AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವ ಮೊದಲೇ ಟೋಲ್ ವಸೂಲಿ, ಸಿಡಿದೆದ್ದ ವಾಹನ ಸವಾರರು

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ‌ಮುಂದಾಗಿದ್ದು, ಸಾರ್ವಜನಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವ ಮೊದಲೇ ಟೋಲ್ ವಸೂಲಿ, ಸಿಡಿದೆದ್ದ ವಾಹನ ಸವಾರರು
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 15, 2023 | 2:28 PM

Share

ತುಮಕೂರು: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ‌ಮುಂದಾಗಿದ್ದಾರೆ. ಹೌದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಜತಾದ್ರಿ ಪುರ ಬಳಿ ಟೋಲ್​ ಸಂಗ್ರಹ ಮಾಡಲಾಗುತ್ತಿದ್ದು, ಇನ್ನೂ ಸಮರ್ಪಕವಾಗಿ ರಸ್ತೆ, ಬ್ರಿಡ್ಜ್​ಗಳು ಆಗಿಲ್ಲ, ಸರ್ವೀಸ್ ರಸ್ತೆ ಸೇರಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 40, 60 ರೂ. ಯಿಂದ ಬೃಹತ್ ವಾಹನಗಳಿಗೆ 400 ರೂ. ವರೆಗೂ ಟೋಲ್ ವಸೂಲಿಗೆ ಮುಂದಾಗಿದ್ದಾರೆ.

ಸಿದ್ಧತೆಯಿಲ್ಲದೇ ಟೋಲ್ ಸಂಗ್ರಹ, ಟೆಕ್ನಿಕಲ್ ಸಮಸ್ಯೆಯಿಂದ ವಾಹನ ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ NHAI ಟೋಲ್‌ ಸಂಗ್ರಹ ಆರಂಭಿಸಿದೆ. ನಿನ್ನೆಯಷ್ಟೇ (ಮಾರ್ಚ್ 14) ಆರಂಭವಾದ ಟೋಲ್ ಸಂಗ್ರಹಕ್ಕೆ ಅನೇಕ ವಿರೋಧಗಳು ವ್ಯಕ್ತವಾಗಿದ್ದವು. ಎಕ್ಸ್‌ಪ್ರೆಸ್‌ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗಿದ್ದರು. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್‌ ತಗೋತಿರಿ ಎಂದು ಅವಾಜ್ ಹಾಕುತ್ತಿದ್ದರು.

ಇದನ್ನೂ ಓದಿ:Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 15 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇನ್ನು ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆಯಲ್ಲಿರುವ ಟೋಲ್ ಪ್ಲಾಜಾ ಬಳಿ ಕನ್ನಡಪರ ಸಂಘಟನೆ, ಸಮಾನ ಮನಸ್ಕ ವಕೀಲರು ಪ್ರತಿಭಟನೆ ನಡೆಸಿದ್ದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿ ಕಪ್ಪು ಬಾವುಟ ಮತ್ತು ಹಾಲಿನ ಕ್ಯಾನ್ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರ, NHAI ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿತ್ತು. ಸದ್ಯ ಟೋಲ್​ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇ ‌ದಶಪಥ ರಸ್ತೆ ಅಲ್ಲ

ಟೋಲ್ ದರ ಬಗ್ಗೆ ಈಗಾಗಲೇ ಪತ್ರಿಕೆಗಳ ಮೂಲಕ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ಗೆಜೆಟ್​​ನಲ್ಲೂ ಟೋಲ್ ಬಗ್ಗೆ​​ ಮಾಹಿತಿ ಇದೆ. 20 ಕಿಲೋ ಮೀಟರ್ ಒಳಗೆ ಇರುವವರಿಗೆ ತಿಂಗಳ ಪಾಸ್ ಇದೆ. ಸ್ಥಳೀಯರಿಗೆ ಡಿಸ್ಕೌಂಟ್ ಇದೆ. ರೋಡ್ ಟೂಲ್ ಪಾಲಿಸಿ ಪ್ರಕಾರ ತಿಳಿಸಿದ್ದೇವೆ. ಕೆಲವು ಕಡೆ ಹೈಕೋರ್ಟ್ ನಿಂದ ತಡೆ ಇತ್ತು. ಇದೀಗ ಅದು ಕ್ಲಿಯರ್ ಆಗಿದೆ. ಕಾನೂನು ತೊಡಕು ಹಿನ್ನೆಲೆ ಸರ್ವಿಸ್ ರಸ್ತೆ ಮಾಡಲು ಆಗಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ