AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ

ಸಾರಿಗೆ ನೌಕರರ ಮುಷ್ಕರ ವೇಳೆ ಅಮಾನತುಗೊಂಡವರನ್ನು, ವಜಾಗೊಂಡವರನ್ನು ಪುನಃ ಕೆಲಸಕ್ಕೆ ನಿಯೋಜನೆ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.

ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 07, 2021 | 9:47 PM

Share

ತುಮಕೂರು: ಸಿನಿಮಾದಲ್ಲಿ ಹೀರೋ ಎಷ್ಟೇ ಒಳ್ಳೆಯ ಅಭಿನಯ ಮಾಡಿ ಜನರನ್ನು ಆಕರ್ಷಿಸಿದರೂ ಅದರಲ್ಲಿ ನಿರ್ದೇಶಕರ ಪಾತ್ರ ಮುಖ್ಯ. ಸಿನಿಮಾದಲ್ಲಿ ಹೀರೋಗಿಂತ ದೊಡ್ಡ ಶಕ್ತಿ ನಿರ್ದೇಶಕರಿಗೆ ಇರುತ್ತದೆ. ನಮ್ಮ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೀರೋ ಇದ್ದಂತೆ. ಬಿ.ಎಸ್.ಯಡಿಯೂರಪ್ಪ ನಿರ್ದೇಶಕರಿದ್ದಂತೆ ಎಂದು ಸಚಿವ ಶ್ರೀರಾಮುಲು ವ್ಯಾಖ್ಯಾನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಇದನ್ನು ನಮ್ಮ ಕೇಂದ್ರ ಗೃಹ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಹಾಗಂತ ಯಡಿಯೂರಪ್ಪರನ್ನು ಸೈಡ್‌ಲೈನ್ ಮಾಡಿಲ್ಲ. ಪಕ್ಷಕ್ಕೆ ಬಿ.ಎಸ್.ಯಡಿಯೂರಪ್ಪ ದೊಡ್ಡ ಶಕ್ತಿ ಇದ್ದಂತೆ. ಬಿಎಸ್‌ವೈ ಮಾರ್ಗದರ್ಶನದಲ್ಲೇ ಚುನಾವಣೆ ನಡೆಯುತ್ತದೆ ಎಂದು ಅವರು ತಿಳಿಸಿದರು.

ಕೊವಿಡ್ ವೇಳೆ ಕಾರ್ಯನಿರತರಾಗಿ ಸೋಂಕಿಗೆ ತುತ್ತಾಗಿ ಮೃತಪಟ್ಟ ಸಾರಿಗೆ ನೌಕರಿಗೆ ಪರಿಹಾರ ಒದಗಿಸಲಾಗುವುದು. ಸಾರಿಗೆ ನೌಕರರ ಮುಷ್ಕರ ವೇಳೆ ಅಮಾನತುಗೊಂಡವರನ್ನು, ವಜಾಗೊಂಡವರನ್ನು ಪುನಃ ಕೆಲಸಕ್ಕೆ ನಿಯೋಜನೆ ಮಾಡಿಕೊಳ್ಳುವ ಚಿಂತನೆ ನಡೆದಿದೆ. ವರ್ಗಾವಣೆಗೊಂಡವರನ್ನೂ ಪುನಃ ಮೂಲ ಡಿಪೋಗೆ ನಿಯೋಜನೆ ಮಾಡುವ ಕುರಿತು ಮಾತುಕತೆ ನಡೆದಿದೆ. ಕೆಎಸ್ಆರ್​ಟಿಸಿ ಅಧ್ಯಕ್ಷರ ಬಳಿ ಈ ಬಗ್ಗೆ ಚರ್ಚಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

ಏಕಾಂಗಿ ಪ್ರವಾಸ ಕೈಬಿಟ್ಟ ಮಾಜಿ ಸಿಎಂ ಯಡಿಯೂರಪ್ಪ; ಬಿಜೆಪಿ ನಿಯಮಗಳೇ ಒಬ್ಬರೇ ಪ್ರವಾಸ ಮಾಡಲು ಅಡ್ಡಿ!

BS Yediyurappa: ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ

(Transport Minister B Sriramulu says CM Bommai is hero BS Yediyurappa is director in our Karnataka Government)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್