AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ

ಪ್ರಸಕ್ತ ಸನ್ನಿವೇಶದಲ್ಲಿ ಸರ್ಕಾರಿ ಶಾಲೆ ಅಂದರೆ ಜನ ಕೇವಲವಾಗಿ ನೋಡುವ ಸ್ಥಿತಿ ತಲುಪಿದೆ. ಮನೆ ಬಾಗಿಲಿಗೆ ಬರುವ ಖಾಸಗಿ ಸ್ಕೂಲ್ ವ್ಯಾನ್​ಗಳು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆ ಇತ್ಯಾದಿ ಕಾರಣಗಳಿಂದಾಗಿ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಈ ಮಧ್ಯೆ ತಮುಕೂರಿನ ಚಿಕ್ಕಚೆಂಗಾವಿ ರೈತರೊಬ್ಬರು ತಮ್ಮ ಊರಿನ ಸರ್ಕಾರಿ ಶಾಲೆಗೆ ಸ್ವಂತ ಹಣದಿಂದ ಕೊಠಡಿ ನಿರ್ಮಾಣ ಮಾಡಿಕೊಟ್ಟು ಮಾದರಿಯಾಗಿದ್ದಾರೆ.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ
ಚಿಕ್ಕಚೆಂಗಾವಿ ರೈತ ನಿರ್ಮಿಸಿಕೊಟ್ಟ ಕೊಠಡಿ
Jagadisha B
| Edited By: |

Updated on: Jun 07, 2025 | 3:11 PM

Share

ತುಮಕೂರು, ಜೂನ್ 7: ಹೈಟೆಕ್ ಆಗಿ ಕಾಣುತ್ತಿರುವ ಶಾಲಾ ಕೊಠಡಿ. ಫಕ್ಕನೆ ನೊಡಿದಾಗ ಯಾವುದೋ ಖಾಸಗಿ ಶಾಲೆ ಕೊಠಡಿ ಇರಬೇಕು ಎಂದು ಒಂದು ಕ್ಷಣ ಅನ್ನಿಸುವಂತಿದೆ. ಆದರೆ ಇದು ಖಾಸಗಿ ಶಾಲೆ ಕೊಠಡಿ ಅಲ್ಲ! ರೈತರೊಬ್ಬರು ತಮ್ಮೂರಿನ ಸರ್ಕಾರಿ ಶಾಲೆ (govt School) ಉಳಿಸಲು ಸ್ವಂತ ಹಣದಲ್ಲಿ 10 ಲಕ್ಷ ರೂ. ಖರ್ಚು ಮಾಡಿ ಹೈಟೆಕ್ ಕೊಠಡಿ ನಿರ್ಮಿಸಿ ಕೊಡುಗೆಯಾಗಿ ಕೊಟ್ಟಿದ್ದಾರೆ! ತುಮಕೂರು (Tumkur) ಜಿಲ್ಲೆ ಗುಬ್ಬಿ ತಾಲೂಕಿನ ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್ ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತಮ ಕೊಠಡಿಯಿಲ್ಲದೇ ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಇದರಿಂದ ಮನಸ್ಸಿಗೆ ಬೇಸರ ಮಾಡಿಕೊಂಡ ರೈತ ತಮ್ಮೂರಿನ ಶಾಲೆಯನ್ನು ಹೇಗಾದರು ಮಾಡಿ ಉಳಿಸಬೇಕು ಎಂದು ಶಿಕ್ಷಕರು ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಬರೊಬ್ಬರಿ 10 ಲಕ್ಷ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ತಮ್ಮೂರಿನ ಸರ್ಕಾರಿ ಶಾಲೆಗೆ ಹೈಟೆಕ್ ಶಾಲಾ ಕೊಠಡಿ ಕಟ್ಟಿಸಿಕೊಟ್ಟಿದ್ದಾರೆ.

Farmer Prakash

ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್

ಈ ಶಾಲೆಯಲ್ಲಿ ಈ ಹಿಂದೆ ಕೇವಲ 10 ಮಕ್ಕಳ ದಾಖಲಾತಿಯಾಗಿತ್ತು. ಈ ಕೊಠಡಿ ನಿರ್ಮಾಣದ ಬಳಿಕ ಇದೀಗ 20ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಶಾಲಾ ಆವರಣದಲ್ಲಿ ಉತ್ತಮವಾದ ಶೌಚಾಲಯ, ಹೈಟೆಕ್ ಕಾಪೌಂಡ್ ನಿರ್ಮಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ: ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
Image
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Image
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಎಲ್ಲೂ ಹೆಸರು ಹಾಕಿಸದ ರೈತ!

ದೊಡ್ಡ ಮೊತ್ತದ ಹಣ ಖರ್ಚು ಮಾಡಿ ಶಾಲಾ ಕೊಠಡಿ ಕೊಡುಗೆ ಕೊಟ್ಟಿದ್ದರೂ, ಶಾಲೆಯ ಯಾವುದೇ ಮೂಲೆಯಲ್ಲೂ ತನ್ನ ಹೆಸರಾಗಲಿ, ತಮ್ಮ ಕುಟುಂಬದವರ ಹೆಸರನ್ನಾಗಲಿ ರೈತ ಪ್ರಕಾಶ್ ಹಾಕಿಸಿಲ್ಲ. ಶ್ರೀಮಂತರ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವ ರೀತಿಯೇ ತಮ್ಮ ಗ್ರಾಮದ ಬಡವರ ಮಕ್ಕಳು ಕೂಡ ಓದಬೇಕು ಎಂಬ ಉದ್ದೇಶದಿಂದ ಈ ಕಾರ್ಯ ಮಾಡಿದ್ದಾಗಿ ಪ್ರಕಾಶ್ ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಒಟ್ಟಿನಲ್ಲಿ, ರೈತ ಪ್ರಕಾಶ್ ಅವರ ಸಮಾಜಮುಖಿ ಉತ್ತಮ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಸರ್ಕಾರಿ ಶಾಲೆ ಅಂದರೆ ದೂರ ಉಳಿಯುವ ಅದೆಷ್ಟೋ ಮಂದಿಯ ನಡುವೆ ನಮ್ಮೂರಿನ ಸರ್ಕಾರಿ ಶಾಲೆಗೆ ಹೊಸ ಮೆರುಗು ಕೊಟ್ಟಿರುವ ರೈತನ ಪ್ರಯತ್ನ ಬಡಮಕ್ಕಳ ಆಶಾಕಿರಣವಾಗಲಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ