AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು!

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ಸೇವಿಸಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಸೈನೆಡ್ ಅಂಶ ಇರುವ ಚಿಗುರು ವಿಷವಾಗಿ ಪರಿಣಮಿಸಿ ಕುರಿಗಳು ಮೃತಪಟ್ಟಿವೆ ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕುರಿಗಾಹಿಗಳು ಮತ್ತು ರೈತರು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಮನವಿ ಮಾಡಲಾಗಿದೆ.

ತುಮಕೂರು: ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು!
ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು!
Jagadisha B
| Edited By: |

Updated on: Jan 03, 2026 | 10:15 AM

Share

ತುಮಕೂರು, ಜನವರಿ 03: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಗ್ರಾಮದ ಜಂಪಕ್ಕ ಎಂಬುವರಿಗೆ ಸೇರಿದ ಸುಮಾರು 200ಕ್ಕೂ ಅಧಿಕ ಕುರಿಗಳ ಹಿಂಡಿನಲ್ಲಿ 50ಕ್ಕೂ ಹೆಚ್ಚು ಕುರಿ ಮರಿಗಳು ಮೃತಪಟ್ಟಿವೆ.

ಲಕ್ಷಾಂತರ ರೂಪಾಯಿ ನಷ್ಟ

ಪ್ರತಿದಿನದಂತೆ ಮೊನ್ನೆ ಕುರಿಗಳನ್ನು ಮೇವಿಗಾಗಿ ಹೊಲದತ್ತ ಕರೆದೊಯ್ಯಲಾಗಿತ್ತು. ಎಂದಿನಂತೆ ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು ಬೀಳತೊಡಗಿದ್ದು, ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದರಿಂದ ಕುರಿಗಾಹಿಗೆ ಭಾರೀ ಆಘಾತವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ

ವಿಷಯ ತಿಳಿಯುತ್ತಿದ್ದಂತೆ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆಯನ್ನು ಸೇವಿಸಿರುವುದು ಪತ್ತೆಯಾಗಿದೆ. ವೈದ್ಯಾಧಿಕಾರಿ ಅರ್ಕೆರಪ್ಪ ಅವರು, ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ ಕುರಿಗಳ ಮಾದರಿ ಸ್ಯಾಂಪಲ್‌ಗಳನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿದ್ದು, ಅಂತಿಮ ವರದಿ ನಿರೀಕ್ಷಿಸಲಾಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ರೈತರು ಹಾಗೂ ಕುರಿಗಾಹಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಪಶು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ