AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು

ತುಮಕೂರಿನ ವಿವಿಧ ಸ್ಥಳಗಳಲ್ಲಿ ಮೂರು ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.ಈ 3 ಪ್ರಕರಣಗಳ ವಿವರ ಇಲ್ಲಿದೆ.

Tumakuru News: ಪ್ರತ್ಯೇಕ ಘಟನೆ: ತುಮಕೂರಿನಲ್ಲಿ 3 ಅಪಘಾತ, ಮೂವರು ಸಾವು
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Aug 16, 2023 | 11:01 AM

Share

ತುಮಕೂರು, ಅಗಸ್ಟ್ ( 16): ರಸ್ತೆ ಅಪಘಾತಗಳಲ್ಲಿ  (Road Accidents) ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಬಗ್ಗೆ ಪೊಲೀಸರು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಅಪಘಾತಗಳು ಕಡಿಮೆಯಾಗುತ್ತಿಲ್ಲ. ಇದಕ್ಕೆ ಪೂರಕವೆಂಬಂತೆ ಶನಿವಾರ (ಆಗಸ್ಟ್ 12) ಕರ್ನಾಟಕದಲ್ಲಿ ಬರೋಬ್ಬರಿ 32 ಜನರು ಈ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ತಮಕೂರಿನಲ್ಲಿ (Tumakuru) ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ ಮೂವರು ಮೃತಪಟ್ಟಿದ್ದಾರೆ.  ಈ ಮೂರು ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ ನೋಡಿ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ತಮಕೂರಿನ ಮದ್ದೇನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಕೋರಾ ನಿವಾಸಿಯಾದ ಶಂಕರ್ (21) ಮೃತಪಟ್ಟ ವ್ಯಕ್ತಿಯಾಗಿದ್ದು, ಕೋರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ

ತಿಮ್ಮರಾಜನಹಳ್ಳಿ ಬಳಿ ಕಾರು ಪಲ್ಟಿ

ತಮಕೂರಿನ ತಿಮ್ಮರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ. ಬೆಂಗಳೂರಿನಿಂದ ಚಿತ್ರದುರ್ಗ ತೆರಳುತ್ತಿದ್ದ ಮಾರ್ಗ ಮಧ್ಯೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 4 ಜನರ ಪೈಕಿ ಪ್ರಕಾಶ್ ಎನ್ನುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ಗಂಭೀರ ಗಾಯಗೊಂಡಿದ್ದು, ಉಳಿದ ಇಬ್ಬರು ಪ್ರಯಾಣಿಕರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೋರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲಿಯೇ ಮೃತ್ಯು

ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಬಳಿ ಕಾರು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗಂಗಹುಚ್ಚಯ್ಯ(54) ಎನ್ನುವಾತ ನಿನ್ನೆ (ಆಗಸ್ಟ್ 15) ತಡರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದಿದ್ದು, ಗಂಗಹುಚ್ಚಯ್ಯ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಕುಣಿಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ