AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು-ಬೆಂಗಳೂರು ಸಂಚರಿಸುವವರಿಗೆ ಗುಡ್ ನ್ಯೂಸ್

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಲು 10 ಪಥದ ಹೆದ್ದಾರಿ ನಿರ್ಮಾಣ ಕಾರ್ಯ ಆರಂಭವಾಗಿದೆ. ನೆಲಮಂಗಲ ಮತ್ತು ತುಮಕೂರು ನಡುವೆ ನಡೆಯುತ್ತಿರುವ ಈ ವಿಸ್ತರಣೆಯಿಂದ ಪ್ರಯಾಣ ಸಮಯ 30 ನಿಮಿಷಗಳಿಗೆ ಇಳಿಯಲಿದೆ. 2026ರೊಳಗೆ ಪೂರ್ಣಗೊಳ್ಳುವ ಈ ಯೋಜನೆಯಿಂದ ವಾಹನ ದಟ್ಟಣೆ ಕಡಿಮೆಯಾಗಲಿದೆ ಮತ್ತು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ತುಮಕೂರು-ಬೆಂಗಳೂರು ಸಂಚರಿಸುವವರಿಗೆ ಗುಡ್ ನ್ಯೂಸ್
ತುಮಕೂರು-ಬೆಂಗಳೂರು ಹೆದ್ದಾರಿ
Jagadisha B
| Updated By: ವಿವೇಕ ಬಿರಾದಾರ|

Updated on:Aug 20, 2025 | 8:06 PM

Share

ತುಮಕೂರು, ಆಗಸ್ಟ್​ 20: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumakuru-Bengaluru National Highway) ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಈ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ದಶಪಥ ರಸ್ತೆ (10 lane high way) ನಿರ್ಮಾಣದ ಕಾಮಗಾರಿ ಆರಂಭವಾಗಿದೆ. ಸದ್ಯ, ನಾಲ್ಕು ಪಥದ ಹೆದ್ದಾರಿ ಇದಾಗಿದ್ದು, ಆರು ಪಥಕ್ಕೆ ವಿಸ್ತರಣೆಯಾಗುತ್ತಿದೆ. ಈ ವಿಸ್ತರಣೆಯು ನೆಲಮಂಗಲ ಮತ್ತು ತುಮಕೂರು ನಡುವೆ ನಡೆಯುತ್ತಿದೆ.

ವಾಹನದಟ್ಟಣೆ ಕಡಿಮೆ ಮಾಡಿ ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಹೊಸ ಮೈಸೂರು-ಬೆಂಗಳೂರು ಹೆದ್ದಾರಿ ಮಾದರಿಯಲ್ಲೇ ತುಮಕೂರು-ಬೆಂಗಳೂರು ಹೆದ್ದಾರಿ ನಿರ್ಮಾಣ ಮಾಡುತ್ತಿದೆ. ಈಗಾಗಲೇ ದಶಪಥ ಹೆದ್ದಾರಿ ಕಾಮಗಾರಿ ಆರಂಭಗೊಂಡಿದೆ. ಹೆದ್ದಾರಿಯಲ್ಲಿ ಆರು ಪಥಗಳು ನಿರ್ಮಾಣ ಹಾಗೂ ಎರಡೂ ಬದಿಗಳಲ್ಲಿ ಸೇವಾ ರಸ್ತೆ ನಿರ್ಮಾಣ ಮಾಡಲಾಗುತ್ತದೆ. 2026ರ ಒಳಗೆ ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಇದೆ. ಹೆದ್ದಾರಿ ನಿರ್ಮಾಣವಾದ ಬಳಿಕ ತುಮಕೂರಿನಿಂದ ಬೆಂಗಳೂರಿಗೆ ಕೇವಲ 30 ನಿಮಿಷದಲ್ಲಿ ಪ್ರಯಾಣ ಮಾಡಬಹುದಾಗಿದೆ.

ರಾಜ್ಯದಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿ ಕಾಮಗಾರಿಗಳು

ತಮಿಳುನಾಡು ಗಡಿಯಿಂದ ಹೊಸಕೋಟೆ ವಿಭಾಗ, ಬೆಳಗಾವಿ-ಸಂಕೇಶ್ವರ್ ಬೈಪಾಸ್​, ಹುಬ್ಬಳ್ಳಿ-ಧಾರವಾಡ ಬೈಪಾಸ್​ 6 ಪಥ, ಖಾನಾಪುರ-ಗೋವಾ ಗಡಿ 2 ಪಥ, ಅಕ್ಕಲಕೋಟೆ-ತೆಲಂಗಾಣ ಗಡಿ, ಚನ್ನರಾಯಪಟ್ಟಣ- ಹಾಸನ ಬೈಪಾಸ್​ 4 ಪಥ, ಅದ್ದಹೊಳೆಯಿಂದ ಬಂಟ್ವಾಳ ಕ್ರಾಸ್, ಸಣ್ಣೂರು – ಬಿಕನಕಟ್ಟೆ,ಕುಳೂರು ಬಳಿ ಫಲ್ಗುಣಿ ನದಿ ಸೇತುವೆ 6 ಪಥ, ನೆಲಮಂಗಲ – ತುಮಕೂರು 6 ಪಥ, ತುಮಕೂರು – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ, ಹೊಸಪೇಟೆ – ಬಳ್ಳಾರಿ, ಬಳ್ಳಾರಿ ಬೈಪಾಸ್‌ನ ಪೇವ್ಡ್ ಶೋಲ್ಡರ್ 4 ಪಥ, ಹಾವೇರಿ – ಯಕಂಬಿ – ಶಿರಸಿ ರಸ್ತೆ, ಶಿರಸಿ – ಕುಮಟಾ – ಬೆಳಕೇರಿ ಬಂದರು, ಬೆಳಗಾವಿ – ಹುನಗುಂದ – ರಾಯಚೂರು ಮತ್ತು ಮೈಸೂರು – ಮಡಿಕೇರಿ ರಸ್ತೆ.

ಇದನ್ನೂ ಓದಿ: ಹೊಸೂರು ರಸ್ತೆ ಟ್ರಾಫಿಕ್​ಗೆ ಬಿಗ್ ರಿಲೀಫ್ ನೀಡಿದ ಮೆಟ್ರೋ ಯೆಲ್ಲೋ ಲೈನ್!

ರಾಜ್ಯದಲ್ಲಿ ಪ್ರಸ್ತುತ 27 ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆಯಾಗಿ 31,749 ಕೋಟಿ ರೂ. ಮೊತ್ತವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ. 31,749 ಕೋಟಿ ರೂಪಾಯಿಯಲ್ಲಿ ಈವರೆಗೆ 14,455 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅಧಿವೇಶನಕ್ಕೆ ತಿಳಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Wed, 20 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ