AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ

ತುಮಕೂರು ನಗರದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಬಟವಾಡಿ-ಮಲ್ಲಸಂದ್ರ ನಡುವಿನ 12 ಕಿ.ಮೀ ದ್ವಿಪಥ ರಸ್ತೆಯನ್ನು 86 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹತ್ತು ವರ್ಷಗಳಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದ್ದ ಈ ಮಾರ್ಗ ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada
Jagadisha B
| Edited By: |

Updated on: Feb 01, 2026 | 6:54 PM

Share

ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ.

ರಸ್ತೆ ಇಕ್ಕಟ್ಟಿನಿಂದ ವಾಹನ ಸವಾರರಿಗೆ ಕಿರಿಕಿರಿ

ತುಮಕೂರು ನಗರದಿಂದ ಭೀಮಸಂದ್ರವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ಸವಾರರಿಗೆ ಕೊಂಚ ಕಿರಿಕಿರಿಯಾಗಿತ್ತು. ಈ ಮಾರ್ಗ ರಾಷ್ಟ್ರೀಯ ಹೆದ್ದಾರಿಯಾದರೂ ಸಹ ಅಗಲೀಕರಣವಾಗದೇ ಹಾಗೆ ಉಳಿದಿತ್ತು. ಕಳೆದ ಹತ್ತು ವರ್ಷಗಳಿಂದ ಅಗಲೀಕರಣದ ನಿರೀಕ್ಷೆಯಲ್ಲೇ ಉಳಿದಿತ್ತು. ರಸ್ತೆ ಇಕ್ಕಟ್ಟಿನಿಂದ ದಿನ ನಿತ್ಯ ವಾಹನ ಸವಾರರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಇದೀಗ ಆ ಕಿರಿಕಿರಿಗೆ ಅಂತ್ಯ ಹಾಡುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ

ಇತ್ತೀಚೆಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಮೂಲಕ ಹಲವು ವರ್ಷಗಳ ಕನಸು ನನಸಾಗಿದೆ. ಸುಮಾರು 13 ಕಿ.ಮೀ ದೂರದವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ನಡೆಯಲಿದ್ದು, ಈ ಯೋಜನೆಗೆ ಒಟ್ಟು 86 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ. ನಾಲ್ಕು ಲೇನ್ ರಸ್ತೆ ನಿರ್ಮಾಣದಿಂದ ಸಂಚಾರ ಮತ್ತಷ್ಟು ಸುಗಮವಾಗಲಿದೆ.

ಇನ್ನು ಈ ಹೆದ್ದಾರಿ ಅಗಲೀಕರಣದಿಂದ ತುಮಕೂರು ನಗರದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ. ವಾಣಿಜ್ಯ, ಸಾರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಿಂಗಳಲ್ಲಿ 15 ಮಂದಿ ಸಾವು: ಮೃತ್ಯುಕೂಪವಾಯ್ತಾ ತುಮಕೂರು ರಾಷ್ಟ್ರೀಯ ಹೆದ್ದಾರಿ?

ಒಟ್ಟಿನಲ್ಲಿ ಹಲವು ವರ್ಷಗಳ ಕಾಯುವಿಕೆಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ, ಕೊನೆಗೂ ಅಗಲೀಕರಣ ಕಾಮಗಾರಿ ಆರಂಭಿಸಿದೆ. ಈ ಮೂಲಕ ತುಮಕೂರು ನಗರದ ಸಂಚಾರ ವ್ಯವಸ್ಥೆಗೆ ಹೊಸ ಆಯಾಮ ನೀಡಲಿದೆ ಅನ್ನೊದು ಎಲ್ಲರ ಮಾತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ