Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ

Tumakuru News: ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ.

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ
ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ
Follow us
TV9 Web
| Updated By: ganapathi bhat

Updated on:Oct 20, 2021 | 8:56 PM

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ಅಕ್ಟೋಬರ್ 22 ರಂದು ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ಇಂದು (ಅಕ್ಟೋಬರ್ 20) ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ ಮಾಡಲಾಗಿದೆ. ನಿನ್ನೆ ಮಂಜು ಭಾರ್ಗವ್ ಎಂಬವರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಇಂದು ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ವರೆಗೂ ಬಂದ್ ಮಾಡುವಂತೆ ಕಡೆ ನೀಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. 

ಚರ್ಚ್​ನಲ್ಲಿ ಮತಾಂತರ ಆರೋಪ; ಆರೋಪಿಯನ್ನು ಬಂಧಿಸುವಂತೆ ಅರವಿಂದ್ ಬೆಲ್ಲದ್, ಹಿಂದೂ ಪರ ಸಂಘಟನೆ ಪ್ರತಿಭಟನೆ ಹುಬ್ಬಳ್ಳಿಯ ಚರ್ಚ್​ ಒಂದರಲ್ಲಿ ಮತಾಂತರ ಯತ್ನ ಆರೋಪ ವಿಚಾರಕ್ಕೆ ಸಂಬಂಧಿಸಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಕ್ಟೋಬರ್ 17ರಂದು ಪ್ರತಿಭಟನೆ ನಡೆಸಿದ್ದರು. ಮತಾಂತರ ಮಾಡುತ್ತಿದ್ದವರನ್ನು ಬಂಧಿಸುವುದಾಗಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದರು. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಹೇಳಿಕೆ ನೀಡಿದ್ದರು.

ಆಯುಕ್ತರ ಭರವಸೆಯಂತೆ ನಾವು ಪ್ರತಿಭಟನೆ ಕೈಬಿಡುತ್ತಿದ್ದೇವೆ. ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೇನೆ. ಕೇಂದ್ರ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಒಬ್ಬ ಮತಾಂತರಿ ಬಂಧಿಸುವಂತೆ ಹೋರಾಡುವ ಸ್ಥಿತಿ ಬಂದಿದೆ. ಬೀದಿಗಿಳಿದು ಹೋರಾಡುವ ಸ್ಥಿತಿ ಬಂದಿದ್ದು ನಮ್ಮ ದೌರ್ಭಾಗ್ಯ ಎಂದು ರಾಜ್ಯ ಸರ್ಕಾರ, ಪೊಲೀಸ್ ವ್ಯವಸ್ಥೆ ಬಗ್ಗೆ ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ತುಮಕೂರು: ಸ್ತ್ರೀಯರ ಶೌಚಾಲಯದಲ್ಲಿ ವಿಡಿಯೋ ಮಾಡುತ್ತಿದ್ದವನಿಗೆ ಗೂಸಾ

ಇದನ್ನೂ ಓದಿ: ಮತಾಂತರ ಆರೋಪ: ಹುಬ್ಬಳ್ಳಿಯ ಚರ್ಚ್​ನಲ್ಲಿ ಕುಳಿತು ಭಜನೆ ಮಾಡಿ ಪ್ರತಿಭಟಿಸಿದ ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು

Published On - 8:26 pm, Wed, 20 October 21

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ