AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಸಾವು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ಶನಿವಾರ ಗ್ರಾಮದ ದೇವರ ಮಹೋತ್ಸವ ಆಯೋಜಿಸಲಾಗಿತ್ತು. ಉತ್ಸವದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ದರು. ಉತ್ಸವದ ಬಳಿಕ ಗ್ರಾಮದ 14 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು. ಇದರಲ್ಲಿ ಮೂವರು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ತುಮಕೂರು: ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಸಾವು
ಅಸ್ವಸ್ಥಗೊಂಡವರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Aug 27, 2024 | 9:16 AM

Share

ತುಮಕೂರು, ಆಗಸ್ಟ್​ 26: ಮಧುಗಿರಿ (Madhugiri) ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಮೃತ ದುರ್ದೈವಿಗಳು. ಶ್ರಾವಣ ಮಾಸ (Shravana Masa) ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು. ಪ್ರಸಾದ ಸೇವಿದ್ದರಿಂದ 11 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

ಅಸ್ವಸ್ಥರಿಗೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಮೇಲ್ನೋಟಕ್ಕೆ ಪ್ರಸಾದ ಸೇವಿಸಿದ್ದರಿಂದ ದುರ್ಘಟನೆ ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮಕ್ಕೆ ತಹಶಿಲ್ದಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥ; ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹೇಳಿದ್ದಿಷ್ಟು

ಕಲುಷಿತ ನೀರು ಸೇವಿಸಿ ಮೂವರು ಸಾವು

ಇದೇ ವರ್ಷ ಜೂನ್​ನಲ್ಲಿ ಮಧುಗಿರಿ ತಾಲೂಕಿನ ಚೆನ್ನೇಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದರು. ಚೆನ್ನೇಹಳ್ಳಿ ಗ್ರಾಮದ ಓವರ್​ ಹೆಡ್​ ಟ್ಯಾಂಕ್​ ಮತ್ತು ಶುದ್ಧ ನೀರಿನ ಘಟಕದಿಂದ ಪೂರೈಸುವ ನೀರು ಸೇವಿಸಿ ವಾಂತಿಮ ಭೇದಿಯಿಂದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಸಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಮೂವರು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Tue, 27 August 24

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ