AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ! ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಹಿಳೆ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಬರಲು ಆ್ಯಂಬುಲೆನ್ಸ್ಗಾಗಿ ಪರದಾಡಿದ್ದಾರೆ. ಆ್ಯಂಬುಲೆನ್ಸ್ ಸಿಗದೆ ಕಾರಿನಲ್ಲಿ ಪಾವಗಡ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ತುಮಕೂರಿನಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ! ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಕಾರಿನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ
TV9 Web
| Edited By: |

Updated on:Mar 12, 2022 | 8:58 AM

Share

ತುಮಕೂರು: ಹೆರಿಗೆಗೆ ಬಂದ ತಾಯಿ-ಮಗು ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ವೈದ್ಯರ (Doctor) ನಿರ್ಲಕ್ಷ್ಯದಿಂದ ಆಸ್ಪತ್ರೆಗೆ ಬಂದ ವಾಹನದಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ತುಮಕೂರು (Tumkur) ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆ ಮುಂದೆ ಈ ಘಟನೆ ಸಂಭವಿಸಿದೆ. ಹೆರಿಗೆ ನೋವಿನಿಂದ ಗರ್ಭಿಣಿ ಮಹಿಳೆ ಆಸ್ಪತ್ರೆಗೆ ಬಂದಿದ್ದರು. ಆದರೆ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಅಂತ ಆರೋಪ ಕೇಳಿಬಂದಿದೆ.

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಮಹಿಳೆ ಮತ್ತು ಕುಟುಂಬಸ್ಥರು ಆಸ್ಪತ್ರೆಗೆ ಬರಲು ಆ್ಯಂಬುಲೆನ್ಸ್​ಗಾಗಿ ಪರದಾಡಿದ್ದಾರೆ. ಆ್ಯಂಬುಲೆನ್ಸ್ ಸಿಗದೆ ಕಾರಿನಲ್ಲಿ ಪಾವಗಡ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಪಾವಗಡ ತಾಲೂಕಿನ ಮಡಕಶಿರಾ ಹೋಬಳಿಯ ಪಿಲ್ಲಕುಂಟೆಯ ಗ್ರಾಮದ ಲಕ್ಷ್ಮೀದೇವಿ ಮಗುವಿಗೆ ಜನ್ಮ ನೀಡಿದ ಮಹಿಳೆ.

ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಿಳೆಗೆ ಚಿಕಿತ್ಸೆ ನೀಡಲಾಗಿದೆ. ತಾಯಿ-ಮಗುವನ್ನು ಸಿಬ್ಬಂದಿ ಒಳಗೆ ಕರೆದೊಯ್ದಿದ್ದಾರೆ. ಕಳೆದ ವಾರವೂ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾಗಿದ್ದರು. ಈಗ ಮತ್ತೆ ಆಸತ್ರೆಯಲ್ಲಿ ಮತ್ತೊಂದು ಎಡವಟ್ಟಾಗಿದೆ.

ಮನೆ ಬೀಗ ಒಡೆದು ಒಡವೆ ಕಳ್ಳತನ: ಮನೆ ಬೀಗ ಒಡೆದು ಒಡವೆ ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಮಾಕ್ಷಮ್ಮ ಶ್ರೀನಿವಾಸ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಒಡವೆ ಕಳುವಾಗಿದೆ. ಕಳ್ಳರು ಕಳ್ಳತನ ಬಳಿಕ ಯಥಾವತ್ತಾಗಿ ಬೀಗ ಹಾಕಿ ಹೋಗಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ

ಇದನ್ನೂ ಓದಿ

ನಮ್ಮೊಂದಿಗೆ ವಿಲೀನಗೊಳ್ಳುವ ಸಮಯ ಬಂದಿದೆ: ಕಾಂಗ್ರೆಸ್​​ಗೆ ಟಿಎಂಸಿ ಸಲಹೆ

ನಾಪತ್ತೆಯಾಗಿದ್ದ ಮಗನ ಪತ್ತೆಗೆ ನೆರವಾಯ್ತು ಆಧಾರ್ ಕಾರ್ಡ್: ಬೆಂಗಳೂರಿನಲ್ಲಿ ಕಳೆದುಹೋಗಿದ್ದ ಮಗ ನಾಗಪುರದಲ್ಲಿ ಪತ್ತೆ

Published On - 8:54 am, Sat, 12 March 22

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ