AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿಗೆಗೆ ತಗುಲಿದ ಬೆಂಕಿ: 200 ಕೋಳಿ, 50 ಕುರಿ, 6 ಹಸು ಸಜೀವದಹನ

ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ 200 ಕೋಳಿ, 50 ಕುರಿ ಮತ್ತು 6 ಹಸುಗಳು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ನಡೆದಿದೆ. ರೈತ ಚೇತನ್ ಕುಮಾರ್‌ ಎಂಬುವರಿಗೆ ಸೇರಿದ ಹಸು, ಕುರಿ, ಕೋಳಿಗಳು ಮೃತಪಟ್ಟಿವೆ.

ಕೊಟ್ಟಿಗೆಗೆ ತಗುಲಿದ ಬೆಂಕಿ: 200 ಕೋಳಿ, 50 ಕುರಿ, 6 ಹಸು ಸಜೀವದಹನ
ಆಕಸ್ಮಿಕ ಬೆಂಕಿ ತಗುಲಿ ಹಸುಗಳು ಸಾವು
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Dec 12, 2023 | 10:11 AM

Share

ತುಮಕೂರು, ಡಿಸೆಂಬರ್ 12: ಚಿಕ್ಕನಾಯಕನಹಳ್ಳಿ (Chikkanayakanhalli) ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕೋಳಿ (Chicken), 50 ಕುರಿ (Sheep), 6 ಹಸುಗಳು (Cows) ಸಜೀವದಹನವಾಗಿವೆ. ರೈತ ಚೇತನ್ ಕುಮಾರ್‌ ಎಂಬುವರಿಗೆ ಸೇರಿದ ಹಸು, ಕುರಿ, ಕೋಳಿಗಳು ಮೃತಪಟ್ಟಿವೆ. ಹಸು, ಕುರಿ, ಕೋಳಿ ಕಳೆದುಕೊಂಡ ರೈತ ಚೇತನ್ ಕುಟುಂಬ ಕಂಗಾಲಾಗಿದೆ. ಸೋಮವಾರ (ಡಿ.11) ರಾತ್ರಿ ಘಟನೆ ನಡೆದಿದ್ದು, ಈವರೆಗೆ ತಹಶೀಲ್ದಾರ್‌, ಪಿಡಿಒ, ಪಶು ಇಲಾಖೆಯ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ.

ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತ

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತಪಟ್ಟಿದ್ದವು. ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿತ್ತು. ಕೊಟ್ಟಿಗೆಯಲ್ಲಿ 15 ಹಸುಗಳನ್ನ ಕಟ್ಟಿಹಾಕಲಾಗಿತ್ತು. ಇದೆ ಕೊಟ್ಟಿಗೆಯಲ್ಲಿ ಎರಡು ಬೈಕ್​ಗಳನ್ನು ಕೂಡ ನಿಲ್ಲಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆ ಹಸುಗಳ ಜೊತೆ ಬೈಕ್​ಗಳು ಕೂಡ ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Tue, 12 December 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ