AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ

ಪ್ರಸಕ್ತ ಸನ್ನಿವೇಶದಲ್ಲಿ ಸರ್ಕಾರಿ ಶಾಲೆ ಅಂದರೆ ಜನ ಕೇವಲವಾಗಿ ನೋಡುವ ಸ್ಥಿತಿ ತಲುಪಿದೆ. ಮನೆ ಬಾಗಿಲಿಗೆ ಬರುವ ಖಾಸಗಿ ಸ್ಕೂಲ್ ವ್ಯಾನ್​ಗಳು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆ ಇತ್ಯಾದಿ ಕಾರಣಗಳಿಂದಾಗಿ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿವೆ. ಈ ಮಧ್ಯೆ ತಮುಕೂರಿನ ಚಿಕ್ಕಚೆಂಗಾವಿ ರೈತರೊಬ್ಬರು ತಮ್ಮ ಊರಿನ ಸರ್ಕಾರಿ ಶಾಲೆಗೆ ಸ್ವಂತ ಹಣದಿಂದ ಕೊಠಡಿ ನಿರ್ಮಾಣ ಮಾಡಿಕೊಟ್ಟು ಮಾದರಿಯಾಗಿದ್ದಾರೆ.

ತುಮಕೂರು: ಸ್ವಂತ ಹಣದಿಂದ ಸರ್ಕಾರಿ ಶಾಲೆಗೆ ಆಧುನಿಕ ಕೊಠಡಿ ನಿರ್ಮಿಸಿಕೊಟ್ಟ ಚಿಕ್ಕಚೆಂಗಾವಿ ರೈತ
ಚಿಕ್ಕಚೆಂಗಾವಿ ರೈತ ನಿರ್ಮಿಸಿಕೊಟ್ಟ ಕೊಠಡಿ
ಜಗದೀಶ ಬಿ.
| Edited By: |

Updated on: Jun 07, 2025 | 3:11 PM

Share

ತುಮಕೂರು, ಜೂನ್ 7: ಹೈಟೆಕ್ ಆಗಿ ಕಾಣುತ್ತಿರುವ ಶಾಲಾ ಕೊಠಡಿ. ಫಕ್ಕನೆ ನೊಡಿದಾಗ ಯಾವುದೋ ಖಾಸಗಿ ಶಾಲೆ ಕೊಠಡಿ ಇರಬೇಕು ಎಂದು ಒಂದು ಕ್ಷಣ ಅನ್ನಿಸುವಂತಿದೆ. ಆದರೆ ಇದು ಖಾಸಗಿ ಶಾಲೆ ಕೊಠಡಿ ಅಲ್ಲ! ರೈತರೊಬ್ಬರು ತಮ್ಮೂರಿನ ಸರ್ಕಾರಿ ಶಾಲೆ (govt School) ಉಳಿಸಲು ಸ್ವಂತ ಹಣದಲ್ಲಿ 10 ಲಕ್ಷ ರೂ. ಖರ್ಚು ಮಾಡಿ ಹೈಟೆಕ್ ಕೊಠಡಿ ನಿರ್ಮಿಸಿ ಕೊಡುಗೆಯಾಗಿ ಕೊಟ್ಟಿದ್ದಾರೆ! ತುಮಕೂರು (Tumkur) ಜಿಲ್ಲೆ ಗುಬ್ಬಿ ತಾಲೂಕಿನ ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್ ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತಮ ಕೊಠಡಿಯಿಲ್ಲದೇ ಮಕ್ಕಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಇದರಿಂದ ಮನಸ್ಸಿಗೆ ಬೇಸರ ಮಾಡಿಕೊಂಡ ರೈತ ತಮ್ಮೂರಿನ ಶಾಲೆಯನ್ನು ಹೇಗಾದರು ಮಾಡಿ ಉಳಿಸಬೇಕು ಎಂದು ಶಿಕ್ಷಕರು ಹಾಗೂ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಬರೊಬ್ಬರಿ 10 ಲಕ್ಷ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ತಮ್ಮೂರಿನ ಸರ್ಕಾರಿ ಶಾಲೆಗೆ ಹೈಟೆಕ್ ಶಾಲಾ ಕೊಠಡಿ ಕಟ್ಟಿಸಿಕೊಟ್ಟಿದ್ದಾರೆ.

Farmer Prakash

ಚಿಕ್ಕಚೆಂಗಾವಿ ಗ್ರಾಮದ ರೈತ ಪ್ರಕಾಶ್

ಈ ಶಾಲೆಯಲ್ಲಿ ಈ ಹಿಂದೆ ಕೇವಲ 10 ಮಕ್ಕಳ ದಾಖಲಾತಿಯಾಗಿತ್ತು. ಈ ಕೊಠಡಿ ನಿರ್ಮಾಣದ ಬಳಿಕ ಇದೀಗ 20ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಶಾಲಾ ಆವರಣದಲ್ಲಿ ಉತ್ತಮವಾದ ಶೌಚಾಲಯ, ಹೈಟೆಕ್ ಕಾಪೌಂಡ್ ನಿರ್ಮಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ: ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
Image
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Image
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

ಎಲ್ಲೂ ಹೆಸರು ಹಾಕಿಸದ ರೈತ!

ದೊಡ್ಡ ಮೊತ್ತದ ಹಣ ಖರ್ಚು ಮಾಡಿ ಶಾಲಾ ಕೊಠಡಿ ಕೊಡುಗೆ ಕೊಟ್ಟಿದ್ದರೂ, ಶಾಲೆಯ ಯಾವುದೇ ಮೂಲೆಯಲ್ಲೂ ತನ್ನ ಹೆಸರಾಗಲಿ, ತಮ್ಮ ಕುಟುಂಬದವರ ಹೆಸರನ್ನಾಗಲಿ ರೈತ ಪ್ರಕಾಶ್ ಹಾಕಿಸಿಲ್ಲ. ಶ್ರೀಮಂತರ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವ ರೀತಿಯೇ ತಮ್ಮ ಗ್ರಾಮದ ಬಡವರ ಮಕ್ಕಳು ಕೂಡ ಓದಬೇಕು ಎಂಬ ಉದ್ದೇಶದಿಂದ ಈ ಕಾರ್ಯ ಮಾಡಿದ್ದಾಗಿ ಪ್ರಕಾಶ್ ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆ ಆರಂಭವಾಗಿ ವಾರ ಕಳೆದರೂ ವಿದ್ಯಾರ್ಥಿಗಳ ಕೈಸೇರಿಲ್ಲ ಪಠ್ಯ ಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ

ಒಟ್ಟಿನಲ್ಲಿ, ರೈತ ಪ್ರಕಾಶ್ ಅವರ ಸಮಾಜಮುಖಿ ಉತ್ತಮ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಸರ್ಕಾರಿ ಶಾಲೆ ಅಂದರೆ ದೂರ ಉಳಿಯುವ ಅದೆಷ್ಟೋ ಮಂದಿಯ ನಡುವೆ ನಮ್ಮೂರಿನ ಸರ್ಕಾರಿ ಶಾಲೆಗೆ ಹೊಸ ಮೆರುಗು ಕೊಟ್ಟಿರುವ ರೈತನ ಪ್ರಯತ್ನ ಬಡಮಕ್ಕಳ ಆಶಾಕಿರಣವಾಗಲಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು