AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿಗೆ ಬೆಂಗಳೂರು ಉತ್ತರ ಅಂತ ಮರುನಾಮಕರಣಕ್ಕೆ ಭಾರಿ ವಿರೋಧ

ಬ್ರ್ಯಾಂಡ್ ಬೆಂಗಳೂರಿಗೆ ರಾಮನಗರ ಸೇರುಸುತ್ತಿದ್ದಂತೆ ಈಗ ತುಮಕೂರಿನ ಹೆಸರು ಪ್ರಸ್ತಾಪವಾಗುತ್ತಿದೆ. ಇತ್ತೀಚೆಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ತುಮಕೂರಿಗೆ ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವ ಬಗ್ಗೆ ಮಾತನಾಡಿದ್ದರು. ಆದರೆ, ಈ ಜಿ. ಪರಮೇಶ್ವರ್ ಅವರ ಹೇಳಿಕೆಗೆ ವಿರೋಧ ವ್ಯಕ್ತವಾಗಿದ್ದು, ತುಮಕೂರನ್ನು ಬೆಂಗಳೂರಿಗೆ ಸೇರಲು ಬಿಡುವುದಿಲ್ಲ ಎಂಬ ಮಾತು ಕೇಳಿ ಬಂದಿದೆ.

ತುಮಕೂರಿಗೆ ಬೆಂಗಳೂರು ಉತ್ತರ ಅಂತ ಮರುನಾಮಕರಣಕ್ಕೆ ಭಾರಿ ವಿರೋಧ
ಶಾಸಕ ಸುರೇಶ್​ ಗೌಡ
Jagadisha B
| Edited By: |

Updated on:Jun 14, 2025 | 4:12 PM

Share

ತಮಕೂರು, ಜೂ.14: ಇತ್ತೀಚೆಗೆ ರಾಮನಗರ (Ramnagar) ಜಿಲ್ಲೆಗೆ ಬೆಂಗಳೂರು ದಕ್ಷಿಣ (Bengaluru South) ಅಂತ ಮರುನಾಮಕರಣ ಮಾಡಲಾಯಿತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಮರುನಾಮಕರ ಮಾಡಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ (G Parmeshwara) ಅವರು ತಮಕೂರಿಗೆ (Tumakuru) ಬೆಂಗಳೂರು ಉತ್ತರ (Bengaluru North) ಎಂದು ಮರುನಾಮಕರಣ ಮಾಡಲು ಮುಂದಾಗಿದ್ದಾರೆ. ಆದರೆ, ತುಮಕೂರಿಗೆ ಬೆಂಗಳೂರು ಉತ್ತರ ಮರುನಾಮಕರಣಕ್ಕೆ ವಿರೋಧ ವ್ಯಕ್ತವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಲ್ಪತರು ನಾಡು ತುಮಕೂರಿಗೆ ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂದು ಮಾಧ್ಯಮಗಳ ಮುಂದೆ ಹೇಳಿದ್ದರು. ಗೃಹ ಸಚಿವರ ಹೇಳಿಕೆಗೆ ವಿರೋಧ ವ್ಯಕ್ತವಾಗಿದ್ದು, ಇದು ರಿಯಲ್ ಎಸ್ಟೇಟ್ ಮಾಫಿಯಾ ಮಾಡುವ ಕೆಲಸ ಅಂತ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ.

ತುಮಕೂರಿಗೆ ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಸುರೇಶ್ ಗೌಡ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜನರನ್ನು ಯಾಮಾರಿಸುತಿದ್ದಾರೋ ಅಥವಾ ಮಕ್ಮಲ್ ಟೋಪಿ ಹಾಕುತಿದ್ದಾರೋ ಗೊತ್ತಿಲ್ಲ. ಬೆಂಗಳೂರು ಉತ್ತರ ಎಂದ ತಕ್ಷಣ ಅಭಿವೃದ್ಧಿಯಗಲ್ಲ. ಕೇವಲ ಹೆಸರು ಮಾತ್ರ ಬದಲಾಗುತ್ತದೆ ಅಷ್ಟೇ. ತುಮಕೂರಿಗೆ ಅದರದ್ದೇ ಆದ ಇತಿಹಾಸವಿದೆ. ತಮಕೂರಿಗೆ ಬೆಂಗಳೂರು ಉತ್ತರ ಅಂತ ಮರುನಾಮಕರಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Image
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
Image
ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಸಂಪುಟ ಒಪ್ಪಿಗೆ: ಹಠ ಸಾಧಿಸಿ ಗೆದ್ದ DKS
Image
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತ: ಟೋಲ್ ಎಷ್ಟು?

ಇದನ್ನೂ ನೋಡಿ: ರಾಮನಗರ ಇವತ್ತಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಸಿಕೊಳ್ಳುವುದು: ಡಿಕೆ ಶಿವಕುಮಾರ್, ಡಿಸಿಎಂ

ಇಲ್ಲಿ ಭೂಮಿ ನೀಡದ ಕಾರಣ ಕೈಗಾರಿಕೆಗಳು ನೆರೆ ರಾಜ್ಯಗಳಿಗೆ ಹೊಗುತ್ತಿವೆ. ಈ ನಡುವೆ ಬೆಂಗಳೂರು ಉತ್ತರ ಅಂದ ತಕ್ಷಣ ಇಲ್ಲಿ ಬಂದು ಹೂಡಿಕೆ ಮಾಡಲು ಜನ ಮೂರ್ಖರಲ್ಲ. ಜೊತೆಗೆ ತುಮಕೂರಿನ ಕೆಲ ಹೊರಾಟಗಾರರು ಸಹ ಈ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಬ್ರ್ಯಾಂಡ್ ಬೆಂಗಳೂರಿಗೆ ತುಮಕೂರು ಸೇರಿಸುವ ಬದಲು ತುಮಕೂರನ್ನೇ ಬ್ರ್ಯಾಂಡ್ ಮಾಡಿ. ಯಾವುದೇ ಕಾರಣಕ್ಕೂ ಈ ನಿರ್ಧಾರ ಒಪ್ಪುವಂತದಲ್ಲ. ಇದಕ್ಕೆ ವಿರೋಧವಿದೆ ಎಂದರು. ಇನ್ನು ವಿದೇಶದಲ್ಲಿರುವವರಿಗೆ ತುಮಕೂರು ಬದಲಿಗೆ ಬೆಂಗಳೂರು ಉತ್ತರ ಎಂದರೆ ತುಂಬಾ ವ್ಯತ್ಯಾಸವಿರುತ್ತೆ ಎಂಬ ಗೃಹ ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟ ಶಾಸಕ ಸುರೇಶ್, ಇಡೀ ಕರ್ನಾಟಕವನ್ನೇ ಬೆಂಗಳೂರು ಎಂದು ನಾಮಕರಣ ಮಾಡಿ ಘೋಷಿಸಿ. ಕರ್ನಾಟಕ ಹೆಸರೇ ಬದಲಾಯಿಸಿಬಿಟ್ಟರೆ ಎಲ್ಲವೂ ಬೆಂಗಳೂರೆಂದೇ ಆಗಿಬಿಡತ್ತೆ ಅಂತ ಕೌಂಟರ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 14 June 25

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ