AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು

ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ತುಮಕೂರಿನ ನ್ಯಾಯಾಲಯವು ಜೈಲು ಶಿಕ್ಷೆ ಜೊತೆಗೆ ದಂಡವೂ ವಿಧಿಸಿ ಆದೇಶ ಹೊರಡಿಸಿದೆ. 2020ರ ಅಕ್ಟೋಬರ್​ 25ರಂದು ನಡೆದಿದ್ದ ಅತ್ಯಾಚಾರ ಪ್ರಕರಣ ಇದಾಗಿದೆ.

ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು
ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಿದ ತುಮಕೂರಿನ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ (ಸಾಂದರ್ಭಿಕ ಚಿತ್ರ)Image Credit source: istock
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on: Jul 11, 2023 | 9:13 PM

Share

ತುಮಕೂರು: ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರಿನ (Tumakuru) ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯವು ಆದೇಶ ಹೊರಡಿಸಿದೆ. ಅಲ್ಲದೆ, ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತೆಗೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ವಿಶೇಷ ಅಭಿಯೋಜಕರಾಗಿ ಕೆ.ಎಸ್.ಆಶಾ ಅವರು ವಾದ ಮಂಡಿಸಿದ್ದರು.

ರಾಕೇಶ್ ಅಲಿಯಾಸ್ ಧನಂಜಯ ಎಂಬಾತ 2020ರ ಅಕ್ಟೋಬರ್​ 25 ರಂದು ತನ್ನ ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಬಾಲಕಿಯ ಬೆತ್ತಲೆ ಫೋಟೋ ತೆಗೆದು ಬ್ಯಾಕ್​ಮೇಲ್ ಮಾಡಿದ್ದನು. ವಿಷಯ ಬಾಯಿಬಿಟ್ಟರೆ ನಿನ್ನ ತಂದೆ ತಾಯಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

ಇದನ್ನು ಓದಿ: Tumkur News: ತೆಂಗಿನಕಾಯಿ ಕಾರ್ಖಾನೆಗಳ ಮೇಲೆ ದಿಢೀರ್​ ದಾಳಿ: 10ಕ್ಕೂ ಹೆಚ್ಚು ಬಾಲಕಾರ್ಮಿಕರ ರಕ್ಷಣೆ

ಸಂತ್ರಸ್ತ ಬಾಲಕಿಯು ತನ್ನ ಮೇಲೆ ಚಿಕ್ಕಪ್ಪ ಎಸಗಿದ ಕೃತ್ಯವನ್ನು ಪೋಷಕರ ಮುಂದೆ ಹೇಳಿಕೊಂಡಿದ್ದಾಳೆ. ಅದರಂತೆ ಪೋಷಕರು, ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ರಾಕೇಶ್​ನನ್ನು ಬಂಧಿಸಿದ್ದರು.

ಆರೋಪಿಯನ್ನು ಬಂಧಿಸಿದ ನಂತರ ಅಂದಿನ ತನಿಖಾಧಿಕಾರಿಯಾಗಿದ್ದ ಟಿ.ಎಸ್ ರಾಧಾಕೃಷ್ಣ ಅವರು ತನಿಖೆ ನಡೆಸಿ‌ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಅದರಂತೆ ಅತ್ಯಾಚಾರ ಎಸಗಿರುವುದು ಸಾಬೀತಾದ ಹಿನ್ನೆಲೆ ನ್ಯಾಯಾಲಯವು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ