AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವ ಮೊದಲೇ ಟೋಲ್ ವಸೂಲಿ, ಸಿಡಿದೆದ್ದ ವಾಹನ ಸವಾರರು

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ‌ಮುಂದಾಗಿದ್ದು, ಸಾರ್ವಜನಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವ ಮೊದಲೇ ಟೋಲ್ ವಸೂಲಿ, ಸಿಡಿದೆದ್ದ ವಾಹನ ಸವಾರರು
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Mar 15, 2023 | 2:28 PM

Share

ತುಮಕೂರು: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇನ್ನೂ ಸಂಪೂರ್ಣ ಕಾಮಗಾರಿ ಮುಗಿಯದಿದ್ದರೂ ಇದೀಗ ಟೋಲ್ ಸಂಗ್ರಹಕ್ಕೆ ‌ಮುಂದಾಗಿದ್ದಾರೆ. ಹೌದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಜತಾದ್ರಿ ಪುರ ಬಳಿ ಟೋಲ್​ ಸಂಗ್ರಹ ಮಾಡಲಾಗುತ್ತಿದ್ದು, ಇನ್ನೂ ಸಮರ್ಪಕವಾಗಿ ರಸ್ತೆ, ಬ್ರಿಡ್ಜ್​ಗಳು ಆಗಿಲ್ಲ, ಸರ್ವೀಸ್ ರಸ್ತೆ ಸೇರಿ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 40, 60 ರೂ. ಯಿಂದ ಬೃಹತ್ ವಾಹನಗಳಿಗೆ 400 ರೂ. ವರೆಗೂ ಟೋಲ್ ವಸೂಲಿಗೆ ಮುಂದಾಗಿದ್ದಾರೆ.

ಸಿದ್ಧತೆಯಿಲ್ಲದೇ ಟೋಲ್ ಸಂಗ್ರಹ, ಟೆಕ್ನಿಕಲ್ ಸಮಸ್ಯೆಯಿಂದ ವಾಹನ ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ NHAI ಟೋಲ್‌ ಸಂಗ್ರಹ ಆರಂಭಿಸಿದೆ. ನಿನ್ನೆಯಷ್ಟೇ (ಮಾರ್ಚ್ 14) ಆರಂಭವಾದ ಟೋಲ್ ಸಂಗ್ರಹಕ್ಕೆ ಅನೇಕ ವಿರೋಧಗಳು ವ್ಯಕ್ತವಾಗಿದ್ದವು. ಎಕ್ಸ್‌ಪ್ರೆಸ್‌ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗಿದ್ದರು. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್‌ ತಗೋತಿರಿ ಎಂದು ಅವಾಜ್ ಹಾಕುತ್ತಿದ್ದರು.

ಇದನ್ನೂ ಓದಿ:Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 15 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇನ್ನು ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆಯಲ್ಲಿರುವ ಟೋಲ್ ಪ್ಲಾಜಾ ಬಳಿ ಕನ್ನಡಪರ ಸಂಘಟನೆ, ಸಮಾನ ಮನಸ್ಕ ವಕೀಲರು ಪ್ರತಿಭಟನೆ ನಡೆಸಿದ್ದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿ ಕಪ್ಪು ಬಾವುಟ ಮತ್ತು ಹಾಲಿನ ಕ್ಯಾನ್ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರ, NHAI ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿತ್ತು. ಸದ್ಯ ಟೋಲ್​ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇ ‌ದಶಪಥ ರಸ್ತೆ ಅಲ್ಲ

ಟೋಲ್ ದರ ಬಗ್ಗೆ ಈಗಾಗಲೇ ಪತ್ರಿಕೆಗಳ ಮೂಲಕ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ಗೆಜೆಟ್​​ನಲ್ಲೂ ಟೋಲ್ ಬಗ್ಗೆ​​ ಮಾಹಿತಿ ಇದೆ. 20 ಕಿಲೋ ಮೀಟರ್ ಒಳಗೆ ಇರುವವರಿಗೆ ತಿಂಗಳ ಪಾಸ್ ಇದೆ. ಸ್ಥಳೀಯರಿಗೆ ಡಿಸ್ಕೌಂಟ್ ಇದೆ. ರೋಡ್ ಟೂಲ್ ಪಾಲಿಸಿ ಪ್ರಕಾರ ತಿಳಿಸಿದ್ದೇವೆ. ಕೆಲವು ಕಡೆ ಹೈಕೋರ್ಟ್ ನಿಂದ ತಡೆ ಇತ್ತು. ಇದೀಗ ಅದು ಕ್ಲಿಯರ್ ಆಗಿದೆ. ಕಾನೂನು ತೊಡಕು ಹಿನ್ನೆಲೆ ಸರ್ವಿಸ್ ರಸ್ತೆ ಮಾಡಲು ಆಗಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ