AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಗಮನ ಹರಿಸುತ್ತೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಈ ವಿಚಾರವಾಗಿ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪೊಲೀಸ್ ಇಲಾಖೆ ಈ ಜಾಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತಿದೆ. ಈ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕು ಎಂದು ಹೇಳಿದ್ದಾರೆ.

ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಗಮನ ಹರಿಸುತ್ತೆ: ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Dec 01, 2023 | 5:09 PM

Share

ತುಮಕೂರು, ಡಿಸೆಂಬರ್​​ 01: ಹೆಣ್ಣು ಭ್ರೂಣ ಹತ್ಯೆ (Female Foeticide) ಬಗ್ಗೆ ಗೃಹ ಸಚಿವರ ಜೊತೆಯೂ ಚರ್ಚಿಸಿದ್ದೇನೆ. ಪೊಲೀಸ್ ಇಲಾಖೆ ಈ ಜಾಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತಿದೆ. ಈ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕು ಎಂದು ಹೇಳಿದ್ದೆವು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್​ ಚರ್ಚಿಸಿ ಸಿಐಡಿಗೆ ವಹಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸ್, ಆರೋಗ್ಯ ಇಲಾಖೆ ಜೊತೆಯಾಗಿ ತನಿಖೆ ಮಾಡಬೇಕಿದೆ ಎಂದಿದ್ದಾರೆ.

ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆ ಇದೆ. ಸಮಾಜದಲ್ಲಿ ಹೆಣ್ಣುಮಗು ಅಂದಾಕ್ಷಣ ಬೇಡ ಅನ್ನೋ ಪರಿಸ್ಥಿತಿ ಇದೆ. ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಹೆಚ್ಚು ಗಮನ ಹರಿಸುತ್ತದೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಪರಮೇಶ್ವರ್​ರನ್ನು ಹಾಡಿಹೊಗಳಿದ ಸಚಿವ ದಿನೇಶ್ ಗುಂಡೂರಾವ್ 

ಪರಮೇಶ್ವರ್ ನಮ್ಮ ನಾಯಕರು, ಅವರ ಜತೆ ನಾವು ಬೆಳೆದಿದ್ದೇವೆ. ಡಾ.ಪರಮೇಶ್ವರ್​ ಅಧ್ಯಕ್ಷರಾಗಿದ್ದಾಗ ಸಾಕಷ್ಟು ಸಹಾಯ ಮಾಡಿದ್ದರು. ಅವರ ಸಹಾಯದಿಂದ ಎರಡು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ: ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಪಕ್ಷದ ಕಾರ್ಯಾಧ್ಯಕ್ಷ ಜೊತೆಗೆ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಕೊರಟಗೆರೆಯಲ್ಲಿ ಹೆರಿಗೆ ದಾಖಲು ನೋಡಿದ್ರೆ ಆಸ್ಪತ್ರೆ ಬೇಕು ಅನಿಸ್ತಿದೆ. ಟ್ರಾಮಾ ಸೆಂಟರ್ ಹಾಗೂ ಪಿಹೆಚ್​ಸಿ ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲ್ಲುತ್ತೇವೆ: ಗೃಹ ಸಚಿವ ಪರಮೇಶ್ವರ್

ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲ್ಲುತ್ತೇವೆ. ಜನರು ನಮ್ಮನ್ನು ಗೆಲ್ಲಿಸುತ್ತಾರೆ ಅನ್ನೋ ವಿಶ್ವಾಸ ಇದೆ. ಪಂಚರಾಜ್ಯ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ ವಿಚಾರ‌ವಾಗಿ ಮಾತನಾಡಿದ ಅವರು, ಫಲಿತಾಂಶ ಬಳಿಕ ನಮ್ಮ ರಾಷ್ಟ್ರೀಯ ನಾಯಕರು ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?