Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವ್ಯಕ್ತಿ ಹೆಸರಲ್ಲಿ ಅಂಗವಿಕಲ, ವಯಸ್ಸಿನ ದೃಢೀಕರಣ ಪತ್ರ ವಿತರಣೆ: 2 ವೈದ್ಯರ ಸಸ್ಪೆಂಡ್

2022ರಲ್ಲಿ ಮೃತಪಟ್ಟಿದ್ದ ಹನುಮಂತರಾಯಪ್ಪ ಹೆಸರಲ್ಲಿ ದೃಢೀಕರಣ ಪತ್ರ, ಅಂಗವಿಕಲ ಪ್ರಮಾಣಪತ್ರ ಮತ್ತು ವಯಸ್ಸಿನ ದೃಢೀಕರಣ ಪತ್ರ ವಿತರಣೆ ಮಾಡಿದ ತುಮಕೂರು ಜಿಲ್ಲೆಯ ಮಧುಗಿರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಪ ಸಾಬೀತು ಹಿನ್ನೆಲೆ ಇಬ್ಬರು ವೈದ್ಯರ ಅಮಾನತು ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ಚಂದ್ರಕಾಂತ್​ರಿಂದ ಆದೇಶ ಹೊರಡಿಸಲಾಗಿದೆ.

ಮೃತ ವ್ಯಕ್ತಿ ಹೆಸರಲ್ಲಿ ಅಂಗವಿಕಲ, ವಯಸ್ಸಿನ ದೃಢೀಕರಣ ಪತ್ರ ವಿತರಣೆ: 2 ವೈದ್ಯರ ಸಸ್ಪೆಂಡ್
ಸಸ್ಪೆಂಡ್ ಆದ ವೈದ್ಯರು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 08, 2023 | 9:19 AM

ತುಮಕೂರು, ಡಿಸೆಂಬರ್​​ 08: ಮೃತ ವ್ಯಕ್ತಿ ಹೆಸರಿನಲ್ಲಿ ಅಂಗವಿಕಲ, ವಯಸ್ಸಿನ ದೃಢೀಕರಣ ಪತ್ರ ವಿತರಣೆ ಮಾಡಿದ ಜಿಲ್ಲೆಯ ಮಧುಗಿರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಸಸ್ಪೆಂಡ್ (suspended) ಮಾಡಲಾಗಿದೆ. ಡಾ.ಮಹೇಶ್ ಸಿಂಗ್ ಮತ್ತು ಡಾ.ಪುರುಷೋತ್ತಮ್ ಸಸ್ಪೆಂಡ್ ಆದ ವೈದ್ಯರು. ಘಟನೆ ಸಂಬಂಧ ಆರೋಗ್ಯ ಇಲಾಖೆ RTI ಕಾರ್ಯಕರ್ತರು ದೂರು ನೀಡಿದ್ದು, ಆರೋಪ ಸಾಬೀತು ಹಿನ್ನೆಲೆ ಇಬ್ಬರು ವೈದ್ಯರ ಅಮಾನತು ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ಚಂದ್ರಕಾಂತ್​ರಿಂದ ಆದೇಶ ಹೊರಡಿಸಲಾಗಿದೆ.

2022ರಲ್ಲಿ ಮೃತಪಟ್ಟಿದ್ದ ಹನುಮಂತರಾಯಪ್ಪ ಹೆಸರಲ್ಲಿ ದೃಢೀಕರಣ ಪತ್ರ, ಅಂಗವಿಕಲ ಪ್ರಮಾಣಪತ್ರ ಮತ್ತು ವಯಸ್ಸಿನ ದೃಢೀಕರಣ ಪತ್ರವನ್ನು ವೈದ್ಯರು ನೀಡಿದ್ದರು.

ಇದನ್ನೂ ಓದಿ: ಗ್ರಾಮವನ್ನೇ ಮಾರಿದ ಗ್ರಾಮ ಪಂಚಾಯ್ತಿ PDO ವೆಂಕಟೇಶ ಅಮಾನತು-ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ CEO ಆದೇಶ

ಆರೋಗ್ಯ ಇಲಾಖೆಯ‌ ಮುಖ್ಯ ಜಾಗೃತಾಧಿಕಾರಿಗಳಿಂದ ತನಿಖೆ ಮಾಡಿದ್ದು, ಇಬ್ಬರು ವೈದ್ಯರು ತಪ್ಪಿತಸ್ಥರು ಎಂದು ಮೇಲ್ನೋಟಕ್ಕೆ ದೃಢವಾಗಿದೆ. ಇಲಾಖಾ ತನಿಖೆ ‌ಬಾಕಿ ಇರಿಸಿ‌ ಇಬ್ಬರನ್ನೂ ಆರೋಗ್ಯ ಇಲಾಖೆ ಅಮಾನತು ಮಾಡಿದೆ.

ಇದನ್ನೂ ಓದಿ: ಗದಗ: ಲವ್ ಪ್ರಕರಣದಲ್ಲಿ ನಿರ್ಲಕ್ಷ್ಯ, ಪಿಎಸ್​ಐ ಅಮಾನತು

ಕಳೆದ ಕೆಲ ದಿನಗಳ ಹಿಂದೆ ಹಾವೇರಿ ಜಿಲ್ಲೆಯ ಸವಣೂರಿಗೆ ಡಾ.ಮಹೇಶ್ ಸಿಂಗ್, ಕೋಲಾರ ಜಿಲ್ಲೆಯ ಕೆ.ಜಿ.ಎಫ್​ಗೆ ಡಾ.ಪುರುಷೋತ್ತಮ್​ ಅವರನ್ನು ಆರೋಗ್ಯ ಇಲಾಖೆ ವರ್ಗಾವಣೆ ಮಾಡಿತ್ತು. ಮಧುಗಿರಿ‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು‌.

ಕರ್ತವ್ಯ ಲೋಪ: ಎಂಟು ಅಧಿಕಾರಿಗಳು ಅಮಾನತು

ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದರು. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತು ಮಾಡಲಾಗಿತ್ತು.

ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಚಿಕ್ಕಮಗಳೂರು: ಇಸ್ಪೀಟ್ ದಂಧೆಯಲ್ಲಿ ಸಿಕ್ಕಿ ಬಿದ್ದ ಚಂದ್ರಶೇಖರ್ ಬಣಕಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದರು. ಸದ್ಯ ಚಂದ್ರಶೇಖರ್ ಸೇರಿದಂತೆ ದಾಳಿ ವೇಳೆ ಸಿಕ್ಕಿಬಿದ್ದ 13 ಜನರ ಮೇಲೆ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು