AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದವರನ್ನ ದೇವರಂತೆ ಬಂದು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

ಕೆರೆಯಲ್ಲಿ ಮುಳುಗುತ್ತಿದ್ದವರನ್ನ ರಕ್ಷಿಸಿದ ಸರ್ಕಾರಿ ಬಸ್ ಚಾಲಕರೊಬ್ಬರು ರಕ್ಷಿಸುವ ಮೂಲಕ ಮಾನವೀಯತೆ ಮರೆದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದವರನ್ನ ದೇವರಂತೆ ಬಂದು ರಕ್ಷಿಸಿದ ಸರ್ಕಾರಿ ಬಸ್ ಚಾಲಕ
ಇಬ್ಬರು ಬಾಲಕಿಯರನ್ನು ರಕ್ಷಿಸಿದ ಸಾರಿಗೆ ಬಸ್ ಚಾಲಕ
TV9 Web
| Edited By: |

Updated on:Jan 29, 2023 | 9:10 PM

Share

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ಸರ್ಕಾರಿ ಬಸ್ ಚಾಲಕರೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. ಸುಷ್ಮಾ (18) ಹಾಗೂ ಮಂಜುಳ (9) ತಾಯಿ ಜೊತೆ ಬಟ್ಟೆ ತೊಳೆಯಲು ಹಂದಿಕುಂಟೆ ಅಗ್ರಹಾರ ಕೆರೆ ಬಳಿ ಹೋಗಿದ್ದಾರೆ. ಈ ವೇಳೆ ಸುಷ್ಮಾ ಮತ್ತು ಮಂಜುಳ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬೀಳುತ್ತಾರೆ. ಕೂಡಲೆ ಮಕ್ಕಳ ನೆರವಿಗೆ ದಾವಿಸುವಂತೆ ಮನವಿ ಮಾಡಲು ತಾಯಿ ರಸ್ತೆಗೆ ಓಡಿ ಹೋಗಿ ಕೂಗಿಕೊಂಡಿದ್ದಾರೆ. ಈ ವೇಳೆ ದೇವರಂತೆ ಬಂದ ಸರ್ಕಾರಿ ಬಸ್ ಚಾಲಕ ಮಂಜುನಾಥ್ ಕೂಡಲೇ ಬಸ್ ನಿಲ್ಲಿಸಿ ಕೆರೆಗೆ ಹಾರಿ ಇಬ್ಬರು ಸಹೋದರಿಯರನ್ನು ರಕ್ಷಿಸಿ ಮಾನವೀಯತೆ ಮೆರೆದರು. ಶಿರಾದಿಂದ ನಾಗಪ್ಪನಹಳ್ಳಿ ಕಡೆ ಸಾರಿಗೆ ಬಸ್ ಹೋಗುತ್ತಿತ್ತು.

ಕಾಳಾಪುರ ಗ್ರಾಮದಲ್ಲಿ ಕಲ್ಲು ತೂರಾಟ, ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿಕೆ

ವಿಜಯನಗರ: ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಹೇಳಿಕೆ ನೀಡಿದ ಜಿಲ್ಲಾಧಿಕಾರಿ ವೆಂಕಟೇಶ್, ಕಾಳಾಪುರ ಗ್ರಾಮಕ್ಕೆ ನಾನು ಹೋಗಿ ಹಾನಿಯಾಗಿರೋ ಮನೆಗಳಿಗೆ ಭೇಟಿ ಕೊಟ್ಟಿದ್ದೇನೆ. ಎಷ್ಟು ಮನೆಗಳು ಹಾನಿಯಾಗಿವೆ, ಎಷ್ಟು ವಾಹನಗಳು ಹಾನಿಯಾಗಿವೆ ಅಂತ ಸರ್ವೇ ಮಾಡಲು ಸೂಚಿಸಿದ್ದೇನೆ. ಎಸ್​​ಪಿ ಅವರು ಸ್ಥಳದಲ್ಲೇ ಇದ್ದಾರೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ. 20-22 ಜನರಿಗೆ ಗಾಯಗಳಾಗಿವೆ, ಕೇವಲರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಕೆಲವರು ಆಸ್ಪತ್ರೆಗೆ ಸೇರಿದ್ದಾರೆ. ಒಬ್ಬರು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಅವರು ಹುಷಾರಾಗಿದ್ದಾರೆ. ಘಟನೆ ಸಂಬಂಧ 5 ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ. ಪೊಲೀಸರ ಮೇಲೆ ಕೂಡ ಹಲ್ಲೆ ಮಾಡಿದ್ದಾರೆ. ಈ ಬಗ್ಗೆಯೂ ಎಫ್​ಐಆರ್ ಆಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಹೆದ್ದಾರಿ ದಾಟಲು ಹೋಗಿ 12 ಕೃಷ್ಣಮೃಗಗಳು ಸಾವು

ಕೊಟ್ಟೂರಲ್ಲಿ ತರಳಬಾಳು ಹುಣ್ಣಿಮೆ ಕಾರ್ಯಕ್ರಮ ಹಿನ್ನಲೆ ಸಿರಿಗೆರೆ ಮಠದ ಭಕ್ತರು ಕೊಟ್ಟೂರುವರೆಗೆ ಬೈಕ್ ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಸಿರಿಗೆರೆ ಉಜ್ಜಯಿನಿ ಭಕ್ತರ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಂತರ ಕಾಳಾಪುರ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿಷೇಧಾಜ್ಞೆ ಜಾರಿಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Sun, 29 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​