AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆ, ಪೋಷಕರಲ್ಲಿ ಆತಂಕ

ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ಎಷ್ಟೋತ್ತಾದರೂ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ.

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆ, ಪೋಷಕರಲ್ಲಿ ಆತಂಕ
ನಾಪತ್ತೆಯಾದ ಮಕ್ಕಳು
ಆಯೇಷಾ ಬಾನು
|

Updated on:May 22, 2023 | 9:36 AM

Share

ತುಮಕೂರು: ಒಂದೇ ಗ್ರಾಮದ 4 ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು(Tumkur) ಜಿಲ್ಲೆಯ ಶಿರಾ(Sira) ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ(Children Missing). ಒಂದೇ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು ಗ್ರಾಮದಲ್ಲೀಗ ಆತಂಕ ಆವರಿಸಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು.

ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ಎಷ್ಟೋತ್ತಾದರೂ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದ್ರೆ ಏನು ಪ್ರಯೋಜನವಾಗಿಲ್ಲ. ಊರೆಲ್ಲಾ ಹುಡುಕಿದರೂ ಮಕ್ಕಳು ಸಿಗದ ಕಾರಣ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಇಲ್ಲಿ ಅಚ್ಚರಿ ಎಂದರೆ ನಾಪತ್ತೆಯಾಗಿರುವ ಎಲ್ಲರೂ 15-16 ವರ್ಷದ ವಯಸ್ಸಿನವರಾಗಿದ್ದಾರೆ. ಒಂದೇ ಗ್ರಾಮದ, ಒಂದೇ ವಯಸ್ಸಿನ ಅಂತರವಿರುವ 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ. ಸದ್ಯ ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಇಳಿದಿದ್ದಾರೆ.

ನಾಪತ್ತೆಯಾದವರಲ್ಲಿ ಮಂಜುಳಾ-ಮಧು ಕುಮಾರ್ ಟ್ವಿನ್ಸ್ ಮಕ್ಕಳು. ಮಕ್ಕಳು ಊರಿಯಿಂದ ಸೀದಾ ಬೆಂಗಳೂರಿಗೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರಿಗೆ ಯಾಕೆ ಹೋದರೂ ಯಾರು ಇವರನ್ನು ಕರೆಸಿಕೊಂಡರೆಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಶೋಧ ನಡೆಸುತ್ತಿದ್ದು,ಮಕ್ಕಳು ಸಿಕ್ಕ ಬಳಿಕವಷ್ಟೇ ಸತ್ಯ ಹೊರಬರಲಿದೆ.

ಇದನ್ನೂ ಓದಿ: ಮೊಮ್ಮಗನಿಗೆ 12ನೇ ತರಗತಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಇನ್ನು ಮತ್ತೊಂದೆಡೆ ಶಿರಾ ಶಾಸಕ ಟಿ ಬಿ ಜಯಚಂದ್ರ ಅವರು ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಕ್ಕಳ ಚಿತ್ರಗಳನ್ನು ಫೋಸ್ಟ್ ಮಾಡಿ, ಘಟನೆ ಸಂಬಂಧ ನಾನು  ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರ ಸಹಕಾರ ಕೂಡ ನಿರೀಕ್ಷಿತ ಎಂದು ಮನವಿ ಮಾಡಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:57 am, Mon, 22 May 23

Follow Us
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್