AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ 16 ವರ್ಷದ ಶಾಲಾ ಬಾಲಕಿ ಸಂಬಂಧಿಕನಿಂದಲೇ ದೌರ್ಜನ್ಯಕ್ಕೊಳಗಾಗಿ ಗಂಡು ಮಗುವಿಗೆ ಜನ್ಮ ನೀಡಿರುವಂತಹ ಘಟನೆ ನಡೆದಿದೆ. ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮಗುವಿಗೆ ಜನ್ಮ ನೀಡಿದ 16ರ ಶಾಲಾ ಬಾಲಕಿ: ಸಂಬಂಧಿಕನಿಂದಲೇ ನೀಚ ಕೃತ್ಯ
ಪ್ರಾತಿನಿಧಿಕ ಚಿತ್ರ
Jagadisha B
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 01, 2025 | 3:14 PM

Share

ತುಮಕೂರು, ಡಿಸೆಂಬರ್​ 01: ಶಾಲಾ ಬಾಲಕಿ (girl) ಮೇಲೆ ಸಂಬಂಧಿಕನಿಂದಲೇ ನೀಚ ಕೃತ್ಯವೆಸಗಿದ್ದು, ಇದೀಗ 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ (Birth) ನೀಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೋಕ್ಸೋ ಪ್ರಕರಣದಡಿ ಆರೋಪಿ ಮಲ್ಲೇಶ್​​ (35)ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

ನಡೆದದ್ದೇನು? 

ಆರೋಪಿ ಮಲ್ಲೇಶ್​​​ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ. ಆಗಸ್ಟ್​ನಲ್ಲಿ ಕೃತ್ಯ ಬೆಳಕಿಗೆ ಬಂದಿತ್ತು. ಇನ್ನು  ಬಾಲಕಿಯನ್ನು ಪೊಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರಿಂದ ತಪಾಸಣೆ ವೇಳೆ ಬಾಲಕಿ ಏಳು ತಿಂಗಳು ಗರ್ಭಿಣಿಯಾಗಿರುವುದ ಪತ್ತೆ ಆಗಿದೆ. ನವೆಂಬರ್ 18ರಂದು ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಇದನ್ನೂ ಓದಿ: ಬೆಳಗಾವಿ: ಪಿಚ್​ಡಿ ಗೈಡ್​ನಿಂದ ಲೈಂಗಿಕ ಕಿರುಕುಳ, 19ಕ್ಕೂ ಹೆಚ್ಚು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಆ ಬಳಿಕ ಹುಲಿಯೂರುದುರ್ಗಾ ಪೊಲೀಸ್ ಠಾಣೆಗೆ ಪೊಷಕರು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಮಲ್ಲೇಶ್ ನಾಪತ್ತೆಯಾಗಿದ್ದ. ಸದ್ಯ ಆರೋಪಿಯನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ 

ಮತ್ತೊಂದು ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಕೆರೆಯಲ್ಲಿ ಅಪರಿಚಿತ ಶವ ಪತ್ತೆ ಆಗಿರುವ ಘಟನೆ ನಡೆದಿದೆ. ಸುಮಾರು 40ರಿಂದ 45 ವರ್ಷ ಆಸುಪಾಸಿನ ವ್ಯಕ್ತಿ ಶವ ಪತ್ತೆ ಆಗಿದೆ.  ಮೂರ್ನಾಲ್ಕು ದಿನದ ಹಿಂದೆ ನೀರಿನಲ್ಲಿ ಬಿದ್ದು ಮೃತಪಟ್ಟಿರು ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ಅತ್ಯಾಚಾರ,ಉಪನ್ಯಾಸಕ ಅರೆಸ್ಟ್

ನಿನ್ನೆ ಕರೆಯಲ್ಲಿ ಇದ್ದಕಿದ್ದಂತೆ ಶವ ತೇಲಿ ಬಂದಿದೆ. ಶವ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಶಿರಾ ಪೊಲೀಸರಿಂದ ಪರಿಶೀಲನೆ ಮಾಡಲಾಗಿದೆ.

ಕಳ್ಳತನಕ್ಕೆ ಯತ್ನ: ಸಿಕ್ಕಿಬಿದ್ದ ಕಳ್ಳನಿಗೆ ಸ್ಥಳೀಯರಿಂದ ಧರ್ಮದೇಟು

ಜಿಲ್ಲೆಯ ತಿಪಟೂರು ಪಟ್ಟಣದ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳನಿಗೆ ಸ್ಥಳೀಯರಿಂದ ಥಳಿಸಿರುವಂತಹ ಘಟನೆ ನಡೆದಿದೆ. ಧರ್ಮದೇಟು ನೀಡಿ ತಿಪಟೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳನ ಬಳಿ ಎರಡು ತಾಳಿ, ಸ್ಕ್ರೂ ಡ್ರೈವರ್, ಚಾಕು, ಮೊಬೈಲ್ ಪತ್ತೆ ಆಗಿದೆ. ಸದ್ಯ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Mon, 1 December 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ