ನನ್ನಲ್ಲಿರೋದು ಅಸಲಿ ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಅದು ಕೃತ್ರಿಮ ಮತ್ತು ಭಕ್ತರೊಬ್ಬರು ಉಡುಗೊರೆಯಾಗಿ ನೀಡಿದ್ದು: ಧನಂಜಯ ಗುರೂಜಿ

ಜಾತ್ರೆ ಸಮಯದಲ್ಲಿ ಭಕ್ತಾದಿಗಳಿಗೆ ಊಟ, ನೀರು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ದೇವಸ್ಥಾನ ಸಮಿತಿ ವತಿಯಿಂದ ಕಲ್ಪಿಸಲಾಗುತ್ತದೆ ಹಾಗೆಯೇ, ವ್ಯಾಪಾರಿಗಳಿಗೆ ಸ್ಟಾಲ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಮಾಡಿಕೊಡಲಾಗುವುದು ಎಂದು ಗುರೂಜಿ ಹೇಳಿದರು. ಹಾಗೆ ಸ್ಟಾಲ್ ಹಾಕಿದವರ ಪೈಕಿ ಒಬ್ಬ ವ್ಯಾಪಾರಿ ತನಗೆ ಹುಲಿ ಉಗುರಿನಂತೆ ಕಾಣುವ ಆ್ಯಂಟಿಕ್ ಪೀಸನ್ನು ಉಡುಗೊರೆಯಾಗಿ ನೀಡಿದ್ದರು ಎಂದು ಗುರೂಜಿ ಹೇಳಿದರು.   

ನನ್ನಲ್ಲಿರೋದು ಅಸಲಿ ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಅದು ಕೃತ್ರಿಮ ಮತ್ತು ಭಕ್ತರೊಬ್ಬರು ಉಡುಗೊರೆಯಾಗಿ ನೀಡಿದ್ದು: ಧನಂಜಯ ಗುರೂಜಿ
|

Updated on: Oct 25, 2023 | 5:56 PM

ತುಮಕೂರು: ಹುಲಿ ಉಗುರು ಧರಿಸಿದ ಆರೋಪಕ್ಕೆ ಒಳಗಾಗಿರುವ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ (Dhananjaya Guruji) ಟಿವಿ9 ಕನ್ನಡ ವಾಹಿನಿಯ ತುಮಕೂರು ವರದಿಗಾರನಿಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಗುರೂಜಿ ಹೇಳುವ ಪ್ರಕಾರ ಅವರ ಬಳಿ ಇರೋದು ಅಸಲಿ ಹುಲಿ ಉಗುರಿನ ಪೆಂಡಂಟ್ ಅಲ್ಲವೇ ಅಲ್ಲ, ಅದು ಕೃತ್ರಿಮ (fake) ಆಗಿದ್ದು ಭಕ್ತರೊಬ್ಬರು (ವ್ಯಾಪಾರಿ) ಅವರಿಗೆ 2018 ರಲ್ಲಿ ಗಿಫ್ಟ್ ರೂಪದಲ್ಲಿ ನೀಡಿದ್ದಾರೆ. ಕಳೆದ 17-18 ವರ್ಷಗಳಿಂದ ಬಿದನಗೆರೆ ಶನೈಶ್ವರ ದೇವಸ್ಥಾನ ಜಾತ್ರೆಯನ್ನು ಆಯೋಜಿಲಾಗುತ್ತದೆ ಮತ್ತು ಸಾವಿರಾರು ಭಕ್ತರು ಜಾತ್ರೆಗೆ ಆಗಮಿಸುತ್ತಾರೆ ಎಂದು ಹೇಳಿದ ಧನಂಜಯ ಗುರೂಜಿ, ಜಾತ್ರೆ ಸಮಯದಲ್ಲಿ ಭಕ್ತಾದಿಗಳಿಗೆ ಊಟ, ನೀರು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ದೇವಸ್ಥಾನ ಸಮಿತಿ ವತಿಯಿಂದ ಕಲ್ಪಿಸಲಾಗುತ್ತದೆ ಹಾಗೆಯೇ, ವ್ಯಾಪಾರಿಗಳಿಗೆ (vendors) ಸ್ಟಾಲ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಮಾಡಿಕೊಡಲಾಗುವುದು ಎಂದು ಗುರೂಜಿ ಹೇಳಿದರು. ಹಾಗೆ ಸ್ಟಾಲ್ ಹಾಕಿದವರ ಪೈಕಿ ಒಬ್ಬ ವ್ಯಾಪಾರಿ ತನಗೆ ಹುಲಿ ಉಗುರಿನಂತೆ ಕಾಣುವ ಆ್ಯಂಟಿಕ್ ಪೀಸನ್ನು ಉಡುಗೊರೆಯಾಗಿ ನೀಡಿದ್ದರು ಎಂದು ಗುರೂಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

 

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ