AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾಗಿ 10 ತಿಂಗಳಾದರೂ ಆರಂಭವಾಗದ ತುಮಕೂರು ಕ್ಯಾನ್ಸರ್ ಆಸ್ಪತ್ರೆ: ಬಡ ರೋಗಿಗಳಿಗೆ ತಪ್ಪದ ಬೆಂಗಳೂರು ಅಲೆದಾಟ!

110 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಯಾಗಿ 10 ತಿಂಗಳು ಕಳೆದರೂ ತುಮಕೂರಿನ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಇಂದಿಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಜರ್ಮನಿಯಿಂದ ಯಂತ್ರೋಪಕರಣಗಳು ಬರದಿರುವುದು ಮತ್ತು ಆಸ್ಪತ್ರೆ ಕೊಠಡಿಗಳು ಹಾಳಾಗುತ್ತಿರುವ ಕುರಿತಾದ ಎಕ್ಸ್‌ಕ್ಲೂಸಿವ್ ವರದಿ ಇಲ್ಲಿದೆ. ರೋಗಿಗಳು ಚಿಕಿತ್ಸೆಗೆ ಅಲೆಯುವಂತಾಗಿದೆ.

ಉದ್ಘಾಟನೆಯಾಗಿ 10 ತಿಂಗಳಾದರೂ ಆರಂಭವಾಗದ ತುಮಕೂರು ಕ್ಯಾನ್ಸರ್ ಆಸ್ಪತ್ರೆ: ಬಡ ರೋಗಿಗಳಿಗೆ ತಪ್ಪದ ಬೆಂಗಳೂರು ಅಲೆದಾಟ!
ಉದ್ಘಾಟನೆಯಾಗಿ 10 ತಿಂಗಳಾದರೂ ಆರಂಭವಾಗದ ತುಮಕೂರು ಕ್ಯಾನ್ಸರ್ ಆಸ್ಪತ್ರೆ
ಜಗದೀಶ ಬಿ.
| Edited By: |

Updated on:Aug 22, 2026 | 3:00 PM

Share

ಮುಖ್ಯಾಂಶಗಳು

  • ಉದ್ಘಾಟನೆಯಾಗಿ ಹತ್ತು ತಿಂಗಳಾದರೂ ತುಮಕೂರು ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ ಮಾಡಿಲ್ಲ.
  • ಜರ್ಮನಿಯಿಂದ ಪ್ರಮುಖ ಚಿಕಿತ್ಸಾ ಯಂತ್ರೋಪಕರಣಗಳು ಬರಬೇಕಿದ್ದು ಅಧಿಕಾರಿಗಳು ಕಾಯುತ್ತಿದ್ದಾರೆ.
  • ಆಸ್ಪತ್ರೆ ಆರಂಭವಾಗದೆ ಬಡ ರೋಗಿಗಳು ಬೆಂಗಳೂರಿನ ಕಿದ್ವಾಯಿಗೆ ಅಲೆಯುವುದು ತಪ್ಪಿಲ್ಲ.

ಬೆಂಗಳೂರು, ಆಗಸ್ಟ್ 22: ಲೋಕಾರ್ಪಣೆಗೊಂಡು ಬರೋಬ್ಬರಿ ಹತ್ತು ತಿಂಗಳು ಕಳೆದರೂ ತುಮಕೂರಿನ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಇಂದಿಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. 110 ಕೋಟಿ ರೂ. ಬೃಹತ್ ವೆಚ್ಚದಲ್ಲಿ ನಿರ್ಮಿಸಲಾದ ಮೂರು ಅಂತಸ್ತಿನ ಈ ಅತ್ಯಾಧುನಿಕ ಆಸ್ಪತ್ರೆ ತೆರೆದಿದೆಯೋ ಇಲ್ಲವೋ ಎಂಬ ಗೊಂದಲದಲ್ಲಿ ಬಡ ರೋಗಿಗಳು ದಿನ ದೂಡುವಂತಾಗಿದೆ.

ಆಸರೆಯಾಗಬೇಕಿದ್ದ ಆಸ್ಪತ್ರೆ

ತುಮಕೂರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಕರ್ನಾಟಕ ಸರ್ಕಾರದಿಂದ ಈ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. 2025ರ ನವೆಂಬರ್ 7ರಂದು ಈ ಆಸ್ಪತ್ರೆ ಅಧಿಕೃತವಾಗಿ ಲೋಕಾರ್ಪಣೆಗೊಂಡಿತ್ತು. ತುಮಕೂರು, ಚಿತ್ರದುರ್ಗ, ಶಿರಾ, ಮಧುಗಿರಿ ಸೇರಿದಂತೆ ಸುತ್ತಮುತ್ತಲಿನ ಭಾಗದ ರೋಗಿಗಳಿಗೆ ಸ್ಥಳೀಯವಾಗಿಯೇ ಉನ್ನತ ಮಟ್ಟದ ಚಿಕಿತ್ಸೆ ಸಿಗಲಿ ಮತ್ತು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ (KMIO) ಅಲೆಯುವುದು ತಪ್ಪಲಿ ಎನ್ನುವುದು ಇದರ ಮುಖ್ಯ ಉದ್ದೇಶವಾಗಿತ್ತು. ಆದರೆ, ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳ ಪ್ರಯಾಣದ ಭಾರ ಕಡಿಮೆಯಾಗಿಲ್ಲ.

ಜರ್ಮನಿ ಯಂತ್ರಗಳಿಗೆ ಕಾಯುತ್ತಿರುವ ಅಧಿಕಾರಿಗಳು

ಆಸ್ಪತ್ರೆ ಕಾರ್ಯಾರಂಭ ಮಾಡದಿರಲು ಮುಖ್ಯ ಕಾರಣ ಚಿಕಿತ್ಸೆಗೆ ಅಗತ್ಯವಿರುವ ಪ್ರಮುಖ ಯಂತ್ರೋಪಕರಣಗಳ ಕೊರತೆ. ಚಿಕಿತ್ಸೆಗೆ ಬೇಕಾದ ಅತ್ಯಾಧುನಿಕ ಯಂತ್ರಗಳು ಜರ್ಮನಿಯಿಂದ ಬರಬೇಕಿದ್ದು, ಅದಕ್ಕಾಗಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಸೂಕ್ತ ಯಂತ್ರೋಪಕರಣಗಳು ತಲುಪದ ಹೊರತು ಪೂರ್ಣಪ್ರಮಾಣದಲ್ಲಿ ಆಸ್ಪತ್ರೆ ಆರಂಭಿಸಲು ಸಾಧ್ಯವಿಲ್ಲ ಎಂಬುದು ಅಧಿಕಾರಿಗಳ ಸಬೂಬು.

ಬೀಡಿ ತುಂಡು, ಮದ್ಯದ ಪ್ಯಾಕೇಟ್‌ಗಳ ತಾಣ!

ಕೋಟಿ ಕೋಟಿ ವೆಚ್ಚ ಮಾಡಿ ನಿರ್ಮಿಸಿದ ಆಸ್ಪತ್ರೆಯ ಕೋಣೆಗಳು ಈಗ ನಿರ್ವಹಣೆಯಿಲ್ಲದೆ ಹಾಳಾಗುತ್ತಿವೆ. ಆಸ್ಪತ್ರೆಯ ಆವರಣ ಹಾಗೂ ಕೊಠಡಿಗಳಲ್ಲಿ ಶುಚಿತ್ವ ಸಂಪೂರ್ಣವಾಗಿ ಮಾಯವಾಗಿದ್ದು, ಖಾಲಿ ಮದ್ಯದ ಪ್ಯಾಕೇಟ್‌ಗಳು ಹಾಗೂ ಬೀಡಿ ತುಂಡುಗಳು ಬಿದ್ದಿರುವುದು ಕಣ್ಣಿಗೆ ಬೀಳುತ್ತಿದೆ. ರೋಗಿಗಳಿಗೆ ಸಂಜೀವಿನಿಯಾಗಬೇಕಿದ್ದ ಆಸ್ಪತ್ರೆ ಆವರಣ ಕಿಡಿಗೇಡಿಗಳ ಅಡ್ಡಾಯಾಗುತ್ತಿರುವುದು ದುರಂತ. ಬಡ ರೋಗಿಗಳ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಸ್ಪಂದಿಸಿ ಆಸ್ಪತ್ರೆಯನ್ನು ಕಾರ್ಯಾರಂಭ ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sat, 22 August 26

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ