ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

TV9 Digital Desk

| Edited By: guruganesh bhat

Updated on:Oct 08, 2021 | 6:34 PM

ಕುಣಿಗಲ್ ತಾಲೂಕಿನಲ್ಲಿ ‘ಸಾಹೇಬ್ರು ನಿನ್ನ ಕರೀತಿದ್ದಾರೆ ಬಾ’ ಎಂದು ಕರೆದೊಯ್ದು ಚಾಕು ತೋರಿಸಿ ಅತ್ಯಾಚಾರವೆಸಗಿ ಚಿನ್ನಾಭರಣ ದೋಚಿದ್ದ ಆರೋಪ ಬಂಧಿತ ವ್ಯಕ್ತಿಯ ಮೇಲಿದೆ.

ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ
ಸಾಂಕೇತಿಕ ಚಿತ್ರ
Follow us

ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯೋರ್ವನನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ (37) ಎಂಬಾತನೇ ಬಂಧಿತ ವ್ಯಕ್ತಿ. ಆಗಸ್ಟ್ 1ರಂದು ಕುಣಿಗಲ್ ತಾಲೂಕಿನಲ್ಲಿ ‘ಸಾಹೇಬ್ರು ನಿನ್ನ ಕರೀತಿದ್ದಾರೆ ಬಾ’ ಎಂದು ಕರೆದೊಯ್ದು ಚಾಕು ತೋರಿಸಿ ಅತ್ಯಾಚಾರವೆಸಗಿ ಚಿನ್ನಾಭರಣ ದೋಚಿದ್ದ ಆರೋಪ ಬಂಧಿತ ವ್ಯಕ್ತಿಯ ಮೇಲಿದೆ. ಆರೋಪಿ ಪ್ರದೀಪ್ ಮಹಿಳೆ ಬಳಿ ಇದ್ದ 40 ಗ್ರಾಂ ಚಿನ್ನದ ಸರ, ಮೊಬೈಲ್ ಮತ್ತು ಎಟಿಎಂ ಕಾರ್ಡ್ ದೋಚಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಮೈಸೂರು ಕೋರ್ಟ್​ನಲ್ಲಿ 2016ರಲ್ಲಿ ಸ್ಪೋಟ ಪ್ರಕರಣ; ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪಿತ್ತ ಕೋರ್ಟ್

ಬೆಂಗಳೂರು: 2016ರ ಆಗಸ್ಟ್ 6ರಂದು ಮೈಸೂರಿನ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಬೆಂಗಳೂರಿನ ಎನ್ಐಎ ಕೋರ್ಟ್‌ ತೀರ್ಪು ನೀಡಿದೆ. ನೈನಾರ್ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೈಮಾನ್ ತಪ್ಪಿತಸ್ಥರೆಂದು ಕೋರ್ಟ್ ತೀರ್ಪಿತ್ತಿದೆ. ಮೈಸೂರಿನ ಜಿಲ್ಲಾ ಕೋರ್ಟ್‌ನ ಶೌಚಾಲಯದಲ್ಲಿ ಅಡುಗೆ ಕುಕ್ಕರ್‌ನಲ್ಲಿ ಅಪರಾಧಿಗಳು ಬಾಂಬ್ ಸ್ಫೋಟಿಸಿದ್ದರು.

ಇದನ್ನೂ ಓದಿ: 

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

ತುಮಕೂರು ಬೆಂಗಳೂರಿನ ಸ್ಯಾಟಲೈಟ್ ಟೌನ್ ಆಗಿ ಬದಲಾಗಬಹುದು: ಬಸವರಾಜ ಬೊಮ್ಮಾಯಿ

ತಾಜಾ ಸುದ್ದಿ

Related Stories

Click on your DTH Provider to Add TV9 Kannada