AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​

ತುಮಕೂರು ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​
ತುಮಕೂರು ಪೊಲೀಸರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Nov 26, 2023 | 2:41 PM

Share

ತುಮಕೂರು ನ.26: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ಪೊಲೀಸ್​ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ದರೋಡೆ, 21 ಸುಲಿಗೆ, 19 ಸರಗಳ್ಳತನ, 95 ಮನೆಗಳ್ಳತನ, 195 ಸಾಮಾನ್ಯ ಪ್ರಕರಣ ಸೇರಿದಂತೆ ಒಟ್ಟು 333 ಪ್ರಕರಣಗಳು ದಾಖಲಾಗಿದ್ದವು.

ವಶಕ್ಕೆ ಪಡೆಯಲಾದ ವಸ್ತುಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ‌ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು. ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ತುಮಕೂರು ಎಸ್.ಪಿ ಅಶೋಕ್ ಕೆವಿ‌, ಎಎಸ್ ಪಿ ಮರಿಯಪ್ಪ, ಡಿವೈಎಸ್ ಪಿಗಳಾದ ಚಂದ್ರಶೇಖರ್, ಶೇಖರ್, ಲಕ್ಷ್ಮಿಕಾಂತ್, ಸೇರಿದಂತೆ ಸರ್ಕಲ್ ಇನ್ಸ್ಪೆಕ್ಟರ್​ಗಳು ಹಾಗೂ ಸಬ್​ಇನ್ಸ್ಪೆಕ್ಟರ್​ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು