AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಫೆಬ್ರವರಿ 22 ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿತ್ತು. ಇದೀಗ, ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ
ಶಸ್ತ್ರಚಿಕಿತ್ಸೆ ವೈಫಲ್ಯದಿಂದ ಮೂವರು ಮಹಿಳೆಯರು ಸಾವು: ಗುತ್ತಿಗೆ ವೈದ್ಯೆ ಸೇರಿ ಮೂವರು ಸೇವೆಯಿಂದ ವಜಾ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Feb 27, 2024 | 2:40 PM

Share

ತುಮಕೂರು, ಫೆ.27: ಜಿಲ್ಲೆಯ ಪಾವಗಡ (Pavagada) ತಾಲೂಕು ಆಸ್ಪತ್ರೆಯಲ್ಲಿ ಫೆಬ್ರವರಿ 22 ರಂದು ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು (Tumkur) ಡಿಹೆಚ್​ಓ ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ.ಪೂಜಾ ಅವರನ್ನು ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿದ ಹಿನ್ನೆಲೆ ಸೇವೆಯಿಂದ ವಜಾ ಗೊಳಿಸಲಾಗಿದೆ. ಇಂದಿನಿಂದಲೇ (ಫೆಬ್ರವರಿ 27) ಅನ್ವಯಗೊಳ್ಳುವಂತೆ ವಜಾಗೊಳಿಸಲಾಗಿದೆ.

ಏನಿದು ಪ್ರಕರಣ?

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಫೆ.22 ರಂದು ಒಟ್ಟು ಏಳು ಮಹಿಳೆಯರು ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಪೈಕಿ ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ ಮಾಡಿಸಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ 30 ವರ್ಷದ ಅನಿತಾ, ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದರು.

ಇದನ್ನೂ ಓದಿ; Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ ಚಿಲಿತ್ಸೆ ಫಲಕಾರಿಯಾಗದೆ ಫೆಬ್ರವರಿ 24 ರಂದು ಮೃತಪಟ್ಟಿದ್ದರು. ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯ ಸಂಪೂರ್ಣ ಹದಗೆಟ್ಟ ಹಿನ್ನೆಲೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ. 25ರಂದು ಅವರು ಕೊನೆಯುಸಿರೆಳೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್