ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ಕೌಟುಂಬಿಕ ಕಲಹಕ್ಕೆ ತುಮಕೂರಿನಲ್ಲಿನಿಶ್ಚಿತಾರ್ಥವಾಗಿದ್ದ ಯುವಕ ಬಲಿಯಾಗಿದ್ದಾನೆ. ಅತ್ತಿಗೆ ಜೊತೆ ಅಕ್ರಮ ಸಂಬಂಧದ ಆರೋಪಕ್ಕೆ ಸಹೋದರ ನಡುವಿನ ಜಗಳ ಓರ್ವನ ಸಾವಲ್ಲಿ ಅಂತ್ಯವಾಗಿದೆ. ಪ್ರಕರಣ ಮುಚ್ಚಿಹಾಕಲು ಆರೋಪಿ ಪುತ್ರನಿಗೆ ತಂದೆಯೂ ಸಹಕಾರ ನೀಡಿದ್ದು, ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ತಾನು ಮದುವೆಯಾಗಬೇಕಿದ್ದ ಯುವಕ, ಆತನ ಅತ್ತಿಗೆ ಜೊತೆ ಸಂಬಂಧ ಹೊಂದಿರೋದಾಗಿ ಯುವತಿ ಆರೋಪಿಸಿದ್ದೇ ಇಷ್ಟೆಲ್ಲ ರಾದ್ಧಾಂತಕ್ಕೆ ಕಾರಣ ಎನ್ನಲಾಗಿದೆ.

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು
ಸಾಂದರ್ಭಿಕ ಚಿತ್ರ
Image Credit source: istockphoto.com
Edited By:

Updated on: Mar 30, 2026 | 3:03 PM

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ ಹೊತ್ತಿಸಿತ್ತು ಎನ್ನಲಾಗಿದೆ. ಇದೇ ತಿಂಗಳ 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಜಾನ್​​ ಪಾಲ್​​ಗೆ ಇಬ್ಬರು ಗಂಡುಮಕ್ಕಳಿದ್ದು, ಆ ಪೈಕಿ ನವೀನ್​​ ಮೊದಲ ಮಗನಾದರೆ ಮೃತ ಸ್ಟಾಲಿನ್​​ ಎರಡನೇ ಪುತ್ರ. ನವೀನ್​​ಗೆ ಅದಾಗಲೇ ಮದುವೆಯಾಗಿದ್ದು, ಆತನ ಹೆಂಡತಿ ತುಂಬು ಗರ್ಭಿಣಿ ಕೂಡ ಹೌದು. ಈ ನಡುವೆ ಸ್ಟಾಲಿನ್​​ಗೆ ಜನಿಫರ್​​ ಎಂಬ ಯುವತಿಯ ಜೊತೆಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ತಯಾರಿಯ ನಡುವೆ ತಾನು ಮದುವೆಯಾಗಬೇಕಿದ್ದ ಸ್ಟಾಲಿನ್​​ ಮತ್ತು ಆತನ ಅತ್ತಿಗೆ ಅಂದರೆ ನವೀನ್​ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದಾಗಿ ಆಕೆ ಗಂಭೀರ ಆರೋಪ ಮಾಡಿದ್ದಳು. ಇದೇ ವಿಚಾರವಾಗಿ ಸ್ಟಾಲಿನ್​​ ಮನೆಯಲ್ಲಿ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಮಾರ್ಚ್​​ 22ರಂದು ಅಣ್ಣ ನವೀನ್​​ ತಮ್ಮ ಸ್ಟಾಲಿನ್​​ನ ಕೊಲೆ ಮಾಡಿದ್ದ. ಬಳಿಕ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನವನ್ನು ನಡೆಸಲಾಗಿತ್ತು ಎಂಬುದೀಗ ಗೊತ್ತಾಗಿದೆ.

ಇದನ್ನೂ ಓದಿ: ನನ್ನ ಸ್ನೇಹಿತೆ ಜತೆಗೂ ಸೇರು; ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಕಿರಿಯ ಮಗನ ಕೊಲೆ ಮಾಡಿದ್ದ ನವೀನ್​​ಗೆ ತಂದೆ ಜಾನ್​ ಪಾಲ್​​ ಕೂಡ ಬೆಂಬಲ ನೀಡಿದ್ದು, ಆರೋಪಿಗಳು ಘಟನೆ ಬಗ್ಗೆ ಕಥೆ ಕಟ್ಟಿದ್ದರು. ಬೈಕ್ ನಿಲ್ಲಿಸುವಾಗ ಕುಸಿದು ಬಿದ್ದು ಕಂಬಿ ತಾಗಿ ಹೊಟ್ಟೆಗೆ ಗಾಯವಾಗಿದೆ ಎಂದು ಹೇಳಿ ಸ್ಟಾಲಿನ್​​ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಐದು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಸ್ಟಾಲಿನ್​ ಮೃತಪಟ್ಟಿದ್ದಾರೆ. ಮೃತದೇಹ ಕುಟುಂಬಕ್ಕೆ ನೀಡುವ ಮುನ್ನ ಜಯನಗರ ಪೊಲೀಸರಿಗೆ ಆಸ್ಪತ್ರೆ ಮಾಹಿತಿ ಹಿನ್ನೆಲೆ ಪರಿಶೀಲಿಸಿದಾಗ ಚಾಕುವಿನಿಂದ ಇರಿದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ತಂದೆ ಜಾನ್​​ ಪಾಲ್​​ನ ಪೊಲೀಸರು ವಿಚಾರಣೆ ನಡೆಸಿದ್ದು, ಈತ ಆರಂಭದಲ್ಲಿ ಕತೆ ಹೇಳಿದ್ದ. ಆದರೆ ಬಳಿಕ ಅಸಲಿ ಸತ್ಯವನ್ನು ಬಿಚ್ಚಿಟ್ಟ ಹಿನ್ನೆಲೆ ಕೊಲೆ ರಹಸ್ಯ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us