AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ

ಪ್ರಸಕ್ತ ಸನ್ನಿವೇಶದಲ್ಲಿ ಸರ್ಕಾರಿ ಶಾಲೆ ಅಂದರೆ ಜನ ಕೇವಲವಾಗಿ ನೋಡುವ ಸ್ಥಿತಿ ತಲುಪಿದೆ. ಮನೆ ಬಾಗಿಲಿಗೆ ಬರುವ ಖಾಸಗಿ ಸ್ಕೂಲ್ ವ್ಯಾನ್​ಗಳು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆ ಇತ್ಯಾದಿ ಕಾರಣಗಳಿಂದಾಗಿ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಈ ಮಧ್ಯೆ ತಮುಕೂರಿನ ಚಿಕ್ಕಚೆಂಗಾವಿ ರೈತರೊಬ್ಬರು ತಮ್ಮ ಊರಿನ ಸರ್ಕಾರಿ ಶಾಲೆಗೆ ಸ್ವಂತ ಹಣದಿಂದ ಕೊಠಡಿ ನಿರ್ಮಾಣ ಮಾಡಿಕೊಟ್ಟು ಮಾದರಿಯಾಗಿದ್ದಾರೆ.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ
ಚಿಕ್ಕಚೆಂಗಾವಿ ರೈತ ನಿರ್ಮಿಸಿಕೊಟ್ಟ ಕೊಠಡಿ
Jagadisha B
| Edited By: |

Updated on: Jun 07, 2025 | 3:11 PM

Share

ತುಮಕೂರು, ಜೂನ್ 7: ಹೈಟೆಕ್ ಆಗಿ ಕಾಣುತ್ತಿರುವ ಶಾಲಾ ಕೊಠಡಿ. ಫಕ್ಕನೆ ನೊಡಿದಾಗ ಯಾವುದೋ ಖಾಸಗಿ ಶಾಲೆ ಕೊಠಡಿ ಇರಬೇಕು ಎಂದು ಒಂದು ಕ್ಷಣ ಅನ್ನಿಸುವಂತಿದೆ. ಆದರೆ ಇದು ಖಾಸಗಿ ಶಾಲೆ ಕೊಠಡಿ ಅಲ್ಲ! ರೈತರೊಬ್ಬರು ತಮ್ಮೂರಿನ ಸರ್ಕಾರಿ ಶಾಲೆ (govt School) ಉಳಿಸಲು ಸ್ವಂತ ಹಣದಲ್ಲಿ 10 ಲಕ್ಷ ರೂ. ಖರ್ಚು ಮಾಡಿ ಹೈಟೆಕ್ ಕೊಠಡಿ ನಿರ್ಮಿಸಿ ಕೊಡುಗೆಯಾಗಿ ಕೊಟ್ಟಿದ್ದಾರೆ! ತುಮಕೂರು (Tumkur) ಜಿಲ್ಲೆ ಗುಬ್ಬಿ ತಾಲೂಕಿನ ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್ ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತಮ ಕೊಠಡಿಯಿಲ್ಲದೇ ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಇದರಿಂದ ಮನಸ್ಸಿಗೆ ಬೇಸರ ಮಾಡಿಕೊಂಡ ರೈತ ತಮ್ಮೂರಿನ ಶಾಲೆಯನ್ನು ಹೇಗಾದರು ಮಾಡಿ ಉಳಿಸಬೇಕು ಎಂದು ಶಿಕ್ಷಕರು ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಬರೊಬ್ಬರಿ 10 ಲಕ್ಷ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ತಮ್ಮೂರಿನ ಸರ್ಕಾರಿ ಶಾಲೆಗೆ ಹೈಟೆಕ್ ಶಾಲಾ ಕೊಠಡಿ ಕಟ್ಟಿಸಿಕೊಟ್ಟಿದ್ದಾರೆ.

Farmer Prakash

ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್

ಈ ಶಾಲೆಯಲ್ಲಿ ಈ ಹಿಂದೆ ಕೇವಲ 10 ಮಕ್ಕಳ ದಾಖಲಾತಿಯಾಗಿತ್ತು. ಈ ಕೊಠಡಿ ನಿರ್ಮಾಣದ ಬಳಿಕ ಇದೀಗ 20ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಶಾಲಾ ಆವರಣದಲ್ಲಿ ಉತ್ತಮವಾದ ಶೌಚಾಲಯ, ಹೈಟೆಕ್ ಕಾಪೌಂಡ್ ನಿರ್ಮಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ: ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
Image
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Image
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಎಲ್ಲೂ ಹೆಸರು ಹಾಕಿಸದ ರೈತ!

ದೊಡ್ಡ ಮೊತ್ತದ ಹಣ ಖರ್ಚು ಮಾಡಿ ಶಾಲಾ ಕೊಠಡಿ ಕೊಡುಗೆ ಕೊಟ್ಟಿದ್ದರೂ, ಶಾಲೆಯ ಯಾವುದೇ ಮೂಲೆಯಲ್ಲೂ ತನ್ನ ಹೆಸರಾಗಲಿ, ತಮ್ಮ ಕುಟುಂಬದವರ ಹೆಸರನ್ನಾಗಲಿ ರೈತ ಪ್ರಕಾಶ್ ಹಾಕಿಸಿಲ್ಲ. ಶ್ರೀಮಂತರ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವ ರೀತಿಯೇ ತಮ್ಮ ಗ್ರಾಮದ ಬಡವರ ಮಕ್ಕಳು ಕೂಡ ಓದಬೇಕು ಎಂಬ ಉದ್ದೇಶದಿಂದ ಈ ಕಾರ್ಯ ಮಾಡಿದ್ದಾಗಿ ಪ್ರಕಾಶ್ ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಒಟ್ಟಿನಲ್ಲಿ, ರೈತ ಪ್ರಕಾಶ್ ಅವರ ಸಮಾಜಮುಖಿ ಉತ್ತಮ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಸರ್ಕಾರಿ ಶಾಲೆ ಅಂದರೆ ದೂರ ಉಳಿಯುವ ಅದೆಷ್ಟೋ ಮಂದಿಯ ನಡುವೆ ನಮ್ಮೂರಿನ ಸರ್ಕಾರಿ ಶಾಲೆಗೆ ಹೊಸ ಮೆರುಗು ಕೊಟ್ಟಿರುವ ರೈತನ ಪ್ರಯತ್ನ ಬಡಮಕ್ಕಳ ಆಶಾಕಿರಣವಾಗಲಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?