AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಸಮೀಪ ಹೆದ್ದಾರಿ ಮೇಲೆ ಹರಿಯುತ್ತಿದೆ ನೀರು: ಬೆಂಗಳೂರು-ಪುಣೆ ಮಾರ್ಗದಲ್ಲಿ 10 ಕಿಮೀ ಟ್ರಾಫಿಕ್ ಜಾಮ್

ಈ ಹೆದ್ದಾರಿಯು ರಾಜಧಾನಿ ಬೆಂಗಳೂರಿನೊಂದಿಗೆ ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಬಹುತೇಕ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ.

ತುಮಕೂರು ಸಮೀಪ ಹೆದ್ದಾರಿ ಮೇಲೆ ಹರಿಯುತ್ತಿದೆ ನೀರು: ಬೆಂಗಳೂರು-ಪುಣೆ ಮಾರ್ಗದಲ್ಲಿ 10 ಕಿಮೀ ಟ್ರಾಫಿಕ್ ಜಾಮ್
ತುಮಕೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿರುವ ವಾಹನಗಳು
TV9 Web
| Edited By: |

Updated on:Oct 20, 2022 | 10:59 AM

Share

ತುಮಕೂರು: ತಾಲ್ಲೂಕಿನ ಹೆಬ್ಬಾಕ ಕೆರೆಯ ಕೋಡಿ ನೀರು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಊರುಕೇರಿ ಗ್ರಾಮದ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕೋಡಿ ನೀರು ಹರಿಯುತ್ತಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ತುಮಕೂರು-ಬೆಂಗಳೂರು ಮಾರ್ಗದ ಕ್ಯಾತ್ಸಂದ್ರದಿಂದ ತುಮಕೂರು-ಶಿರಾ ಮಾರ್ಗದ ಕೋರಾ ಗ್ರಾಮದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸುಮಾರು 10 ಕಿಮೀ ಉದ್ದಕ್ಕೆ ವಾಹನ ಸಾಲುಗಟ್ಟಿರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಈ ಹೆದ್ದಾರಿಯು ರಾಜಧಾನಿ ಬೆಂಗಳೂರಿನೊಂದಿಗೆ ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಬಹುತೇಕ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಅಷ್ಟೇ ಅಲ್ಲದೆ, ಬೆಳಗಾವಿ-ಪುಣೆ ಮಾರ್ಗವಾಗಿ ಉತ್ತರ ಭಾರತದೆಡೆಗೆ ತೆರಳುವ ವಾಹನಗಳು ಸಹ ಇದೇ ಮಾರ್ಗವನ್ನು ಬಳಸುತ್ತವೆ. ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಚಾಲಕರು ಮತ್ತು ವಾಹನ ಸವಾರರು ಪರದಾಡುತ್ತಿದ್ದಾರೆ. ಸಂಚಾರ ವ್ಯವಸ್ಥೆಯನ್ನು ಮತ್ತೆ ತಹಬದಿಗೆ ತರಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಊರುಕೆರೆ-ಹೆಬ್ಬಾಕ ನಡುವಣ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮದ ಆಂಜನೇಯ ದೇಗುಲ, ಕೆರೆ ಅಂಚಿನ‌ ಮನೆಗಳು ಮುಳುಗಿವೆ. ಹೆಬ್ಬಾಕ, ನರಸಾಪುರ, ಊರುಕೆರೆ ಭಾಗದ ಬಹುತೇಕ ಅಡಿಕೆ ಹಾಗೂ ತೆಂಗು ತೋಟಗಳು ಜಲಾವೃತಗೊಂಡಿವೆ.

ಕೆರೆಗೆ ಬಿದ್ದ ಕಾರು

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಲಕ್ಕೂರು ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಕೆರೆಗೆ ಬಿದ್ದ ಕಾರನ್ನು ಹೊರ ತೆಗೆದಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನದಿಯಲ್ಲಿ ಕಾರು ಪತ್ತೆ, ಮಾಲೀಕರಿಗಾಗಿ ಹುಡುಕಾಟ

ರಾಮನಗರ: ಕನಕಪುರ ತಾಲ್ಲೂಕಿನ ತಾಮಸಂದ್ರ ಬಳಿ ಅರ್ಕಾವತಿ‌ ನದಿಯಲ್ಲಿ ಕಾರು ತೇಲಿಬಂದಿದೆ. ನದಿಯಲ್ಲಿ ತೇಲಿ ಹೋಗುತ್ತಿದ್ದ ಕಾರ್ ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಕನಕಪುರ ಗ್ರಾಮಾಂತರ ಪೊಲೀಸರು ಕ್ರೇನ್ ಮೂಲಕ ಕಾರು ಮೇಲೆತ್ತಿದರು. ಇದೀಗ ಕಾರಿನ ಮಾಲೀಕನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಮಳೆಯಿಂದ ಹೂವಿನ ಬೆಳೆ ನಾಶ

ನಿರಂತರ ಮಳೆ ಹಾಗೂ ಮೋಡಕವಿದ ವಾತಾವರಣದ ಹಿನ್ನೆಲೆಯಲ್ಲಿ ಹೂವಿನ ಬೆಳೆ ಹಾಳಾಗುತ್ತಿದೆ. ಇದರ ಜೊತೆಗೆ ದಸರಾ ನಂತರ ಯಾವುದೇ ಮುಖ್ಯ ಹಬ್ಬಗಳು ಇಲ್ಲದ ಕಾರಣ ಹೂವಿನ ಬೆಲೆ ಕಡಿಮೆಯಾಗಿದೆ. ಹೂವಿಗೆ ಬೆಲೆ ಇಲ್ಲದ ಕಾರಣ ರೈತರು ಕಂಗಾಲಾಗಿದ್ದಾರೆ. ಕೋಲಾರದ ಹೊರವಲಯದ ರಸ್ತೆಬದಿಯಲ್ಲಿ ರೈತರು ಹೂ ಸುರಿದಿದ್ದಾರೆ.

Published On - 10:08 am, Thu, 20 October 22

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ