AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru: ತಡರಾತ್ರಿ ಮನೆಗೆ ನುಗ್ಗಿದ್ದ ಚಿರತೆ, ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದ ಅರಣ್ಯಾಧಿಕಾರಿಗಳು

ಕುಣಿಗಲ್ ತಾಲೂಕಿನ ಮುದ್ದಲಿಂಗಯ್ಯನದೊಡ್ಡಿಯಲ್ಲಿ ತಡರಾತ್ರಿ ಶಿವಣ್ಣ ಎಂಬುವರ ಮನೆಗೆ ನುಗ್ಗಿದ್ದ ಚಿರತೆಯನ್ನ ಅರಣ್ಯ ಸಿಬ್ಬಂದಿಗಳು ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿದ್ದಾರೆ.

Tumakuru: ತಡರಾತ್ರಿ ಮನೆಗೆ ನುಗ್ಗಿದ್ದ ಚಿರತೆ, ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದ ಅರಣ್ಯಾಧಿಕಾರಿಗಳು
ಚಿರತೆ ಸೆರೆ
TV9 Web
| Edited By: |

Updated on: Jan 08, 2023 | 11:50 AM

Share

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಮುದ್ದಲಿಂಗಯ್ಯನದೊಡ್ಡಿಯಲ್ಲಿ ತಡರಾತ್ರಿ ಶಿವಣ್ಣ ಎಂಬುವರ ಮನೆಗೆ ಚಿರತೆ ನುಗ್ಗಿದೆ. ಅದನ್ನು ಕಂಡು ಗಾಬರಿಗೊಂಡ ಕುಟುಂಬದವರು ಚಿರತೆಯನ್ನು ಮನೆಯಲ್ಲಿ ಕೂಡಿಹಾಕಿ ಹೊರಬಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನ ಸೆರೆ ಹಿಡಿದಿದ್ದಾರೆ. ಚಿರತೆ ಸೆರೆಯಿಂದ ಮುದ್ದಲಿಂಗಯ್ಯನದೊಡ್ಡಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಈ ಘಟನೆ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು: ಯಾದವಗಿರಿ ಆಕಾಶವಾಣಿ ಬಳಿ ಕಾಣಿಸಿಕೊಂಡ ಚಿರತೆ

ಮೈಸೂರಿನ ಸಿಎಫ್‌ಟಿಆರ್‌ಐ ಬಳಿಯಿರುವ ಆಕಾಶವಾಣಿ ಬಳಿ ಚಿರತೆ ಕಾಣಿಸಿಕೊಂಡಿದೆ.  ಈ ಮೂಲಕ ಜನರಲ್ಲಿ ಆತಂಕ ಮೂಡಿದೆ. ಸ್ಥಳಕ್ಕೆ ಮೈಸೂರು ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಇನ್ನು ಕಳೆದ ಐದು ದಿನಗಳ ಹಿಂದೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ(CFTRI)ಶಾಲಾ ಆವರಣದಲ್ಲಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ಬಂದಿದ್ದ ಮಕ್ಕಳನ್ನು ಶಿಕ್ಷಕರು ವಾಪಾಸ್​ ಮನೆಗೆ ಕಳುಹಿಸಿ ಶಾಲೆಗೆ ರಜೆ ಘೋಷಣೆ ಮಾಡಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, CFTRI ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆಗೆ ಬಲೆ ಬಿಸಿದ್ದು, ಇದೀಗ ನಗರದ ಆಕಾಶವಾಣಿ ಬಳಿ ಚಿರತೆ ಕಾಣಿಸಿಕೊಂಡಿದೆ.

ಇದನ್ನೂ ಓದಿ:Leopard capture operation: 25ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ‌: ಚಿರತೆ ಸೆರೆಗೆ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ

ನೆಲಮಂಗಲದಲ್ಲಿ ತಡರಾತ್ರಿ ಚಿರತೆ ಓಡಾಟ, ಮೊಬೈಲ್​ನಲ್ಲಿ ಸೆರೆ ಹಿಡಿದ ಗ್ರಾಮಸ್ಥರು

ನೆಲಮಂಗಲ ತಾಲೂಕು ಕೆಂಪಲಿಂಗಹಳ್ಳಿ ಸಮೀಪದ ದೇವಾಂಗ ಮಠದ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ.  ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಸ್ಥಳೀಯ ಗ್ರಾಮಸ್ಥರು ಚಿರತೆ ಸಂಚಾರವನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ದೃಶ್ಯ ಸೆರೆ ಹಿಡಿಯುವ ವೇಳೆ ಯಲಚಗೆರೆ ಗ್ರಾಮದ ಕಡೆಗೆ ಚಿರತೆ ಹೋಗಿದೆ. ಇನ್ನು ಚಿರತೆ ಉಪಟಳದ ಬಗ್ಗೆ ಪ್ರತಿನಿತ್ಯ ಅರಣ್ಯ ಇಲಾಖೆ ಕಛೇರಿಗೆ ತಾಲ್ಲೂಕಿನ ಹಲವು ಗ್ರಾಮಗಳಿಂದ ಹಲವಾರು ದೂರು ಬರುತ್ತಿದೆ.  ಈಗಲೇ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ನಗರಕ್ಕೆ ಲಗ್ಗೆ ಇಡುವ ಆತಂಕ ವ್ಯಕ್ತವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್