AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮೂವುರ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾದ ಸಹೋದರಿಯರು
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 19, 2023 | 8:40 PM

Share

ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ (Suicide)  ಶರಣಾಗಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು (Sisters). ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಪ್ರಕರಣ ಇಂದು(ಜನವರಿ 19) ಬೆಳಕಿಗೆ ಬಂದಿದೆ.

ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್​ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್​ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:32 pm, Thu, 19 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ