AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ’ಎಂದಿದ್ದ ಮಹಿಳೆಗೆ ಸಿಕ್ಕಿತು ಗೃಹ ಸಚಿವರ ಆಸರೆ

ವಸತಿಗಾಗಿ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ರಾಬಿಯಾ ಅವರ ಸಮಸ್ಯೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ತುಮಕೂರಿನಲ್ಲಿ ಸಚಿವರನ್ನು ಭೇಟಿಯಾದ ರಾಬಿಯಾ, ಮನೆ ಸಿಗದ ನೋವು ತೋಡಿಕೊಂಡಿದ್ದರು. ಸಚಿವರು ಮುಂದಿನ ಆರು ತಿಂಗಳ ಬಾಡಿಗೆ ಮತ್ತು ರೇಷನ್ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಆರು ತಿಂಗಳೊಳಗೆ ಶಿರಾದಲ್ಲಿ ನಿವೇಶನ ಅಥವಾ ಮನೆ ಕೊಡಿಸುವ ಭರವಸೆಯನ್ನೂ ನೀಡಿದ್ದು, ರಾಬಿಯಾಗೆ ನೆಮ್ಮದಿ ಮೂಡಿಸಿದೆ.

'ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ'ಎಂದಿದ್ದ ಮಹಿಳೆಗೆ ಸಿಕ್ಕಿತು ಗೃಹ ಸಚಿವರ ಆಸರೆ
ಸಚಿವ ಪರಮೇಶ್ವರ್ ನೆರವು
Jagadisha B
| Edited By: |

Updated on: Apr 15, 2026 | 9:59 AM

Share

ತುಮಕೂರು, ಏ.15 : ವಸತಿಗಾಗಿ ಆಗ್ರಹಿಸಿ ಸಚಿವರ ಎದುರೇ ದಯಾಮರಣ ಬೇಡಿದ್ದ ಶಿರಾ ತಾಲೂಕಿನ ಮಹಿಳೆ ರಾಬಿಯಾ ಅವರ ಕಣ್ಣೀರಿಗೆ ಕೊನೆಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಂದಿಸಿದ್ದಾರೆ. ಮಹಿಳೆಯ ಮುಂದಿನ ಆರು ತಿಂಗಳ ಬಾಡಿಗೆ ಮತ್ತು ರೇಷನ್ ವೆಚ್ಚವನ್ನು ಭರಿಸುವುದರ ಜೊತೆಗೆ ಮನೆ ಕೊಡಿಸುವ ಭರವಸೆಯನ್ನ ನೀಡಿದ್ದಾರೆ.

ಕಳೆದ ಏಪ್ರಿಲ್ 8ರಂದು ತುಮಕೂರು ನಗರದ ಗ್ರಂಥಾಲಯ ಸಂಕೀರ್ಣದಲ್ಲಿ ನಡೆದಿದ್ದ ಜನಸಂಪರ್ಕ ಸಭೆಯಲ್ಲಿ ರಾಬಿಯಾ ಎಂಬ ಮಹಿಳೆ ವೇದಿಕೆ ಮೇಲೆ ಬಂದು ಆಕ್ರೋಶ ವ್ಯಕ್ತಪಡಿಸಿದ್ದರು. “ಎರಡು ವರ್ಷಗಳ ಹಿಂದೆಯೇ ಭರವಸೆ ನೀಡಿದ್ದರೂ ನನಗೆ ಮನೆ ನೀಡಿಲ್ಲ, ನನಗೆ ಬದುಕಲು ದಾರಿ ಇಲ್ಲದಿದ್ದರೆ ದಯಾಮರಣ ನೀಡಿ” ಎಂದು ಸಚಿವರ ಎದುರೇ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಮಸ್ಯೆ ಆಲಿಸಲಿ ಎಂದು ವೇದಿಕೆ ಮೇಲೆಯೇ ಹಾಡು ಹಾಡುವ ಮೂಲಕ ರಾಬಿಯಾ ಎಲ್ಲರ ಗಮನ ಸೆಳೆದಿದ್ದರು.ನಿನ್ನೆ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ನಿಮಿತ್ತ ತುಮಕೂರಿಗೆ ಆಗಮಿಸಿದ್ದ ಸಚಿವರನ್ನು ರಾಬಿಯಾ ಅವರು ಪ್ರವಾಸಿ ಮಂದಿರದಲ್ಲಿ (IB) ಭೇಟಿ ಮಾಡಿದ್ದರು. ಈ ವೇಳೆ ರಾಬಿಯಾಳ ಕಷ್ಟ ಆಲಿಸಿದ ಸಚಿವರು, ಆಕೆಯ ವಾಸದ ಮನೆಯ ಆರು ತಿಂಗಳ ಬಾಡಿಗೆ ಹಾಗೂ ಮನೆಗೆ ಬೇಕಾದ ರೇಷನ್ (ದಿನಸಿ) ವೆಚ್ಚವನ್ನು ತಾವೇ ಭರಿಸುವುದಾಗಿ ತಿಳಿಸಿದ್ದಾರೆ. ಮುಂದಿನ ಆರು ತಿಂಗಳ ಒಳಗಾಗಿ ಶಿರಾದಲ್ಲಿ ರಾಬಿಯಾಗೆ ಒಂದು ನಿವೇಶನ ಅಥವಾ ಮನೆ ಕೊಡಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us