AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿಯ ಐಸ್​ಕ್ರೀಮ್​ ಮಕ್ಕಳಿಗೆ ತಿನ್ನಿಸುವ ಮುನ್ನ ಎಚ್ಚರ ಎಚ್ಚರ!

ತುಮಕೂರಿನಲ್ಲಿ ತಲೆ ಎತ್ತಿರುವ ಅನಧಿಕೃತ ಐಸ್​ಕ್ರೀಮ್ ತಯಾರಿಕಾ ಫ್ಯಾಕ್ಟರಿಗಳ ವೇಲೆ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿ ವೇಳೆ ಸ್ಪೋಟಕ ಅಂಶಗಳು ಬಯಲಾಗಿವೆ. ಸದ್ಯ ಒಂದು ಫ್ಯಾಕ್ಟರಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಸ್ತೆ ಬದಿ ಮಾರಾಟವಾಗುವ ಐಸ್​ಕ್ರೀಮ್ ತಿನ್ನುವುದ ಎಷ್ಟು ಸೇಫ್ ಎಂಬ ಆತಂಕ ಶುರುವಾಗಿದೆ.

ರಸ್ತೆ ಬದಿಯ ಐಸ್​ಕ್ರೀಮ್​ ಮಕ್ಕಳಿಗೆ ತಿನ್ನಿಸುವ ಮುನ್ನ ಎಚ್ಚರ ಎಚ್ಚರ!
ಐಸ್​ಕ್ರೀಮ್ ಫ್ಯಾಕ್ಟರಿ ಮೇಲೆ ಅಧಿಕಾರಿಗಳ ದಾಳಿ
Jagadisha B
| Edited By: |

Updated on:Dec 11, 2025 | 9:37 PM

Share

ತುಮಕೂರು, ಡಿಸೆಂಬರ್​ 11: ಚಳಿಗಾಲವಿದ್ದರೂ ಮಕ್ಕಳು ಐಸ್​ಕ್ರೀಮ್ (Ice cream) ಅನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಶಾಲೆ ಸುತ್ತಮುತ್ತವಾಗಿರಲಿ, ಯಾವುದೇ ಕಾರ್ಯಕ್ರಮ ಇರಲಿ, ಜನ ಇದ್ದಲ್ಲಿ ಐಸ್​ಕ್ರೀಮ್ ಮಾರಾಟ ಮಾತ್ರ ಜೋರಾಗಿರುತ್ತದೆ. ದಣಿದವರು ತಂಪಾಗಿಸುವ ಈ ಐಸ್​ಕ್ರೀಮ್ ಇದೀಗ ಎಷ್ಟು ಸೇಫ್ ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ತುಮಕೂರಿನ ಫ್ಯಾಕ್ಟರಿಯೊಂದರ ಮೇಲೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಆತಂಕ ಶುರುವಾಗಿದೆ.

ಮಕ್ಕಳ ಆರೋಗ್ಯಕ್ಕೆ ಕುತ್ತು ಆತಂಕ

ಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋದರೆ ಸಾಕು, ಮಕ್ಕಗಳಿಗೆ ಒಂದೇ ಹಠ, ಐಸ್​ಕ್ರೀಮ್ ಬೇಕು ಅಂತ. ಮಕ್ಕಳ ಮೇಲಿನ ಪ್ರೀತಿಗೆ ಕಂಡಕಂಡಲ್ಲಿ ಐಸ್​ಕ್ರೀಮ್ ಕೊಡಿಸುವ ಮುನ್ನ ಪೋಷಕರು ಎಚ್ಚರ ವಹಿಸುವುದ ಅಗತ್ಯವಾಗಿದೆ. ಇತ್ತ ತುಮಕೂರಿನಲ್ಲಿ ಅನುಮತಿ ಇಲ್ಲದ ಐಸ್​ಕ್ರೀಮ್ ಫ್ಯಾಕ್ಟರಿಗಳು ತಲೆ ಎತ್ತುತ್ತಿವೆ. ಪಾಲಿಕೆಯ ನಿಯಮವಿರಲಿ, ಅನುಮತಿಯೂ ಇಲ್ಲದೇ, ಇತ್ತ ಶುಚಿತ್ವ ಇಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ತರುವ ಆತಂಕ ಮೂಡಿಸಿದೆ.

ಇದನ್ನೂ ಓದಿ: ತುಮಕೂರು ಜನರಲ್ಲಿ ಆರೋಗ್ಯ ಸಮಸ್ಯೆ ಆತಂಕ: 11 ಕಾರ್ಖಾನೆಗಳಿಗೆ ಬಿತ್ತು ಬೀಗ

ಖಚಿತ ಮಾಹಿತಿ ಆಧರಿಸಿ ತುಮಕೂರು ತಹಶೀಲ್ದಾರ್ ರಾಜೇಶ್ವರಿ ನೇತೃತ್ವದಲ್ಲಿ ಗುಬ್ಬಿಗೇಟ್ ಬಳಿಯ ದಿಲ್ ಕುಶ್ ಎಂಬ ಐಸ್​ಕ್ರೀಮ್ ಫ್ಯಾಕ್ಟರಿ ಮೇಲೆ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಯೋಗೀಶ್, ಜಿಲ್ಲಾ ಆಹಾರ ಅಧಿಕಾರಿ ಹರೀಶ್ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸ್ಪೋಟಕ ಅಂಶಗಳು ಬಯಲಾಗಿವೆ. ಫ್ಯಾಕ್ಟರಿಯಲ್ಲಿ ಯಾವುದೇ ಶುಚಿತ್ವ ಇಲ್ಲದೇ ಇರುವುದು, ಪರವಾನಗಿ ಇಲ್ಲದಿರುವುದು ಕಂಡುಬಂದಿದೆ. ಈ ಮೂಲಕ ಆಹಾರ ಇಲಾಖೆ ಫ್ಯಾಕ್ಟರಿಗೆ ದಂಡ ಹಾಕಿದರೇ, ಪಾಲಿಕೆ ಆರೋಗ್ಯಾಧಿಕಾರಿ ಬೀಗ ಜಡಿದಿದ್ದಾರೆ.

ಫ್ಯಾಕ್ಟರಿಗೆ ಬೀಗ

ಅಧಿಕಾರಿಗಳ ಮಾಹಿತಿ ಪ್ರಕಾರ ಕಳೆದ ಆರು ತಿಂಗಳಿಂದ ಐಸ್​​ಕ್ರೀಮ್ ಫ್ಯಾಕ್ಟರಿ ನಡೆಸಲಾಗುತ್ತಿದ್ದು, ಬಿಹಾರ್ ಮೂಲದ ಸಿಬ್ಬಂದಿ ಕಾರ್ಯ ನಿರ್ವಹಿಸುತಿದ್ದಾರೆ. ಜನವಾಸಿ ಸ್ಥಳದಲ್ಲಿ ಅನುಮತಿ ಇಲ್ಲದೇ ಫ್ಯಾಕ್ಟರಿ ನಡೆಸಲಾಗುತಿದ್ದು, ಇದರ ಮಾಲೀಕರು ಯಾರೆಂಬುವುದು ಇನ್ನು ತಿಳಿದುಬಂದಿಲ್ಲ. ಹೀಗಾಗಿ ಮಾಲೀಕರ ಪತ್ತೆಗೆ ಮುಂದಾದ ಪಾಲಿಕೆ ಸದ್ಯ ಫ್ಯಾಕ್ಟರಿಗೆ ಬೀಗಹಾಕಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: ದುಶ್ಚಟಕ್ಕೆ ಒಳಗಾದವರ ಮನಃಪರಿವರ್ತನೆಗೆ ಬರುತ್ತಿದ್ದಾನೆ ಗೆಳೆಯ: ಏನಿದು ಸನ್ಮಿತ್ರ ಯೋಜನೆ?

ಸದ್ಯ ಒಂದು ಐಸ್​​ಕ್ರೀಮ್ ಫ್ಯಾಕ್ಟರಿ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಇಷ್ಟೆಲ್ಲಾ ಅವಾಂತರ ಕಣ್ಣಿಗೆ ಕಂಡಿದ್ದು, ಜಿಲ್ಲೆಯಲ್ಲಿರುವ ಇತರೆ ಐಸ್​​ಕ್ರೀಮ್ ಫ್ಯಾಕ್ಟರಿಗಳ ತಯಾರಿಕಾ ಪ್ರಕ್ರಿಯೆ ಮೇಲೆ ಈಗ ಅನುಮಾನ ಮೂಡಿದೆ. ಹೀಗಾಗಿ ಒಟ್ಟಾರೆ ಐಸ್​​ಕ್ರೀಮ್ ಫ್ಯಾಕ್ಟರಿಗಳ ಅಂಕಿಅಂಶಗಳ ಜೊತೆಗೆ ಪಾಲಿಕೆ ನಿಯಮ, ಅನುಮತಿಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Thu, 11 December 25

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ