AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಷ್ಟು ಹೆಚ್ಚಾಯ್ತು ಹೇಮಾವತಿ ಹೋರಾಟದ ಕಿಚ್ಚು: ಸರ್ಕಾರಕ್ಕೆ ಪಾಠ ಕಲಿಸಲು ಮುಂದಾದ ರೈತರು

ತುಮಕೂರಿನ ಹೇಮಾವತಿ ಲಿಂಕ್ ಕಾಲುವೆ ಯೋಜನೆ ವಿರೋಧಿ ಹೋರಾಟ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಭಾಗಿಯಾದ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದರಿಂದ ಕೆರಳಿದ ಹೋರಾಟಗಾರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೋರಾಟ ಸಮಿತಿಯು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದು, ಮಹತ್ವದ ಚರ್ಚೆ ನಡೆಯಲಿದೆ.

ಮತ್ತಷ್ಟು ಹೆಚ್ಚಾಯ್ತು ಹೇಮಾವತಿ ಹೋರಾಟದ ಕಿಚ್ಚು: ಸರ್ಕಾರಕ್ಕೆ ಪಾಠ ಕಲಿಸಲು ಮುಂದಾದ ರೈತರು
ರೈತರಿಂದ ಪ್ರತಿಭಟನೆ
Jagadisha B
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 02, 2025 | 11:01 AM

Share

ತುಮಕೂರು, ಜೂನ್​​ 02: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (Hemavati canal)​​ ಕಿಚ್ಚು ಜೋರಾಗಿದೆ. ನಿನ್ನೆ ಪ್ರತಿಭಟನೆ ನಡೆಸಿದ್ದ ಮೂವರು ಶಾಸಕರು, ಇಬ್ಬರು ಸ್ವಾಮೀಜಿಗಳು ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್​ಐಆರ್ (FIR) ದಾಖಲಿಸಲಾಗಿದೆ. ಸದ್ಯ ಈ ವಿಚಾರ ರಾಜಕೀಯ ಜಟಾಪಟಿಗೂ ಕಾರಣವಾಗಿರುವ ಬೆನ್ನಲ್ಲೇ ಇಂದು ಮಹತ್ವದ ಸಭೆ ನಡೆಸಲು ಹೋರಾಟಗಾರರು ಮುಂದಾಗಿದ್ದಾರೆ. ಹೀಗಾಗಿ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಇಂದು ಸಭೆ ಕರೆದಿದ್ದು, ಸರ್ಕಾರಕ್ಕೆ ಯಾವ ರೀತಿ ಪಾಠ ಕಲಿಸಬೇಕು ಎಂದು ಸಭೆಯಲ್ಲಿ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಇಂದು ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್​​ ಕಿಚ್ಚು ಮತ್ತಷ್ಟು ಹೆಚ್ಚಾದೆ. ಇತ್ತ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಹೋರಾಟಗಾರರನ್ನು ಮತ್ತಷ್ಟು ಕೇರಳಿಸಿದೆ. ಹೀಗಾಗಿ ಹೇಮಾವತಿ ಲಿಂಕ್ ‌ಕೆನಾಲ್ ವಿರೋಧಿ ಹೋರಾಟ ಸಮಿತಿ, ಬಿಜೆಪಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಮುಖಂಡರಿಂದ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ತುಮಕೂರಿನ ಖಾಸಗಿ ಹೋಟೆಲ್​ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ ನಡೆಯಲಿದ್ದು, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಎ‌ಂ.ಟಿ.ಕೃಷ್ಣಪ್ಪ, ರೈತ ಮುಖಂಡರು ಹಾಗೂ ಹೋರಾಟಗಾರರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ
Image
ಹೇಮಾವತಿ ಕೆನಾಲ್: ಸ್ವಾಮೀಜಿ, ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್
Image
ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್
Image
144 ಸೆಕ್ಷನ್ ಮಧ್ಯೆಯೂ ಹೋರಾಟ, ಹೇಮಾವತಿ ಎಕ್ಸ್‌ಪ್ರೆಸ್‌ ಗೆ ವಿರೋಧ ಏಕೆ?
Image
ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿದ್ದ ಇಬ್ಬರು ಸ್ವಾಮೀಜಿ, ಮೂವರು ಶಾಸಕರು ಸೇರಿ 11 ಮಂದಿ ವಿರುದ್ಧ ಎಫ್​ಐಆರ್

ರೈತರೋ ಇಲ್ಲಾ ಸರ್ಕಾರವೋ ನೋಡಿಯೇ ಬಿಡೋಣಾ ಎಂಬ ನಿರ್ಧಾರಕ್ಕೆ ಮುಂದಾಗಿದ್ದಾರೆ. ಶತಾಯಗಾತಯ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ಯಾವುದಕ್ಕೂ ಬಗ್ಗದಿರಲು ಚರ್ಚೆ ಸೇರಿಂದತೆ ರೈತರ ಒಗ್ಗಟ್ಟು ಬಿಟ್ಟು ಕೊಡದಂತೆ ಸಭೆಯಲ್ಲಿ ತಿರ್ಮಾನ ಮಾಡಲು ಸಿದ್ದತೆ ಮಾಡಲಾಗುತ್ತಿದೆ. ನಮ್ಮ ಪ್ರಾಣ ಹೋದರು ಪರವಾಗಿಲ್ಲ, ಕಾಮಗಾರಿ ನಡೆಸಲು ಬಿಡಲ್ಲ ಎಂದು ಪಟ್ಟು ಹಿಡಿದು ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಸಿದ್ದತೆ ನಡೆಸಿದ್ದಾರೆ.

13 ಎಫ್ಐಆರ್​ ದಾಖಲು

ಇನ್ನು ಯೋಜನೆ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಮತ್ತೆರಡು ಎಫ್ಐಆರ್​ಗಳು ದಾಖಲಾಗಿದೆ. ಇಂಜಿನಿಯರ್​​ಗಳು ಕೊಟ್ಟ ದೂರಿನ ಮೇರೆಗೆ ಎಫ್ಐಆರ್​ ದಾಖಲಾಗಿದ್ದು, ಒಟ್ಟಾರೆ ಈವರೆಗೆ 13 ಎಫ್ಐಆರ್​ಗಳು ದಾಖಲಾಗಿವೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರ ವಿರುದ್ಧ ಎಫ್​ಐಆರ್​​ ದಾಖಲು

ಕಾಮಗಾರಿ ಗುತ್ತಿಗೆ ಪಡೆದ ಕಂಪನಿ ನೀಡಿದ ದೂರಿನ ಮೇರೆಗೆ ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್​ ಠಾಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎ1 ತುರುವೇಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಎ2 ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಎ3 ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್, ಎ4 ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ, ಎ5 ಜಿಲ್ಲಾ ರೈತ ಸಂಘದ ಅಧ್ಯಕ್ಷ ಗೊವಿಂದರಾಜು, ಎ6 ಬಿಜೆಪಿ ಮುಖಂಡ ದಿಲೀಪ್ ಕುಮಾರ್, ಎ7 ಚೇತನ್, ಎ8 ಇತರ 25 ರಿಂದ 30 ಮಂದಿ ಹೆಸರು ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!