.

ಕೇಂದ್ರ ತನಿಖಾ ಸಂಸ್ಥೆಗಳ ನಿಗಾ: ಮತ್ತೊಬ್ಬನಿಗಾಗಿ ಬಲೆ

ಅಲ್ಲಾಬಕ್ಷು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿದ್ದ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ದೇಶ ವಿರೋಧಿ ಚಾಟಿಂಗ್‌ಗಳ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳು ತೀವ್ರ ನಿಗಾವಹಿಸಿದ್ದವು. ಆತನ ಲಿಂಕ್‌ಗಳನ್ನು ಪತ್ತೆಹಚ್ಚಿದ ಬಳಿಕ, ತನಿಖಾ ಸಂಸ್ಥೆಗಳು ರಾಜ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಗುರುವಾರ ರಾತ್ರಿ ಕ್ಯಾತಸಂದ್ರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, ಭಯೋತ್ಪಾದಕರ ವಿರುದ್ಧ ಮಾಕ್‌ ಡ್ರಿಲ್‌ ಹೇಗಿತ್ತು ನೋಡಿ

ಪ್ರಸ್ತುತ ಈ ಬಂಧಿತ ಯುವಕನಿಗೆ ಕೃತ್ಯದಲ್ಲಿ ಸಾಥ್ ನೀಡಿದ ಹಾಗೂ ಆತನ ಜೊತೆ ನಿಕಟ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆತನಿಗಾಗಿ ತುಮಕೂರು ನಗರ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Fri, 5 June 26

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ