AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿ ಲಿಂಕ್ ಕೆನಾಲ್​ಗೆ 3 ಹಿಡಿ ಮಣ್ಣು ಹಾಕುವ ಮೂಲಕ ಹೋರಾಟಕ್ಕೆ ಚಾಲನೆ, ಏನಿದು ಯೋಜನೆ? ಏಕೆ ವಿರೋಧ?

ಹೇಮಾವತಿ ಎಕ್ಸ್​ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ವಿರೋಧಿಸಿ ‘ನಾಲೆಗೆ ಮೂರು ಹಿಡಿ ಮಣ್ಣು ಹಾಕುವ ಮೂಲಕ ಸ್ವಾಮೀಜಿಗಳು, ಶಾಸಕರು ಹಾಗೂ ಸಾರ್ವಜನಿಕರು ಸಾಂಕೇತಿಕವಾಗಿ ಹೋರಾಟಕ್ಕೆ ಚಾಲನೆ ನೀಡಿದ್ದಾರೆ. ಹಾಗಾದರೆ ಏನಿದು, ಯಾರ ಯೋಜನೆ, ಯಾಕಿಷ್ಟು ವಿರೋಧ? ಈ ಎಲ್ಲದರ ಕುರಿತು ಮಾಹಿತಿ ಇಲ್ಲಿದೆ.

ಹೇಮಾವತಿ ಲಿಂಕ್ ಕೆನಾಲ್​ಗೆ 3 ಹಿಡಿ ಮಣ್ಣು ಹಾಕುವ ಮೂಲಕ ಹೋರಾಟಕ್ಕೆ ಚಾಲನೆ, ಏನಿದು ಯೋಜನೆ? ಏಕೆ ವಿರೋಧ?
ಹೇಮಾವತಿ ಲಿಂಕ್ ಕೆನಾಲ್​ಗೆ 3 ಹಿಡಿ ಮಣ್ಣು ಹಾಕುವ ಮೂಲಕ ಹೋರಾಟಕ್ಕೆ ಚಾಲನೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 16, 2024 | 3:33 PM

Share

ತುಮಕೂರು, ಮೇ.16: ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಅವರ ಕನಸಿನ ಯೋಜನೆ. ಬರೋಬ್ಬರಿ ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ ಈಗಾಗಲೇ ಶಂಕುಸ್ಥಾಪನೆ ನೆರವೇರಿದ್ದು, ಕಾಮಗಾರಿ ಕೂಡ ಆರಂಭವಾಗಿದೆ. ಆದ್ರೆ ಇದೀಗ ಈ ಯೋಜನೆಗೆ ಕಲ್ಪತರು ನಾಡು ತುಮಕೂರಿ(Tumakur)ನಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಚುನಾವಣೆಯಿದೆ ಅಂತಾ ಇಷ್ಟು ದಿನ ಸುಮ್ಮನಿದ್ದ ಜಿಲ್ಲೆಯ ನಾಯಕರು ಇದೀಗ ಪಕ್ಷಾತೀತವಾಗಿ ಬೃಹತ್ ಹೋರಾಟ ನಡೆಸಲು ಮುಂದಾಗಿದ್ದಾರೆ.

ಹೇಮಾವತಿ ಎಕ್ಸ್​ಪ್ರೆಸ್ ಲಿಂಕ್ ಕೆನಾಲ್ ಯೋಜನೆ

ಹೋರಾಟ ಮತ್ತಷ್ಟು ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರೋ ಅದೊಂದು ಯೋಜನೆ. ಹೇಮಾವತಿ ನೀರನ್ನ ಕುಣಿಗಲ್ ಮತ್ತು ಮಾಗಡಿ ತಾಲೂಕಿನ 33 ಕೆರೆಗಳಿಗೆ ನೀರು ಹರಿಸುವ ಉದ್ದೇಶದಿಂದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆ ಇದಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹೋದರ ಡಿಕೆ ಸುರೇಶ್ ಅವರ ಗೆಲುವಿಗೆ ಸಹಕಾರಿಯಾಗುತ್ತದೆ ಎನ್ನುವ ಉದ್ದೇಶದಿಂದ ತರಾತುರಿಯಲ್ಲಿಯೇ ಈ ಯೋಜನೆಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದರು.

ಇದನ್ನೂ ಓದಿ:‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ

ಹೇಮಾವತಿ ನೀರಿಗೂ ಕುತ್ತು?

ಇದೀಗ ಈ ಯೋಜನೆಯ ಕಾಮಗಾರಿ ಕೂಡ ಆರಂಭವಾಗಿದೆ. ಆದ್ರೆ, ಈ ಯೋಜನೆಯ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ. ಕಲ್ಪತರು ನಾಡು ತುಮಕೂರಿನ ಜನರ ಪಾಲಿಗೆ ಹೇಮಾವತಿ ನೀರು ಅಮೃತದ ಸಮಾನ. ಹೇಮಾವತಿ ಇಲ್ಲದಿದ್ದರೆ ಜಿಲ್ಲೆಯ ಜನರಿಗೆ ಕುಡಿಯೋದಕ್ಕೂ ನೀರು ಇರುತ್ತಿರಲಿಲ್ಲ. ಹೀಗಾಗಿ ಜಿಲ್ಲೆಯ ಬಹುತೇಕ ತಾಲೂಕುಗಳ ಜನರು ತಮ್ಮೆಲ್ಲ ಅಗತ್ಯತೆಗಳಿಗೂ ಹೇಮಾವತಿ ನೀರನ್ನೇ ನೆಚ್ಚಿಕೊಂಡಿದ್ದಾರೆ. ಆದ್ರೆ , ಈ ಹೇಮಾವತಿ ನೀರಿಗೂ ಕುತ್ತು ಬರುತ್ತಾ ಅನ್ನೋ ಆತಂಕ ಜಿಲ್ಲೆಯ ಜನರಲ್ಲಿ ಶುರುವಾಗಿದೆ.

ಜಿಲ್ಲೆಯಲ್ಲಿ ತೀವ್ರಗೊಂಡ ವಿರೋಧ

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆಗೆ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸುಂಕಾಪುರದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಾವಿರಾರು ಸಂಖ್ಯೆಯ ರೈತರ ಸಮ್ಮುಖದಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದ್ದು, ಕಾಮಗಾರಿ ನಡೆಸದಂತೆ ತಡೆಹಿಡಿಯಲು ಕೆನಾಲ್ ಯೋಜನೆ ವಿರೋಧಿ ಹೋರಾಟ ಸಮಿತಿ ಮುಂದಾಗಿದೆ. ಹೇಮಾವತಿ ನೀರು ನಮ್ಮ ನೀರು, ನಮ್ಮ ಹಕ್ಕು ಎಂಬ ಕೂಗಿನೊಂದಿಗೆ ಹೋರಾಟಕ್ಕೆ ನಾಂದಿ ಹಾಡಲಾಗಿದೆ. ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು, ತುಮಕೂರು ಗ್ರಾಮಾಂತರ ರೈತರು ಹೋರಾಟದಲ್ಲಿ ಭಾಗಿಯಾಗಿದ್ದು, ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ, ಬಿಜೆಪಿ ಶಾಸಕ ಬಿ. ಸುರೇಶ್ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಜಿಲ್ಲೆಯ ಹಾಲಿ, ಮಾಜಿ ಶಾಸಕರುಗಳು ಸೇರಿದಂತೆ ಹಲವು ನಾಯಕರು ಕೈ ಜೋಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​