AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ?

Tumakur News: ತುಮಕೂರಿನ ಪ್ರತಿಷ್ಠಿತ ಜ್ಯುವೆಲರಿ ಶಾಪ್‌ನಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣ ರಾತ್ರೋರಾತ್ರಿ ನಾಪತ್ತೆಯಾಗಿದೆ. ಆದರೆ, ಕಳ್ಳರಂತೂ ಅಂಗಡಿಗೆ ಎಂಟ್ರಿ ಕೊಟ್ಟಿಲ್ಲ! ಮತ್ತೆ ಆಭರಣ ಕಾಣೆಯಾಗಿದ್ದು ಹೇಗೆ? ಕಳ್ಳತನದ ರಹಸ್ಯ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಬಯಲಾಗಿದ್ದು, ಆಭರಣಗಳನ್ನು ಎಗರಿಸಿದ್ದು ಜನರಲ್ಲ ಎಂಬುದು ಗೊತ್ತಾಗಿದೆ. ಮತ್ಯಾರು? ತಿಳಿಯಲು ಮುಂದೆ ಓದಿ.

ಜ್ಯುವೆಲ್ಲರಿಯಿಂದ ರಾತ್ರೋರಾತ್ರಿ 10 ಲಕ್ಷ ರೂ. ಮೌಲ್ಯದ ಆಭರಣ ಮಾಯ! ಕಳ್ಳರೇ ಬಾರದೆ ವಜ್ರ, ಚಿನ್ನಾಭರಣ ಕಳವಾಗಿದ್ಹೇಗೆ ಗೊತ್ತೇ?
ಕಾಣೆಯಾಗಿದ್ದ ಆಭರಣಗಳು ಹಾಗೂ ಅವುಗಳು ಪತ್ತೆಯಾದ ಇಲಿ ಬಿಲImage Credit source: tv9
ಜಗದೀಶ ಬಿ.
| Edited By: |

Updated on:Jul 30, 2026 | 10:30 AM

Share

ಮುಖ್ಯಾಂಶಗಳು

  • ₹10 ಲಕ್ಷದ ಆಭರಣ ರಾತ್ರೋತಾತ್ರಿ ಮಾಯ
  • ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ
  • ಕೊನೆಗೆ ಬಿಲದಲ್ಲಿ ಪತ್ತೆಯಾಯ್ತು 10 ಉಂಗುರ, 3 ಸರ!

ತುಮಕೂರು, ಜುಲೈ 30: ಸಿನಿಮಾ ಕಥೆಯನ್ನೂ ಮೀರಿಸುವಂತಿರುವ ವಿಚಿತ್ರ ಘಟನೆಯೊಂದು ತುಮಕೂರು (Tumakur) ನಗರದಲ್ಲಿ ನಡೆದಿದೆ. ಪ್ರತಿಷ್ಠಿತ ಜ್ಯುವೆಲರಿ ಶಾಪ್‌ನಲ್ಲಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಆದರೆ ಜ್ಯುವೆಲ್ಲರಿಯ ಶಟರ್ ಮುರಿದಿರಲಿಲ್ಲ, ಹೊರಗಿನಿಂದ ಯಾರೂ ಒಳನುಗ್ಗಿದ ಕುರುಹು ಕೂಡ ಇರಲಿಲ್ಲ. ಕೊನೆಗೆ ಸಿಸಿಟಿವಿ ಪರಿಶೀಲಿಸಿದಾಗ ಇಡೀ ಪ್ರಕರಣದ ಅಸಲಿ ರಹಸ್ಯ ಬಯಲಾಗಿದೆ! ತುಮಕೂರು ನಗರದ ಕಾಲ್‌ಟೆಕ್ಸ್ ಸರ್ಕಲ್‌ ಸಮೀಪದಲ್ಲಿರುವ ವಿಶ್ವಾಸ್ ಜ್ಯುವೆಲರಿ ಶಾಪ್‌ನಲ್ಲಿ ಈ ಘಟನೆ ನಡೆದಿದೆ.

ಅಂಗಡಿಯಲ್ಲಿ 50 ಗ್ರಾಂಗೂ ಅಧಿಕ ತೂಕದ ವಜ್ರ ಹಾಗೂ ಚಿನ್ನಾಭರಣಗಳು ಬೆಳಗ್ಗೆ ನೋಡುವಾಗ ಕಾಣೆಯಾಗಿದ್ದವು. ಸರಗಳು ಮತ್ತು ಉಂಗುರಗಳು ಸೇರಿದಂತೆ ಸುಮಾರು 10 ಲಕ್ಷ ರೂ. ಮೌಲ್ಯದ ಆಭರಣಗಳು ನಾಪತ್ತೆಯಾಗಿದ್ದರಿಂದ ಮಾಲೀಕರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು.

ಸಿಸಿಟಿವಿ ಪರಿಶೀಲಿಸಿದಾಗ ಗೊತ್ತಾಯ್ತು ಅಚ್ಚರಿಯ ಸತ್ಯ

ಕಳ್ಳತನವಾಗಿರಬಹುದು ಎಂದು ಅನುಮಾನಗೊಂಡ ಸಿಬ್ಬಂದಿ, ಪೊಲೀಸ್ ಠಾಣೆಗೆ ದೂರು ನೀಡುವ ಮುನ್ನ ಅಂಗಡಿಯಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಕಂಡ ದೃಶ್ಯ ನೋಡಿ ಮಾಲೀಕರು ಹಾಗೂ ಸಿಬ್ಬಂದಿಗೆ ಅಚ್ಚರಿಯಾಗಿದೆ.

ಆಭರಣ ಎಗರಿಸಿದ್ದು ‘ಕಳ್ಳ’ ಇಲಿ!

ಸಿಸಿಟಿವಿ ದೃಶ್ಯದಲ್ಲಿ ಒಂದು ಇಲಿ ಅಂಗಡಿಯೊಳಗೆ ಸದ್ದಿಲ್ಲದೆ ಓಡಾಡುತ್ತಿರುವುದು ಕಂಡುಬಂದಿದೆ. ಬಳಿಕ ಅದೇ ಇಲಿ ಚಿನ್ನಾಭರಣಗಳನ್ನು ಎಳೆದೊಯ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣಗಳನ್ನು ಎಗರಿಸಿದ ಇಲಿ, ಅವುಗಳನ್ನು ತನ್ನ ಬಿಲದಲ್ಲಿ ಸಂಗ್ರಹಿಸಿಟ್ಟಿತ್ತು.

ಇಲಿ ಆಭರಣ ಎಗರಿಸಿದ ವಿಡಿಯೋ ಇಲ್ಲಿ ನೋಡಿ

ಬಿಲ ತೋಡಿದಾಗ ಸಿಕ್ತು ಕಳವಾದ ಆಭರಣ

ಇಲಿಯ ಜಾಡು ಹಿಡಿದ ಜ್ಯುವೆಲರಿ ಶಾಪ್ ಸಿಬ್ಬಂದಿ, ಅದು ಸೇರಿಕೊಂಡಿದ್ದ ಬಿಲವನ್ನು ಪತ್ತೆಹಚ್ಚಿದ್ದಾರೆ. ಬಳಿಕ ಬಿಲವನ್ನು ತೋಡಿದಾಗ ನಾಪತ್ತೆಯಾಗಿದ್ದ ಆಭರಣಗಳು ಅಲ್ಲಿ ಪತ್ತೆಯಾಗಿವೆ. ಒಂದೆರಡು ಆಭರಣಗಳಲ್ಲ, ಬರೋಬ್ಬರಿ 10 ಉಂಗುರಗಳು ಹಾಗೂ 3 ಸರಗಳನ್ನು ಇಲಿ ತನ್ನ ಬಿಲದಲ್ಲಿ ಇಟ್ಟುಕೊಂಡಿತ್ತು. ಆಭರಣಗಳು ಸುರಕ್ಷಿತವಾಗಿ ವಾಪಸ್ ಸಿಕ್ಕಿದ್ದರಿಂದ ಜ್ಯುವೆಲರಿ ಶಾಪ್ ಮಾಲೀಕರು ಹಾಗೂ ಸಿಬ್ಬಂದಿ ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಮಳೆ ಅಭಾವಕ್ಕೆ ತುಮಕೂರು ಮಂದಿ ಕಂಗಾಲು: ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು

ಈ ಸಂಪೂರ್ಣ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಚಿತ್ರ ‘ಕಳ್ಳತನ’ ಪ್ರಕರಣದ ವಿಡಿಯೋ ಗಮನ ಸೆಳೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Thu, 30 July 26

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!