AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಮೋದಿ ಕಾರ್ಯಕ್ರಮ: ಕುಡಿಯಲು ನೀರು, ಊಟವಿಲ್ಲದೆ ಪರದಾಡಿದ ಪೊಲೀಸ್ ಸಿಬ್ಬಂದಿ

ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ತುಮಕೂರು ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳಗಳು ಭದ್ರತೆ ನೇತೃತ್ವ ವಹಿಸಿದ್ದಾರೆ. ನಾಳೆ ಭದ್ರತೆಗೆ ಒಟ್ಟು 1,600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ತುಮಕೂರಿನಲ್ಲಿ ಮೋದಿ ಕಾರ್ಯಕ್ರಮ: ಕುಡಿಯಲು ನೀರು, ಊಟವಿಲ್ಲದೆ ಪರದಾಡಿದ ಪೊಲೀಸ್ ಸಿಬ್ಬಂದಿ
ಆಹಾರದ ಪೊಟ್ಟಣಕ್ಕಾಗಿ ಮುಗಿಬಿದ್ದ ಪೊಲೀಸ್ ಸಿಬ್ಬಂದಿ
TV9 Web
| Updated By: Rakesh Nayak Manchi|

Updated on:Feb 05, 2023 | 6:03 PM

Share

ತುಮಕೂರು: ನಾಳೆ (ಫೆ.6) ಕಲ್ಪತರು ನಾಡು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ತುಮಕೂರು (Tumakuru) ಎಸ್​ಪಿ ಸೇರಿದಂತೆ ಒಟ್ಟು 6 ಎಸ್​ಪಿಗಳು ಭದ್ರತೆ ನೇತೃತ್ವವಹಿಸಿದ್ದು, 19 ಡಿವೈಎಸ್​ಪಿ, 119 ಸಿಪಿಐ, 239 ಪಿಎಸ್​ಐ, 1202 ಎಎಸ್​ಐ, ಹೆಡ್​​ಕಾನ್ಸ್​ಟೇಬಲ್, 400 ಕಾನ್ಸ್​ಟೇಬಲ್, ಹೋಮ್​ಗಾರ್ಡ್, 14 ಡಿಎಆರ್ ಮತ್ತು 12 ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 2ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಕ್ಷಣಾ ಕವಚದಂತೆ ಕಾರ್ಯನಿರ್ವಹಿಸುವ ಪೊಲೀಸರಿಗೆ ಸರಿಯಾದ ಊಟದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಪರಿಣಾಮ ಅನ್ನ ಮತ್ತು ನೀರಿಗಾಗಿ ಸಿಬ್ಬಂದಿ ಪರದಾಡುವಂತಾಯಿತು.

ನಾಳೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ ಅವರು ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್‌ಎಎಲ್‌ ನೂತನ ಘಟಕ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆದರೆ ಕಾರ್ಯಕ್ರಮದ ಆಯೋಜಕರು ಸಿಬ್ಬಂದಿಗಳಿಗೆ ಊಟ, ನೀರಿನ ವ್ಯವಸ್ಥೆ ಸರಿಯಾಗಿ ಮಾಡದ ಪರಿಣಾಮ ನಿನ್ನೆ ರಾತ್ರಿಯಿಂದಲೂ ಸಿಬ್ಬಂದಿ ಸರಿಯಾಗಿ ಊಟ ಸಿಗದೆ ಪರದಾಟ ನಡೆಸಿದ್ದಾರೆ. ಅಲ್ಲದೆ, ಊಟದ ಪೊಟ್ಟಣ, ನೀರು ಪಡೆಯಲು ಪೊಲೀಸ್ ಸಿಬ್ಬಂದಿ ಮುಗಿಬಿದ್ದರು. ಎರಡು ದಿನದಿಂದ ಭದ್ರತೆಗಾಗಿ ನಿಯೋಜನೆಗೊಂಡಿರುವ ಪೊಲೀಸರು ಬಿಸಿಲಿನಲ್ಲಿ ನಿಂತಿದ್ದರೂ ಕನಿಷ್ಠ ನೀರಿನ ವ್ಯವಸ್ಥೆ ಕೂಡ ಮಾಡದೆ ಆಯೋಜಕರು ನಿರ್ಲಕ್ಷ್ಯ ತೋರಿದ್ದಾರೆ.

ಇದನ್ನೂ ಓದಿ: Chopper Factory: ತುಮಕೂರಿನಲ್ಲಿ ದೇಶದ ಅತಿದೊಡ್ಡ ಹೆಲಿಕಾಪ್ಟರ್ ಫ್ಯಾಕ್ಟರಿ: ಸೋಮವಾರ ಪ್ರಧಾನಿಯಿಂದ ಉದ್ಘಾಟನೆ

ನಾಳೆ ತುಮಕೂರಿಗೆ ಪ್ರಧಾನ ಮಂತ್ರಿ ಆಗಮಿಸುತ್ತಿರುವ ಹಿನ್ನಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್​ಗೆ ಸಂಚರಿಸುವಂತೆ ಹಾಗೂ ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಎಂಬಲ್ಲಿ 615 ಎಕರೆ ಜಾಗದಲ್ಲಿ ಈ ಹೆಲಿಕಾಪ್ಟರ್ ಘಟಕ ನಿರ್ಮಾಣವಾಗಿದೆ. ಹೆಲಿಪ್ಯಾಡ್, ಫ್ಲೈಟ್ ಹ್ಯಾಂಗಾರ್, ಅಡ್ಮಿನ್ ಕಟ್ಟಡ ಸೇರಿ ಕೆಲವಾರು ಸೌಲಭ್ಯಗಳನ್ನು ಈಗ ನಿರ್ಮಿಸಲಾಗಿದೆ. ಸದ್ಯ ನಾಳೆಯಿಂದ ಮೊದಲ ಹಂತದ ಕಾರ್ಯಾಚರಣೆಗಳು ನಡೆಯುತ್ತವೆ ಎನ್ನಲಾಗಿದೆ. 2016ರಲ್ಲಿ ಪ್ರಧಾನಿಯವರೇ (PM Narendra Modi) ಈ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೆಚ್​ಎಎಲ್ ಬಳಿ ಭಾರತೀಯ ಮಿಲಟರಿಗೆ ಯುದ್ಧ ಹೆಲಿಕಾಪ್ಟರ್ ನಿರ್ಮಿಸುವ ಬಹಳಷ್ಟು ಯೋಜನೆಗಳಿವೆ. ಬೆಂಗಳೂರಿನಲ್ಲಿರುವ ಹೆಚ್​ಎಲ್​ನ ಮುಖ್ಯ ತಯಾರಕಾ ಸಂಕೀರ್ಣ ಸಾಕಾಗದೇ ಇರುವುದರಿಂದ ತುಮಕೂರಿನಲ್ಲಿ ಹೊಸದಾದ ಬೃಹತ್ ಘಟಕ ನಿರ್ಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sun, 5 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ