AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪ ಮಾಲೆ ಹಾಕಿದ ಮಕ್ಕಳು ಶಾಲೆಗೆ ಬರಬಾರದೇ? ಮಾಲೆ ಧರಿಸಿದ ಮಕ್ಕಳನ್ನು ಹೊರಹಾಕಿದ ಮುಖ್ಯ ಶಿಕ್ಷಕಿ

ತುಮಕೂರಿನ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕಿ ಮನೆಗೆ ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಆದರೆ, ಶಿಕ್ಷಕಿ ಭಾಗ್ಯ ಅವರು ಆರೋಪ ತಳ್ಳಿಹಾಕಿದ್ದು, ಬಿಇಒ ಸೂಚನೆ ಮೇರೆಗೆ ನಿಯಮ ವಿವರಿಸಿದ್ದೇನೆ ಎಂದಿದ್ದಾರೆ. ಮಕ್ಕಳನ್ನು ಕಳುಹಿಸಿಲ್ಲ, ಬದಲಾಗಿ ಪ್ರತ್ಯೇಕವಾಗಿ ಕೂರಿಸಿದ್ದೇನೆಂದು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಶಿಕ್ಷಕಿ ವಿರುದ್ಧ ಡಿಡಿಪಿಐಗೆ ದೂರು ಸಲ್ಲಿಕೆಯಾಗಿದೆ.

ಅಯ್ಯಪ್ಪ ಮಾಲೆ ಹಾಕಿದ ಮಕ್ಕಳು ಶಾಲೆಗೆ ಬರಬಾರದೇ? ಮಾಲೆ ಧರಿಸಿದ ಮಕ್ಕಳನ್ನು ಹೊರಹಾಕಿದ  ಮುಖ್ಯ ಶಿಕ್ಷಕಿ
ಮಾಲೆ ಧರಿಸಿದ ಮಕ್ಕಳನ್ನು ಹೊರಹಾಕಿದ ಮುಖ್ಯ ಶಿಕ್ಷಕಿ
ಜಗದೀಶ ಬಿ.
| Edited By: |

Updated on:Dec 17, 2025 | 9:49 PM

Share

ತುಮಕೂರು, ಡಿಸೆಂಬರ್ 17: ತುಮಕೂರು ಜಿಲ್ಲೆಯ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ಅಯ್ಯಪ್ಪ ಮಾಲೆ (Ayyappa Mala)  ಧರಿಸಿ ಬಂದಿದ್ದ 6ನೇ ತರಗತಿಯ ಇಬ್ಬರು ಮಕ್ಕಳನ್ನು ಶಾಲೆಯಿಂದ ಕಳುಹಿಸಿದ ಆರೋಪವೊಂದು ಮುಖ್ಯ ಶಿಕ್ಷಕಿಯ ವಿರುದ್ಧ ಕೇಳಿಬಂದಿದೆ. ಈ ಹಿಂದೆ ಚಿಕ್ಕಮಗಳೂರಿನಲ್ಲಿ ಇದೇ ರೀತಿಯ ಘಟನೆ ನಡೆದು, ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ತುಮಕೂರಿನ ಶಿಕ್ಷಕಿಯ ವರ್ತನೆಗೂ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಶಿಕ್ಷಕಿ, ಮಕ್ಕಳನ್ನು ಹೊರಹಾಕಿಲ್ಲವೆಂದೂ, ವಿದ್ಯಾರ್ಥಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆಂದೂ ಹೇಳಿದ್ದಾರೆ.

ಆರೋಪ ತಳ್ಳಿ ಹಾಕಿದ ಶಿಕ್ಷಕಿ

ಅಯ್ಯಪ್ಪ ಮಾಲೆ ಧರಿಸಿದ್ದ ಹಿನ್ನೆಲೆಯಲ್ಲಿ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ವಾಪಾಸ್ ಕಳುಹಿಸಲಾಗಿದೆ ಎಂದು ಪ್ರಭಾರಿ ಮುಖ್ಯ ಶಿಕ್ಷಕಿ ಭಾಗ್ಯ ವಿರುದ್ಧ ಆರೋಪ ಕೇಳಿಬಂದಿದೆ. ಆದರೆ ಆರೋಪಗಳನ್ನು ತಳ್ಳಿಹಾಕಿರುವ ಮುಖ್ಯ ಶಿಕ್ಷಕಿ , ನಾನು ಯಾವುದೇ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಗೆ ಕಳುಹಿಸಿಲ್ಲ. ನಿಯಮಾನುಸಾರ ಮಾಲೆ ಧರಿಸಿ, ದೀಕ್ಷಾ ವಸ್ತ್ರದಲ್ಲೇ ಶಾಲೆಗೆ ಬರುವುದಕ್ಕೆ ಅವಕಾಶವಿಲ್ಲ ಎಂದು ಬಿಇಒ ನನಗೆ ತಿಳಿಸಿದ್ದಾರೆ. ಅದನ್ನೇ ಮಕ್ಕಳಿಗೆ ತಿಳಿವಳಿಕೆ ರೂಪದಲ್ಲಿ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯ ಶಿಕ್ಷಕಿ ವಿರುದ್ಧ ಡಿಡಿಪಿಐಗೆ ದೂರು

ಮಕ್ಕಳನ್ನು ನಾನು ಹೊರಹಾಕಿಲ್ಲವೆಂದ ಶಿಕ್ಷಕಿ, ಶಾಲೆಯಲ್ಲಿ ಮಧ್ಯಾಹ್ನ ಮೊಟ್ಟೆ ಬೇಯಿಸುವ ವ್ಯವಸ್ಥೆ ಇದೆ. ಜೊತೆಗೆ ಕೆಲವು ವಿದ್ಯಾರ್ಥಿನಿಯರು ಮುಟ್ಟಾಗಿರುವ ಸಾಧ್ಯತೆಯಿದ್ದು, ಮೈಲಿಗೆಯಾಗಬಾರದೆಂಬ ಕಾರಣಕ್ಕೇ ನಾನೇ ಮಕ್ಕಳನ್ನು ಪ್ರತ್ಯೇಕವಾಗಿ ಕೂರಿಸಿದ್ದೇನೆ. ಇದನ್ನು ಅವರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಗೊಂದಲವಿದ್ದು, ಬಿಇಒ ಅವರ ಗಮನಕ್ಕೆ ತರಲಾಗುವುದು ಎಂದೂ ತಿಳಿಸಿದ್ದಾರೆ. ಆದರೆ ಮಕ್ಕಳ ಧಾರ್ಮಿಕ ಶ್ರದ್ಧೆಗೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಿ ಹಿಂದೂ ಹಿತ ರಕ್ಷಣಾ ವೇದಿಕೆ ಡಿಡಿಪಿಐ ಅವರಿಗೆ ದೂರು ಸಲ್ಲಿಸಿದೆ. ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸೂಕ್ತ ತನಿಖೆ ನಡೆಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಭುಗಿಲೆದ್ದ ಆಕ್ರೋಶ

ಚಿಕ್ಕಮಗಳೂರಿನಲ್ಲೂ ಇಂತಹದ್ದೇ ಘಟನೆ

ಡಿಸೆಂಬರ್ 1 ರಂದು ಚಿಕ್ಕಮಗಳೂರಿನ MES ಪಿಯು ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ‌ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದ್ದರು. ಈ ನಡುವೆ ಮತ್ತೊಮ್ಮೆ ಮಾಲೆ ಧರಿಸಿದ ಮಕ್ಕಳು ಶಾಲಾ-ಕಾಲೇಜಿಗೆ ಬರುವ ವಿಚಾರದಲ್ಲಿ ಗೊಂದಲ ಏರ್ಪಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:39 am, Wed, 17 December 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ