AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​

ತುಮಕೂರು ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​
ತುಮಕೂರು ಪೊಲೀಸರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Nov 26, 2023 | 2:41 PM

Share

ತುಮಕೂರು ನ.26: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ಪೊಲೀಸ್​ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ದರೋಡೆ, 21 ಸುಲಿಗೆ, 19 ಸರಗಳ್ಳತನ, 95 ಮನೆಗಳ್ಳತನ, 195 ಸಾಮಾನ್ಯ ಪ್ರಕರಣ ಸೇರಿದಂತೆ ಒಟ್ಟು 333 ಪ್ರಕರಣಗಳು ದಾಖಲಾಗಿದ್ದವು.

ವಶಕ್ಕೆ ಪಡೆಯಲಾದ ವಸ್ತುಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ‌ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು. ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ತುಮಕೂರು ಎಸ್.ಪಿ ಅಶೋಕ್ ಕೆವಿ‌, ಎಎಸ್ ಪಿ ಮರಿಯಪ್ಪ, ಡಿವೈಎಸ್ ಪಿಗಳಾದ ಚಂದ್ರಶೇಖರ್, ಶೇಖರ್, ಲಕ್ಷ್ಮಿಕಾಂತ್, ಸೇರಿದಂತೆ ಸರ್ಕಲ್ ಇನ್ಸ್ಪೆಕ್ಟರ್​ಗಳು ಹಾಗೂ ಸಬ್​ಇನ್ಸ್ಪೆಕ್ಟರ್​ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?