AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ನಿಜ ಕನಸುಗಳು: ಈ ನಾಟಕ ಪ್ರದರ್ಶನದಿಂದ ಬಿಜೆಪಿಗೆ ಲಾಭವೂ ಇಲ್ಲ, ಕಾಂಗ್ರೆಸ್​ಗೆ ನಷ್ಟವೂ ಇಲ್ಲ: ಅಡ್ಡಂಡ ಕಾರ್ಯಪ್ಪ

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದಿಂದ ಬಿಜೆಪಿಗೆ ಲಾಭ ಆಗುತ್ತದೆ, ಕಾಂಗ್ರೆಸ್​ಗೆ ನಷ್ಟ ಆಗುತ್ತದೆ ಎಂದು ಲೆಕ್ಕ ಹಾಕಿ ಕೂರುವ ವ್ಯಾಪಾರಿ ನಾನಲ್ಲ. ನಾನೊಬ್ಬ ರಂಗಭೂಮಿ ಕಲಾವಿದ. ನಾಟಕ ಮಾಡೋದಷ್ಟೇ ನನ್ನ ಕೆಲಸ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದರು.

ಟಿಪ್ಪು ನಿಜ ಕನಸುಗಳು: ಈ ನಾಟಕ ಪ್ರದರ್ಶನದಿಂದ ಬಿಜೆಪಿಗೆ ಲಾಭವೂ ಇಲ್ಲ, ಕಾಂಗ್ರೆಸ್​ಗೆ ನಷ್ಟವೂ ಇಲ್ಲ: ಅಡ್ಡಂಡ ಕಾರ್ಯಪ್ಪ
ಟಿಪ್ಪು ನಿಜ ಕನಸುಗಳು (ಎಡಚಿತ್ರ) ಅಡ್ಡಂಡ ಕಾರ್ಯಪ್ಪ (ಬಲಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 3:10 PM

Share

ತುಮಕೂರು: ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಹಾಕಿದವರು ಸೂಕ್ತ ದಾಖಲೆ ಒದಗಿಸಲಾಗಿದೆ ಪಲಾಯನ ಮಾಡಿದರು. ಹಿಂದಿನ ಸರ್ಕಾರಗಳು ಟಿಪ್ಪುವನ್ನು ಹೀರೋ ಎಂದು ಬಿಂಬಿಸಿವೆ. ಟಿಪ್ಪು (Tipu Sultan) ನಿಜವಾದ ಖಳನಾಯಕ. ಆತನ ನಿಜ ಕನಸುಗಳನ್ನು ನಾಟಕದಲ್ಲಿ ಅನಾವರಣ ಮಾಡಲಾಗಿದೆ. ಸತ್ಯದ ಅನಾವರಣವೇ ಈ ನಾಟಕದ ಉದ್ದೇಶ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೊಲೀಸರ ಸಲಹೆಯಂತೆ ಒಳಾಂಗಣ ವೇದಿಕೆಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ. ನಾನು ಶಾಂತಿ ಪ್ರಿಯ. ಶಾಂತಿಯುತವಾಗಿ ಪ್ರದರ್ಶನ ಆಗಲಿ ಎನ್ನುವುದು ನನ್ನ ಆಶಯ. ಇದರಿಂದ ಬಿಜೆಪಿಗೆ ಲಾಭ ಆಗುತ್ತದೆ, ಕಾಂಗ್ರೆಸ್​ಗೆ ನಷ್ಟ ಆಗುತ್ತದೆ ಎಂದು ಲೆಕ್ಕ ಹಾಕಿ ಕೂರುವ ವ್ಯಾಪಾರಿ ನಾನಲ್ಲ. ನಾನೊಬ್ಬ ರಂಗಭೂಮಿ ಕಲಾವಿದ. ನಾಟಕ ಮಾಡೋದಷ್ಟೇ ನನ್ನ ಕೆಲಸ ಎಂದು ಹೇಳಿದರು.

ಖಳನಾಯಕನನ್ನ ಖಳನಾಯಕನಾಗಿ ತೋರಿಸಬೇಕು

ಇದು ಬಿಜೆಪಿಯ ಕಥಾನಕ ಅಲ್ಲ, ಇದು ಟಿಪ್ಪು ಕಥಾನಕ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಖಳನಾಯಕನನ್ನ ಖಳನಾಯಕನಾಗಿ ತೋರಿಸಬೇಕು. ಟಿಪ್ಪು ನಾಲ್ಕು ದೇವಸ್ಥಾನಗಳಿಗೆ ದತ್ತಿ ಕೊಟ್ಟು, 80 ದೇವಸ್ಥಾನಗಳನ್ನ ಒಡೆದುಹಾಕಿದ. ಹೀಗಾಗಿ 80 ದೇವಸ್ಥಾನಗಳನ್ನ ಒಡೆದಿದ್ದನ್ನು ಹೇಳಬೇಕಾಗುತ್ತೆ. ಸಾವಿರಾರು ಜನರನ್ನು ಕೊಂದಿರುವುದನ್ನು, ಮತಾಂತರ ಮಾಡಿದ್ದನ್ನೂ ಹೇಳಬೇಕಾಗುತ್ತೆ. ಆ ಸಮುದಾಯದ ಕೆಲವರ ಮನಸ್ಥಿತಿಯೇ ಹಾಗಿದೆ. ಅವರು ಶಿಶುನಾಳ ಶರೀಫರನ್ನು ಗೌರವಿಸಲಾರರು. ಅವರು ಮತಾಂಧ ಟಿಪ್ಪುವನ್ನೇ ಗೌರವಿಸ್ತಾರೆ.

ಇದನ್ನೂ ಓದಿ: ಮತ್ತೆ ಮತ್ತೆ ಟಿಪ್ಪು ಗದ್ದಲ! ಕಿತ್ತೂರು ಸಂಸ್ಥಾನಕ್ಕೆ ಸಂಬಂಧವಿಲ್ಲದ ಟಿಪ್ಪು ಸನ್ನಿವೇಶವನ್ನು ರಂಗಾಯಣ ನಾಟಕದಿಂದ ತೆಗೆಯಿರಿ- ಹಿಂದೂ ಸಂಘಟನೆಗಳ ಒತ್ತಾಯ

ನಮ್ಮ ಸಂಸ್ಕೃತಿಗೆ ಏಟು ಕೊಡುವುದೇ ಆಗಿನ ಎಡ ಪಂಥೀಯವರ ಉದ್ದೇಶ

ಯಾಕಂದ್ರೆ ಹಿಂದುಸ್ತಾನವನ್ನ ಇಸ್ಲಾಂ ರಾಷ್ಟ್ರ ಮಾಡಲು ಹೊರಟವರೇ ಅವರಿಗೆ ಪ್ರೀತಿ ಪಾತ್ರರು. ಭಾವೈಕ್ಯತೆಯನ್ನ ಸಾರಿದ ಶಿಶುನಾಳ ಶರೀಫರು, ಅಬ್ದುಲ್ ಕಲಾಂ ಅವರಂತವರು ಅವರಿಗೆ ಪ್ರೀತಿ ಪಾತ್ರರಲ್ಲ. ಉರಿಗೌಡ ಮತ್ತು ನಂಜೇಗೌಡ ಇತಿಹಾಸದ ವ್ಯಕ್ತಿಗಳೇ. ಅದಕ್ಕೆ ನನ್ನ ಬಳಿ ದಾಖಲೆಗಳಿವೆ. ಗಿರೀಶ್ ಕಾರ್ನಾಡ್ ಅವರು ಉದ್ದೇಶಪೂರ್ವಕವಾಗಿಯೇ ಟಿಪ್ಪುವನ್ನ ಹೀರೋ ಮಾಡಿದ್ದಾರೆ. ತುಘಲಕ್​ನನ್ನ ನಮ್ಮ ಚರಿತ್ರೆ ಹುಚ್ಚು ದೊರೆ ಎಂದರೆ, ಕಾರ್ನಾಡ್ ಅವರು ಆದರ್ಶ ರಾಜ ಎಂದು ಹೇಳ್ತಾರೆ. ಔರಂಗಜೇಬ್ ಆದರ್ಶ ರಾಜ ಅಂತಾರೆ. ಈ ಮೂಲಕ ನಮ್ಮ ಸಂಸ್ಕೃತಿಗೆ ಏಟು ಕೊಡುವುದೇ ಆಗಿನ ಎಡ ಪಂಥೀಯ ಕಾಂಗ್ರೆಸ್​ನ ಉದ್ದೇಶವಾಗಿತ್ತು ಎಂದು ಕಿಡಿಕಾರಿದರು.

ಅವರ ಎಂಎಲ್ಸಿ ಪೋಸ್ಟ್ ಅಲುಗಾಡುತ್ತಿದೆ

ಕಾರ್ಯಪ್ಪ ಎಂಎಲ್ಸಿ ಆಗಲು ಈ ಪುಸ್ತಕ ಬರೆದಿದ್ದಾರೆ ಎಂಬ ಎಚ್ ವಿಶ್ವನಾಥ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಯಿಂದ ಆಯ್ಕೆಯಾಗಿ ಕಾಂಗ್ರೆಸ್ ಮನೆಯಲ್ಲಿ ಊಟ ಮಾಡುವ ಹಳ್ಳಿಹಕ್ಕಿಯಲ್ಲ ಅದು ಹಾರೋ ಹಕ್ಕಿ. ಆ ಹಾರೋಹಕ್ಕಿಗೆ ಒಂದು ರಾತ್ರಿ ಕನಸು ಬಿದ್ದಿದೆ. ನನ್ನ ಸ್ಥಾನಕ್ಕೆ ಅಡ್ಡಂಡ ಬರ್ತಾರೆ ಅಂತಾ. ಯಾವಾಗ ಆ ಕನಸು ಬಿತ್ತೋ ಮೈಸೂರು ಪತ್ರಕರ್ತರನ್ನ ಭೇಟಿಯಾದ್ರು. ಅವರು ಕೋಗಿಲೆ ಇದ್ದಂತೆ, ಬೇರೆಯವರು ಕಟ್ಟಿದ ಗೂಡಲ್ಲಿ ಮೊಟ್ಟೆ ಇಡ್ತಾರೆ. ಅವರ ಎಂಎಲ್ಸಿ ಪೋಸ್ಟ್ ಅಲುಗಾಡುತ್ತಿದೆ ಎಂದು ಅಡ್ಡಂಡ ಕಾರ್ಯಪ್ಪ ಹರಿಹಾಯ್ದರು.

ಇದನ್ನೂ ಓದಿ: ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಜೀವಬೆದರಿಕೆ; ಪೊಲೀಸ್​ ಠಾಣೆಗೆ ದೂರು

ಸಾರ್ವಜನಿಕರಲ್ಲಿ ಅಡ್ಡಂಡ ಮನವಿ

ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ಮಾರ್ಚ್ 2ರಂದು ಸಂಜೆ 6 ಗಂಟೆಗೆ ಟಿಪ್ಪು ನಿಜ ಕನಸುಗಳು ನಾಟಕ ನಾಟಕ ಪ್ರದರ್ಶನವಾಗುತ್ತಿದೆ. ಪ್ರತಿ ಟಿಕೆಟ್​ಗೆ 100ರೂ ನಿಗದಿ ಮಾಡಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಅಡ್ಡಂಡ ಮನವಿ ಮಾಡಿದರು. ಇನ್ನು ಪುಸ್ತಕ ಮಾರಾಟಕ್ಕೆ ಅನುಮತಿ ಸಿಕ್ಕಿದೆ. ಸುಮಾರು 12 ಆವ್ರತ್ತಿಗಳು ಮುದ್ರಣ ಆಗಿದೆ. 40 ಸಾವಿರ ಪ್ರತಿಗಳು ಮಾರಾಟ ಆಗಿವೆ. ಇಷ್ಟು ಕಡಿಮೆ ಅವಧಿಯಲ್ಲಿ ಪ್ರತಿಗಳು ಮಾರಾಟವಾಗಿರುವುದು ಚಾರಿತ್ರಿಕ ದಾಖಲೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Wed, 22 February 23

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ