AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಫೆಬ್ರವರಿ 22 ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿತ್ತು. ಇದೀಗ, ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ
ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Feb 27, 2024 | 2:40 PM

Share

ತುಮಕೂರು, ಫೆ.27: ಜಿಲ್ಲೆಯ ಪಾವಗಡ (Pavagada) ತಾಲೂಕು ಆಸ್ಪತ್ರೆಯಲ್ಲಿ ಫೆಬ್ರವರಿ 22 ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು (Tumkur) ಡಿಹೆಚ್​ಓ ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ.ಪೂಜಾ ಅವರನ್ನು ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿದ ಹಿನ್ನೆಲೆ ಸೇವೆಯಿಂದ ವಜಾ ಗೊಳಿಸಲಾಗಿದೆ. ಇಂದಿನಿಂದಲೇ (ಫೆಬ್ರವರಿ 27) ಅನ್ವಯಗೊಳ್ಳುವಂತೆ ವಜಾಗೊಳಿಸಲಾಗಿದೆ.

ಏನಿದು ಪ್ರಕರಣ?

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಫೆ.22 ರಂದು ಒಟ್ಟು ಏಳು ಮಹಿಳೆಯರು ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪೈಕಿ ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ ಮಾಡಿಸಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದರು.

ಇದನ್ನೂ ಓದಿ; Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಫೆಬ್ರವರಿ 24 ರಂದು ಮೃತಪಟ್ಟಿದ್ದರು. ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯ ಸಂಪೂರ್ಣ ಹದಗೆಟ್ಟ ಹಿನ್ನೆಲೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಕೊನೆಯುಸಿರೆಳೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ