ಕಾಂಗ್ರೆಸ್​ ಪಕ್ಷದ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧಿಸುತ್ತಿದ್ದಾರೆ: ಗೃಹ ಸಚಿವ ಡಾ ಜಿ ಪರಮೇಶ್ವರ್​​

ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ ಹಕ್ಕು ನೀಡಿದ್ದರು. ಯಾರು ಕಾಂಗ್ರೆಸ್​ನ ಯೋಜನೆಗಳ ಲಾಭ ಪಡೆದುಕೊಂಡಿದ್ದಾರೋ ಅವರೇ ನಮ್ಮನ್ನ ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ತುಮಕೂರಿನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷದ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧಿಸುತ್ತಿದ್ದಾರೆ: ಗೃಹ ಸಚಿವ ಡಾ ಜಿ ಪರಮೇಶ್ವರ್​​
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 20, 2023 | 2:55 PM

ತುಮಕೂರು, ಆಗಸ್ಟ್​ 20: ಯಾರು ಕಾಂಗ್ರೆಸ್​ನ ಯೋಜನೆಗಳ ಲಾಭ ಪಡೆದುಕೊಂಡಿದ್ದಾರೋ ಅವರೇ ನಮ್ಮನ್ನ ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ ಹಕ್ಕು ನೀಡಿದ್ದರು. ಈಗ ಅವರೇ ನಮ್ಮನ್ನು ವಿರೋಧ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಡವರ ಪರವಾಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಪರ ಅಂತಾ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಕರೆ ನೀಡಿದ ಸಚಿವ ಡಾ.ಜಿ.ಪರಮೇಶ್ವರ್

ಅಲ್ಪಸಂಖ್ಯಾತರು ಈ ದೇಶದಲ್ಲಿ ಹುಟ್ಟಿಲ್ವಾ. ಕೋಟ್ಯಂತರ ಅಲ್ಪಸಂಖ್ಯಾತರಿದ್ದಾರೆ, ಅವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು. ಜೆಡಿಎಸ್​ ನವರು ಜಾತ್ಯತೀತ ಎಂದು ಇಟ್ಟುಕೊಂಡು ಬದಲಾಗಿದ್ದಾರೆ. ದೆಹಲಿಗೆ ಕರೆದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಂಕಲ್ಪ ಮಾಡಬೇಕು. ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಗೆಲ್ಲಬೇಕು. ನೀವು ಈ ಕಚೇರಿಯಿಂದ ಹೊರಬೀಳುವಾಗ ಸಂಕಲ್ಪ ಮಾಡಿಕೊಂಡು ಹೋಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಸಮಾಜ ವಿರೋಧಿ ನೀತಿಗಳನ್ನು ಜನರಿಗೆ ತಿಳಿಸಬೇಕು. ಬಿಜೆಪಿಯ ನಾಲ್ಕು ವರ್ಷದ ದುರಾಡಳಿತ ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆ ಬರುವಂತೆ ಮಾಡಿದೆ. ಕಳೆದ ಸರ್ಕಾರದಲ್ಲಿ ಯಾವ ಅಭಿವೃದ್ಧಿ ಕಾರ್ಯವೂ ಆಗಿಲ್ಲ. ಶೋಷಿತ ಸಮುದಾಯಗಳ ಮೇಲೆತ್ತುವ ಕೆಲಸ ಆಗಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ: ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಪತ್ರ ಬರೆದವರನ್ನು ಪತ್ತೆ ಮಾಡಿದ ಸಿಐಡಿ, ಇಬ್ಬರು ವಶಕ್ಕೆ

ಬಡವರನ್ನು ಶಕ್ತಿವಂತರನ್ನಾಗಿ ಮಾಡಬೇಕು ಎಂದು ಐದು ಗ್ಯಾರಂಟಿ ಅನುಷ್ಠಾನಕ್ಕೆ ತರಲಾಗಿದೆ. ಹಣ ಖರ್ಚಾಗುತ್ತಿದೆ, ಅಭಿವೃದ್ಧಿಗೆ ದುಡ್ಡಿಲ್ಲ ಎನ್ನುವರು ಸಾಮಾನ್ಯ ಜನರ ವಿರೋಧಿಗಳು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರು ಸಂಕಲ್ಪ ಮಾಡಬೇಕು. ನನಗೆ ಒಂದು ಜವಾಬ್ದಾರಿ ನೀಡಲಾಗಿದೆ.

ಟೀಕೆ ಮಾಡುವವರು ಮಾಡುತ್ತಾರೆ

ಕರ್ನಾಟಕದಲ್ಲಿ ವಿನೂತವಾದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಡವರ, ಹಿಂದುಳಿದವರ, ಅಲ್ಪಸಂಖ್ಯಾತರ ಶೋಷಿತರ ನೋವು ಸರ್ಕಾರಕ್ಕೆ ಬಹಳ ಚೆನ್ನಾಗಿ ಅರ್ಥವಾಗಿದೆ. ಆ ಬಡವರನ್ನ ಶಕ್ತಿವಂತನಾಗಿ ಮಾಡಲು ನಮ್ಮ ಸರ್ಕಾರ ಹೊರಟಿದೆ. ಈ ವೇಳೆ ಹಲವು ಟೀಕೆ ಟಿಪ್ಪಣಿ ಬರಬಹುದು. ಬಡವರ ಏಳಿಗೆ ಆದಾಗ ಮಾತ್ರ ಅದಕ್ಕೆ ಉತ್ತರ ಸಿಗಲಿದೆ. ಶೋಷಿತರನ್ನ ಮೇಲೆ ತರುವ ಭಾಗ್ಯವನ್ನ ಕೊಟ್ಟಿದ್ದೇವೆ. ಟೀಕೆ ಮಾಡುವವರು ಮಾಡುತ್ತಾರೆ ಎಂದರು.

ತುಮಕೂರು ಜಿಲ್ಲೆ ಅಭಿವೃದ್ಧಿಗೆ ಬದ್ಧ

ತುಮಕೂರು ಬಹಳ ವಿಶೇಷವಾದ ಜಿಲ್ಲೆ. ಆಧುನಿಕವಾಗಿ ಮುಂದುವರಿಯಲೇಬೇಕು. ತುಮಕೂರು ಕೇವಲ ಬೆಂಗಳೂರಿನಿಂದ 70 ಕಿಲೋಮೀಟರ್​ನಲ್ಲಿದೆ. ಆದ್ದರಿಂದ ಅನಿವಾರ್ಯವಾಗಿ ಅಭಿವೃದ್ಧಿ ಮಾಡಲೇಬೇಕು. ನಾವು ಅಭಿವೃದ್ಧಿ ಮಾಡೇ ಮಾಡುತ್ತೇವೆ ಅಂತ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ