AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​

ತುಮಕೂರು ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​
ತುಮಕೂರು ಪೊಲೀಸರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Nov 26, 2023 | 2:41 PM

Share

ತುಮಕೂರು ನ.26: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ಪೊಲೀಸ್​ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ದರೋಡೆ, 21 ಸುಲಿಗೆ, 19 ಸರಗಳ್ಳತನ, 95 ಮನೆಗಳ್ಳತನ, 195 ಸಾಮಾನ್ಯ ಪ್ರಕರಣ ಸೇರಿದಂತೆ ಒಟ್ಟು 333 ಪ್ರಕರಣಗಳು ದಾಖಲಾಗಿದ್ದವು.

ವಶಕ್ಕೆ ಪಡೆಯಲಾದ ವಸ್ತುಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ‌ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು. ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ತುಮಕೂರು ಎಸ್.ಪಿ ಅಶೋಕ್ ಕೆವಿ‌, ಎಎಸ್ ಪಿ ಮರಿಯಪ್ಪ, ಡಿವೈಎಸ್ ಪಿಗಳಾದ ಚಂದ್ರಶೇಖರ್, ಶೇಖರ್, ಲಕ್ಷ್ಮಿಕಾಂತ್, ಸೇರಿದಂತೆ ಸರ್ಕಲ್ ಇನ್ಸ್ಪೆಕ್ಟರ್​ಗಳು ಹಾಗೂ ಸಬ್​ಇನ್ಸ್ಪೆಕ್ಟರ್​ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್