AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮೂವುರ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾದ ಸಹೋದರಿಯರು
TV9 Web
| Edited By: |

Updated on:Jan 19, 2023 | 8:40 PM

Share

ತುಮಕೂರು: ಮೂವರು ಅನಾಥ ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ (Suicide)  ಶರಣಾಗಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆ ಮಾಡಿಕೊಂಡ ಸೋದರಿಯರು (Sisters). ಕಳೆದ 9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕೊಳೆತ ವಾಸನೆ ಬಂದ ಬಳಿಕ ಸ್ಥಳೀಯರು ಗಮನಿಸಿದಾಗ ಪ್ರಕರಣ ಇಂದು(ಜನವರಿ 19) ಬೆಳಕಿಗೆ ಬಂದಿದೆ.

ಹಲವು ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್​ಪಿ ಸಿದ್ದಾರ್ಥ್ ಗೋಯೆಲ್, ಸಿಪಿಐ ನಿರ್ಮಲಾ, ಪಿಎಸ್​ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:32 pm, Thu, 19 January 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ