AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ

ಸಾರಿಗೆ ನೌಕರರ ಮುಷ್ಕರ ವೇಳೆ ಅಮಾನತುಗೊಂಡವರನ್ನು, ವಜಾಗೊಂಡವರನ್ನು ಪುನಃ ಕೆಲಸಕ್ಕೆ ನಿಯೋಜನೆ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.

ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 07, 2021 | 9:47 PM

Share

ತುಮಕೂರು: ಸಿನಿಮಾದಲ್ಲಿ ಹೀರೋ ಎಷ್ಟೇ ಒಳ್ಳೆಯ ಅಭಿನಯ ಮಾಡಿ ಜನರನ್ನು ಆಕರ್ಷಿಸಿದರೂ ಅದರಲ್ಲಿ ನಿರ್ದೇಶಕರ ಪಾತ್ರ ಮುಖ್ಯ. ಸಿನಿಮಾದಲ್ಲಿ ಹೀರೋಗಿಂತ ದೊಡ್ಡ ಶಕ್ತಿ ನಿರ್ದೇಶಕರಿಗೆ ಇರುತ್ತದೆ. ನಮ್ಮ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೀರೋ ಇದ್ದಂತೆ. ಬಿ.ಎಸ್.ಯಡಿಯೂರಪ್ಪ ನಿರ್ದೇಶಕರಿದ್ದಂತೆ ಎಂದು ಸಚಿವ ಶ್ರೀರಾಮುಲು ವ್ಯಾಖ್ಯಾನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಇದನ್ನು ನಮ್ಮ ಕೇಂದ್ರ ಗೃಹ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಹಾಗಂತ ಯಡಿಯೂರಪ್ಪರನ್ನು ಸೈಡ್‌ಲೈನ್ ಮಾಡಿಲ್ಲ. ಪಕ್ಷಕ್ಕೆ ಬಿ.ಎಸ್.ಯಡಿಯೂರಪ್ಪ ದೊಡ್ಡ ಶಕ್ತಿ ಇದ್ದಂತೆ. ಬಿಎಸ್‌ವೈ ಮಾರ್ಗದರ್ಶನದಲ್ಲೇ ಚುನಾವಣೆ ನಡೆಯುತ್ತದೆ ಎಂದು ಅವರು ತಿಳಿಸಿದರು.

ಕೊವಿಡ್ ವೇಳೆ ಕಾರ್ಯನಿರತರಾಗಿ ಸೋಂಕಿಗೆ ತುತ್ತಾಗಿ ಮೃತಪಟ್ಟ ಸಾರಿಗೆ ನೌಕರಿಗೆ ಪರಿಹಾರ ಒದಗಿಸಲಾಗುವುದು. ಸಾರಿಗೆ ನೌಕರರ ಮುಷ್ಕರ ವೇಳೆ ಅಮಾನತುಗೊಂಡವರನ್ನು, ವಜಾಗೊಂಡವರನ್ನು ಪುನಃ ಕೆಲಸಕ್ಕೆ ನಿಯೋಜನೆ ಮಾಡಿಕೊಳ್ಳುವ ಚಿಂತನೆ ನಡೆದಿದೆ. ವರ್ಗಾವಣೆಗೊಂಡವರನ್ನೂ ಪುನಃ ಮೂಲ ಡಿಪೋಗೆ ನಿಯೋಜನೆ ಮಾಡುವ ಕುರಿತು ಮಾತುಕತೆ ನಡೆದಿದೆ. ಕೆಎಸ್ಆರ್​ಟಿಸಿ ಅಧ್ಯಕ್ಷರ ಬಳಿ ಈ ಬಗ್ಗೆ ಚರ್ಚಿಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

ಏಕಾಂಗಿ ಪ್ರವಾಸ ಕೈಬಿಟ್ಟ ಮಾಜಿ ಸಿಎಂ ಯಡಿಯೂರಪ್ಪ; ಬಿಜೆಪಿ ನಿಯಮಗಳೇ ಒಬ್ಬರೇ ಪ್ರವಾಸ ಮಾಡಲು ಅಡ್ಡಿ!

BS Yediyurappa: ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ

(Transport Minister B Sriramulu says CM Bommai is hero BS Yediyurappa is director in our Karnataka Government)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!