AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಮೋದಿ ಕಾರ್ಯಕ್ರಮ: ಕುಡಿಯಲು ನೀರು, ಊಟವಿಲ್ಲದೆ ಪರದಾಡಿದ ಪೊಲೀಸ್ ಸಿಬ್ಬಂದಿ

ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ತುಮಕೂರು ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳಗಳು ಭದ್ರತೆ ನೇತೃತ್ವ ವಹಿಸಿದ್ದಾರೆ. ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ತುಮಕೂರಿನಲ್ಲಿ ಮೋದಿ ಕಾರ್ಯಕ್ರಮ: ಕುಡಿಯಲು ನೀರು, ಊಟವಿಲ್ಲದೆ ಪರದಾಡಿದ ಪೊಲೀಸ್ ಸಿಬ್ಬಂದಿ
ಆಹಾರದ ಪೊಟ್ಟಣಕ್ಕಾಗಿ ಮುಗಿಬಿದ್ದ ಪೊಲೀಸ್ ಸಿಬ್ಬಂದಿ
TV9 Web
| Edited By: |

Updated on:Feb 05, 2023 | 6:03 PM

Share

ತುಮಕೂರು: ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ತುಮಕೂರು (Tumakuru) ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳು ಭದ್ರತೆ ನೇತೃತ್ವವಹಿಸಿದ್ದು, 19 ಡಿವೈಎಸ್​ಪಿ, 119 ಸಿಪಿಐ, 239 ಪಿಎಸ್​ಐ, 1202 ಎಎಸ್​ಐ, ಹೆಡ್​​ಕಾನ್ಸ್​ಟೇಬಲ್, 400 ಕಾನ್ಸ್​ಟೇಬಲ್, ಹೋಮ್​ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 2ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಕ್ಷಣಾ ಕವಚದಂತೆ ಕಾರ್ಯನಿರ್ವಹಿಸುವ ಪೊಲೀಸರಿಗೆ ಸರಿಯಾದ ಊಟದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಪರಿಣಾಮ ಅನ್ನ ಮತ್ತು ನೀರಿಗಾಗಿ ಸಿಬ್ಬಂದಿ ಪರದಾಡುವಂತಾಯಿತು.

ನಾಳೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ ಅವರು ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್‌ಎಎಲ್‌ ನೂತನ ಘಟಕ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆದರೆ ಕಾರ್ಯಕ್ರಮದ ಆಯೋಜಕರು ಸಿಬ್ಬಂದಿಗಳಿಗೆ ಊಟ, ನೀರಿನ ವ್ಯವಸ್ಥೆ ಸರಿಯಾಗಿ ಮಾಡದ ಪರಿಣಾಮ ನಿನ್ನೆ ರಾತ್ರಿಯಿಂದಲೂ ಸಿಬ್ಬಂದಿ ಸರಿಯಾಗಿ ಊಟ ಸಿಗದೆ ಪರದಾಟ ನಡೆಸಿದ್ದಾರೆ. ಅಲ್ಲದೆ, ಊಟದ ಪೊಟ್ಟಣ, ನೀರು ಪಡೆಯಲು ಪೊಲೀಸ್ ಸಿಬ್ಬಂದಿ ಮುಗಿಬಿದ್ದರು. ಎರಡು ದಿನದಿಂದ ಭದ್ರತೆಗಾಗಿ ನಿಯೋಜನೆಗೊಂಡಿರುವ ಪೊಲೀಸರು ಬಿಸಿಲಿನಲ್ಲಿ ನಿಂತಿದ್ದರೂ ಕನಿಷ್ಠ ನೀರಿನ ವ್ಯವಸ್ಥೆ ಕೂಡ ಮಾಡದೆ ಆಯೋಜಕರು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Chopper Factory: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

ನಾಳೆ ತುಮಕೂರಿಗೆ ಪ್ರಧಾನ ಮಂತ್ರಿ ಆಗಮಿಸುತ್ತಿರುವ ಹಿನ್ನಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್​ಗೆ ಸಂಚರಿಸುವಂತೆ ಹಾಗೂ ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಎಂಬಲ್ಲಿ 615 ಎಕರೆ ಜಾಗದಲ್ಲಿ ಈ ಹೆಲಿಕಾಪ್ಟರ್ ಘಟಕ ನಿರ್ಮಾಣವಾಗಿದೆ. ಹೆಲಿಪ್ಯಾಡ್, ಫ್ಲೈಟ್ ಹ್ಯಾಂಗಾರ್, ಅಡ್ಮಿನ್ ಕಟ್ಟಡ ಸೇರಿ ಕೆಲವಾರು ಸೌಲಭ್ಯಗಳನ್ನು ಈಗ ನಿರ್ಮಿಸಲಾಗಿದೆ. ಸದ್ಯ ನಾಳೆಯಿಂದ ಮೊದಲ ಹಂತದ ಕಾರ್ಯಾಚರಣೆಗಳು ನಡೆಯುತ್ತವೆ ಎನ್ನಲಾಗಿದೆ. 2016ರಲ್ಲಿ ಪ್ರಧಾನಿಯವರೇ (PM Narendra Modi) ಈ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೆಚ್​ಎಎಲ್ ಬಳಿ ಭಾರತೀಯ ಮಿಲಟರಿಗೆ ಯುದ್ಧ ಹೆಲಿಕಾಪ್ಟರ್ ನಿರ್ಮಿಸುವ ಬಹಳಷ್ಟು ಯೋಜನೆಗಳಿವೆ. ಬೆಂಗಳೂರಿನಲ್ಲಿರುವ ಹೆಚ್​ಎಲ್​ನ ಮುಖ್ಯ ತಯಾರಕಾ ಸಂಕೀರ್ಣ ಸಾಕಾಗದೇ ಇರುವುದರಿಂದ ತುಮಕೂರಿನಲ್ಲಿ ಹೊಸದಾದ ಬೃಹತ್ ಘಟಕ ನಿರ್ಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sun, 5 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ