AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಶಿಕ್ಷಕ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚನ್ನನಕುಂಟೆ ಗ್ರಾಮದ ಹಳ್ಳದಲ್ಲಿ ಶಿಕ್ಷಕ ಓರ್ವ ಕೊಚ್ಚಿಹೋಗಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಶಿಕ್ಷಕ
ಹಳ್ಳದಲ್ಲಿ ಕೊಚ್ಚಿ ಹೋದ ಶಿಕ್ಷಕ ಆರಿಫ್‌ವುಲ್ಲಾ
TV9 Web
| Edited By: |

Updated on: Aug 02, 2022 | 10:14 PM

Share

ತುಮಕೂರು: ಶಿರಾ (Sira) ತಾಲೂಕಿನ ಚನ್ನನಕುಂಟೆ ಗ್ರಾಮದ ಹಳ್ಳದಲ್ಲಿ ಶಿಕ್ಷಕ (Teacher) ಓರ್ವ ಕೊಚ್ಚಿಹೋಗಿದ್ದಾರೆ. ರಾತ್ರಿ ಸುರಿದ ಬಾರಿ ಮಳೆಯಿಂದ ತುಂಬಿ ಹರಿಯುತಿದ್ದ ಚಂದನಕುಂಟೆ ಹಳ್ಳ ತುಂಬಿ ಹರಿಯುತ್ತಿತ್ತು. ದಾವೂದ್ ಪಾಳ್ಯ ಸರ್ಕಾರಿ ಶಾಲೆಯ ಶಿಕ್ಷಕ ಆರಿಫ್‌ವುಲ್ಲಾ ಶಾಲೆ ಮುಗಿಸಿ ಶಿರಾಗೆ ವಾಹನದಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ಹಳ್ಳ ದಾಟುವಾಗ ಹಳ್ಳದ ನೀರಿನ ರಬಸಕ್ಕೆ ವಾಹನ ಸಮೇತ ಕೊಚ್ಚಿ ಹೋಗಿದ್ದಾರೆ. ಕೊಚ್ಚಿಹೋದ ಆರಿಫ್‌ವುಲ್ಲಾಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶಿರಾ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆ‌ ನೀರಲ್ಲಿ ಕೊಚ್ಚಿಹೋದ ಕಾರ್ಮಿಕ: ಮಳೆಯಿಂದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕಿನ ಹುತ್ರಿದುರ್ಗ ಬಳಿಯ ಶಿವಪುರ ಗ್ರಾಮದಲ್ಲಿ  ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದಾಪುರ ತಾಂಡ್ಯ ಮೂಲದ  ನಾಗರಾಜು‌ (28) ಮೃತ ಕಾರ್ಮಿಕ. ನಾಗರಾಜು, ಶಿವಪುರ ಗ್ರಾಮದ ಬಳಿ ಚೆಕ್ ಡ್ಯಾಮ್ ನಿರ್ಮಾಣಕ್ಕಾಗಿ ಕೂಲಿ ಕೆಲಸಕ್ಕೆಂದು ಬಂದಿದ್ದನು.

ಚೆಕ್ ಡ್ಯಾಮ್ ಬಳಿಯಲ್ಲೇ ಶೆಡ್​ನಲ್ಲಿ ನಾಗರಾಜು ಇದ್ದನು. ಮಳೆ ಹೆಚ್ಚಾದ ಪರಿಣಾಮ ಶಿವಪುರ, ದೀಪಾಂಬುದಿ ಕೆರೆ ಸಂಪರ್ಕಿಸುವ ನಾಲೆ ತುಂಬಿ ಹರಿಯುತ್ತಿತ್ತು. ಈ ವೇಳೆ ನಾಗರಾಜು ಮೂತ್ರ ವಿಸರ್ಜನೆಗೆ ತೆರಳಿದ್ದನು. ಯುವಕ ಕಾಲು ಜಾರಿ ನಾಲೆಯೊಳಗೆ ಬಿದ್ದು ನೀರಿನ ರಭಸಕ್ಕೆ ಕೊಚ್ವಿ ಹೋಗಿದ್ದಾನೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡಲು ತೆರಳಿದ್ದ ಬಾಲಕರು ನೀರುಪಾಲು

ಚಿಕ್ಕಬಳ್ಳಾಪುರ: ಅವಳಿ ಜವಳಿ ಸೇರಿದಂತೆ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.  ರಾಮ(10) ಲಕ್ಷ್ಮಣ(10) ಹಾಗೂ ಪ್ರಜ್ವಲ್ ಮೃತ ಬಾಲಕರು. ಬಾಲಕರು ಶಾಲೆಯಿಂದ ಮನೆಗೆ ಬಂದ ನಂತರ ಆಟವಾಡಲು ತೆರಳಿದ್ದರು.

ಬಾಲಕರು  ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ. ಸ್ಥಳಿಯರು ಮೂವರು ಬಾಲಕರ ಶವಗಳನ್ನು ಮೇಲೇತ್ತಿದ್ದಾರೆ. ವೆಂಕಟೇಶ ಎಂಬುವರ ಅವಳಿ ಜವಳಿ ಮಕ್ಕಳು. ಮತ್ತು ಮುನಿರಾಜು ಎಂಬುವರ ಮಗ ಪ್ರಜ್ವಾಲ್ ಸಾವನ್ನಪ್ಪಿದ್ದಾರೆ. ಕೆಂಚಾರ್ಲಹಳ್ಳಿ‌ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

ಮೀನು ಹಿಡಿಯಲು ತೆರಳಿದ್ದ ತಂದೆ, ಮಗ ನೀರುಪಾಲು

ಕಲಬುರಗಿ: ಜಲಾಶಯದಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ, ಮಗ ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಂನಲ್ಲಿ ನಡೆದಿದೆ.  ಚಂದ್ರಂಪಳ್ಳಿಯ ರಾಜಪ್ಪ(45), ಮಹೇಶ್(12) ನೀರುಪಾಲಾದವರು. ತಂದೆ, ಮಗನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್