AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​

ತುಮಕೂರು ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​
ತುಮಕೂರು ಪೊಲೀಸರು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Nov 26, 2023 | 2:41 PM

Share

ತುಮಕೂರು ನ.26: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ಪೊಲೀಸ್​ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ದರೋಡೆ, 21 ಸುಲಿಗೆ, 19 ಸರಗಳ್ಳತನ, 95 ಮನೆಗಳ್ಳತನ, 195 ಸಾಮಾನ್ಯ ಪ್ರಕರಣ ಸೇರಿದಂತೆ ಒಟ್ಟು 333 ಪ್ರಕರಣಗಳು ದಾಖಲಾಗಿದ್ದವು.

ವಶಕ್ಕೆ ಪಡೆಯಲಾದ ವಸ್ತುಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ‌ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು. ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ತುಮಕೂರು ಎಸ್.ಪಿ ಅಶೋಕ್ ಕೆವಿ‌, ಎಎಸ್ ಪಿ ಮರಿಯಪ್ಪ, ಡಿವೈಎಸ್ ಪಿಗಳಾದ ಚಂದ್ರಶೇಖರ್, ಶೇಖರ್, ಲಕ್ಷ್ಮಿಕಾಂತ್, ಸೇರಿದಂತೆ ಸರ್ಕಲ್ ಇನ್ಸ್ಪೆಕ್ಟರ್​ಗಳು ಹಾಗೂ ಸಬ್​ಇನ್ಸ್ಪೆಕ್ಟರ್​ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ